ಮಹಿಳೆ ಸ್ವಾವಲಂಬಿಯಾಗಲಿ: ರಾಮಚಂದ್ರ
Team Udayavani, Dec 26, 2021, 3:04 PM IST
ಶಹಾಪುರ: ಮಹಿಳೆಯರು ಯಾರ ಮೇಲೂ ಅವಲಂಬಿತರಾಗದೇ ತಮ್ಮ ಸಾಮರ್ಥ್ಯ, ಕೌಶಲ್ಯ, ಜ್ಞಾನ ಬಳಸಿಕೊಂಡು ಸ್ವಾವಲಂಬಿಯಾಗಿ ಬದುಕು ರೂಪಿಸಿಕೊಳ್ಳಬೇಕು ಎಂದು ಕಲಬುರಗಿಯ ಎಸ್.ಜಿ. ಯೋಜನಾಧಿಕಾರಿ ರಾಮಚಂದ್ರ ಹೇಳಿದರು.
ನಗರದ ಶಿವಂ ಶಿಕ್ಷಣ, ಸಾಂಸ್ಕೃತಿಕ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಮತ್ತು ಸಿಯುಐ ಕೋ-ಆಪರೇಟಿವ್ ಫೀಲ್ಡ್ ಪ್ರಾಜೆಕ್ಟ್ ಫಾರ್ ಎಸ್.ಸಿ. ಎಸ್ಟಿ ಕಲಬುರಗಿ ಆಶ್ರಯದಲ್ಲಿ ನಗರದ ಸಂಸ್ಥೆಯ ಕಚೇರಿಯಲ್ಲಿ ಕೌಶಲ್ಯ ತರಬೇತಿ ಪಡೆದ ಫಲಾನುಭವಿಗಳಿಗೆ ಪ್ರಮಾಣಪತ್ರ ವಿತರಣೆ ಮತ್ತು ಉಚಿತ ಟೇಲರಿಂಗ್ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರು ಕೌಶಲ್ಯ ತರಬೇತಿ ಪಡೆದು ಸ್ವತಃ ದುಡಿದು ಬದುಕುವ ಶಕ್ತಿ ಬೆಳೆಸಿಕೊಳ್ಳಬೇಕು. ಆ ನಿಟ್ಟಿನಲ್ಲಿ ಸಂಸ್ಥೆ ಮಹಿಳೆಯರಿಗೆ ವಿವಿಧ ಕೆಲಸ ಕಾರ್ಯಗಳಲ್ಲಿ ಅನುಕೂಲ ಕಲ್ಪಿಸಲಿದೆ. ಟೇಲರಿಂಗ್ ಸೇರಿದಂತೆ ಇತರೆ ವೃತ್ತಿ ಕೌಶಲ್ಯ ಕಲಿಯಬೇಕು. ಅದರಿಂದ ಬದುಕಿಗೆ ಆಶ್ರಯವಾಗಲಿದೆ ಎಂದರು.
ಇದೇ ಸಂದರ್ಭದಲ್ಲಿ ಐಶ್ವರ್ಯ, ಲಕ್ಷ್ಮೀ, ತಾಯಮ್ಮ ಸೇರಿದಂತೆ ಇತರೆ ಫಲಾನುಭವಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಈ ವೇಳೆ ನಿವೃತ್ತ ಸಿಡಿಪಿಒ ಟಿ.ಪಿ. ದೊಡ್ಮನಿ, ನಿವೃತ್ತ ಶಿಕ್ಷಕ ಎನ್.ಎಸ್. ಬಿರಾದಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…
Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ
Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…
Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ
Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.