![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Jul 11, 2024, 9:54 PM IST
ಔರಾದ: ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮುಡಾ) ಅವ್ಯವಹಾರ ಕುರಿತು ಸಮಗ್ರ ತನಿಖೆಯಾಗಬೇಕೆಂದು ಶಾಸಕ ಪ್ರಭು ಚವ್ಹಾಣ್ ಅವರು ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಮೈಸೂರು ಅಭಿವೃದ್ಧಿ ಪ್ರಾಧಿಕಾರದಿಂದ ದಲಿತರು, ಪರಿಶಿಷ್ಟ ಸಮುದಾಯಕ್ಕೆ ಮೀಸಲಿಟ್ಟ ನಿವೇಶನಗಳನ್ನು ತಮಗೆ ಬೇಕಾದಂತೆ ಹಂಚಲಾಗಿದೆ. ಇದು ಸರ್ಕಾರದಿಂದ ಜನತೆಗೆ ಆಗಿರುವ ಮಹಾ ಮೋಸವಾಗಿದೆ ಎಂದು ಆರೋಪಿಸಿದ್ದಾರೆ.
ಪ್ರಭಾವಿಗಳು ತಮಗೆ ಬೇಕಾದವರಿಗೆ ನಿವೇಶನ ಹಂಚಿಕೆ ಮಾಡಿರುವ ಆರೋಪ ಇರುವುದರಿಂದ ಈ ಪ್ರಕರಣ ತೀವ್ರ ಗಂಭೀರ ಸ್ವರೂಪವನ್ನು ಪಡೆದುಕೊಂಡಿದೆ. ಹಾಗಾಗಿ ಪಕ್ಷಾತೀತವಾಗಿ ತನಿಖೆ ನಡೆಸುವ ಅವಶ್ಯಕತೆಯಿದೆ ಎಂದಿದ್ದಾರೆ.
ಸರ್ಕಾರ ಏನು ಮಾಡಿದರೂ ಯಾರೂ ಕೇಳುವುದಿಲ್ಲ ಎಂದುಕೊಂಡಂತೆ ಕಾಣುತ್ತಿದ್ದು, ಒಂದರ ಮೇಲೊಂದು ಹಗರಣಗಳನ್ನು ನಡೆಸಲಾಗುತ್ತಿದೆ. ಬಡವರು, ಹಿಂದುಳಿದವರ ಪರವಾಗಿ ಪರವಾಗಿ ಮಾತನಾಡುವ ಜನಪ್ರತಿನಿಧಿಗಳೇ ಬಡ ಜನತೆಗೆ ಅನ್ಯಾಯ ಮಾಡುತ್ತಿದ್ದಾರೆ. ಮುಡಾ ಅವ್ಯವಹಾರದಲ್ಲಿ ತೊಡಗಿದ ಪ್ರತಿಯೊಬ್ಬರ ವಿರುದ್ಧ ಕಠಿಣ ಕ್ರಮವಾಗಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್ ಪ್ರಕರಣದ ಆರೋಪಿಗಳ ಗುರುತು ಪತ್ತೆ
Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ
Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು
Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ
Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.