ಸಾಮಾಜಿಕ ಜಾಲತಾಣ ಸದ್ಬಳಕೆ ಮಾಡಿಕೊಳ್ಳಿ
Team Udayavani, Feb 11, 2022, 12:33 PM IST
ಬೀದರ: ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಸಾಮಾಜಿಕ ಜಾಲತಾಣದ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರವೇ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಸಂಘಟನಾ ಕಾರ್ಯದರ್ಶಿ ಸಚಿನ್ ಗಾಣಿಗೇರ್ ಕಿವಿಮಾತು ಹೇಳಿದರು.
ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡ ಪರ ಸಂಘಟನೆಗಳ ಒಕ್ಕೂಟ) ವತಿಯಿಂದ ನಗರದ ಡಾ| ಚನ್ನಬಸವ ಪಟ್ಟದ್ದೇವರು ಪ್ರಸಾದ ನಿಲಯದಲ್ಲಿ ಆಯೋಜಿಸಿದ್ದ ಸಾಮಾಜಿಕ ಜಾಲತಾಣ ಕುರಿತ ಜಿಲ್ಲಾಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ಮಾಹಿತಿಯ ತ್ವರಿತ ವಿನಿಮಯಕ್ಕೆ ಫೇಸ್ಬುಕ್, ವಾಟ್ಸ್ಆ್ಯಪ್, ಟ್ವಿಟ್ಟರ್, ಇನ್ಸ್ಟ್ರಾಗ್ರಾಂ ಮೊದಲಾದ ಸಾಮಾಜಿಕ ಜಾಲತಾಣಗಳು ಪ್ರಮುಖ ಮಾಧ್ಯಮಗಳಾಗಿವೆ ಎಂದು ತಿಳಿಸಿದರು.
ಕೋವಿಡ್ ಕಾರಣ ವೇದಿಕೆ ಸಾಮಾಜಿಕ ಜಾಲತಾಣ ಬಳಕೆಗೆ ಹೆಚ್ಚು ಆದ್ಯತೆ ನೀಡಿದೆ. ಕನ್ನಡ ನಾಡು, ನುಡಿ, ನೆಲ, ಜಲ ಸಂರಕ್ಷಣೆ ಚಟುವಟಿಕೆಗಳಿಗೆ ಸಾಮಾಜಿಕ ಜಾಲತಾಣವನ್ನು ಸಮರ್ಥವಾಗಿ ಬಳಸಿಕೊಳ್ಳುತ್ತಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಜನಪ್ರತಿನಿ ಧಿಗಳು ಹಾಗೂ ಸರ್ಕಾರದ ಕಣ್ಣು ತೆರೆಸುವ ಕೆಲಸವನ್ನೂ ಮಾಡುತ್ತಿದೆ ಎಂದು ಹೇಳಿದರು.
ವೇದಿಕೆಯ ಜಿಲ್ಲಾಧ್ಯಕ್ಷ ಸೋಮನಾಥ ಮುಧೋಳ ಮಾತನಾಡಿ, ರಾಜ್ಯ, ದೇಶ, ವಿದೇಶಗಳ ವಿದ್ಯಮಾನಗಳನ್ನು ಕ್ಷಣಾರ್ಧದಲ್ಲೇ ಅರಿಯುವಲ್ಲಿ ಸಾಮಾಜಿಕ ಜಾಲತಾಣಗಳು ಸಹಕಾರಿಯಾಗಿವೆ. ಕನ್ನಡ ನಾಡು, ನುಡಿ, ಅಸ್ಮಿತೆಗೆ ಧಕ್ಕೆ ಉಂಟಾದಾಗ, ಸಾಮಾಜಿಕ ಜಾಲತಾಣಗಳಲ್ಲಿ ಅದನ್ನು ಖಂಡಿಸಬೇಕು. ಸಂದೇಶ ಸಂಬಂಧಪಟ್ಟವರಿಗೆ ತಲುಪಿಸುವವರೆಗೂ ವಿರಮಿಸಬಾರದು ಎಂದು ಹೇಳಿದರು.
ಸಾಮಾಜಿಕ ಜಾಲತಾಣದಲ್ಲಿ ಸಾಧಕ-ಬಾಧಕಗ ಳೆರಡೂ ಇವೆ. ಸಾಮಾಜಿಕ ಜಾಲತಾಣವನ್ನು ಒಳ್ಳೆಯ ಕೆಲಸಕ್ಕಷ್ಟೇ ಬಳಸಿಕೊಳ್ಳಬೇಕು. ಸುಳ್ಳು ಸುದ್ದಿಗಳನ್ನು ಹರಡಬಾರದು. ಸಮಾಜದ ಸ್ವಾಸ್ಥ್ಯ ಕಾಪಾಡಲು ನೆರವಾಗಬೇಕು ಎಂದು ತಿಳಿಸಿದರು. ವಿಭಾಗದ ಜಿಲ್ಲಾ ಸಂಚಾಲಕ ಗೋಪಾಲ್ ಕುಲಕರ್ಣಿ ಮಾತನಾಡಿದರು.
ಉದ್ಯಮಿ ಶಿವಾನಂದ ಜಾಬಾ, ಸಾಹಿತಿ ಸಂಜೀವಕುಮಾರ ಅತಿವಾಳೆ, ಪ್ರಮುಖರಾದ ಸಂಜುಕುಮಾರ ಸ್ವಾಮಿ, ಅರವಿಂದ ಕುಲಕರ್ಣಿ, ಶ್ರೀಕಾಂತ ಸ್ವಾಮಿ, ಪ್ರೊ| ಉಮಾಕಾಂತ ಮೀಸೆ, ಸಂತೋಷ ಚೆಟ್ಟಿ, ಉದಯಕುಮಾರ ಅಷ್ಟೂರೆ, ಸೋಮಶೇಖರ ಲಸೂನೆ, ಈಶ್ವರ ಖಂಡಾರೆ, ಶಿವರುದ್ರ ತೀರ್ಥ, ದತ್ತಾತ್ರಿ ಅಲ್ಲಂಕೇರೆ, ತುಕಾರಾಮ ಜಾನಕನೋರ, ಸಚಿನ್ ಕತ್ತೆ, ರಾಜಕುಮಾರ ಎಡವೆ, ಗಣೇಶ ಪಾಟೀಲ, ಸಚಿನ್ ತಿಬಶೆಟ್ಟಿ ಇದ್ದರು. ನಾಗಪ್ಪ ಜಾನಕನೋರ ನಿರೂಪಿಸಿದರು. ವಿಶ್ವನಾಥ ಗೌಡ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.