ಉದ್ಯೋಗ ಯೋಜನೆ ದೇಶಕ್ಕೆ ಮಾದರಿ


Team Udayavani, May 1, 2022, 3:28 PM IST

19model

ಬೀದರ: ಟಾಟಾ ಸಹಯೋಗದೊಂದಿಗೆ 150 ಕಡೆಗಳಲ್ಲಿ ಅನುಷ್ಠಾನ ಗೊಂಡಿರುವ ಉದ್ಯೋಗ ಯೋಜನೆ ಇಂದು ದೇಶಕ್ಕೆ ಮಾದರಿಯಾಗಿದೆ. ತರಬೇತಿದಾರರು ಇತ್ತೀಚಿನ ಕೈಗಾರಿಕೆಯ ಬಹು ಕೌಶಲ ತಂತ್ರಜ್ಞಾನ ಕಲಿಯಲು ಉದ್ಯೋಗ ಯೋಜನೆ ಬಲು ಸಹಕಾರಿಯಾಗಿದೆ ಎಂದು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ನಿರ್ದೇಶಕ ಯೋಗೇಶ್ವರ ಎಸ್‌. ಹೇಳಿದರು.

ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಿದ್ದ ಕೌಶಲ ಅಭಿವೃದ್ಧಿ ಜೀವನ ಸಮೃದ್ಧಿ ತರಬೇತಿದಾರರಿಗೆ ವಿಶೇಷ ಮಾರ್ಗದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಉದ್ಯೋಗ ಯೋಜನೆಯಡಿ ಮೆಕ್ಯಾನಿಕ ಎಲೆಕ್ಟ್ರಿಕ್‌ ವೆಹಿಕಲ್‌ ಹಾಗೂ ರೋಬೆಟಿಕ ಕೋರ್ಸ್‌ ಪ್ರಾರಂಭಿಸಿದೆ. ಇನ್ನು ಅನೇಕ ಅಲ್ಪಾವಧಿ ಕೋರ್ಸ್‌ಗಳು ಸಹ ಉಚಿತವಾಗಿ ಕಲ್ಪಿಸಲಾಗುವುದು. ಕೋಟ್ಯಂತರ ಬೆಲೆಬಾಳುವ ಯಂತ್ರೋಪಕರಣ ಹಾಗೂ ಅತ್ಯಂತ ಬೆಲೆ ಬಾಳುವ ಸಾಪ್ಟವೇರ್‌ ಅಳವಡಿಸಿದೆ. ಇದೊಂದು ತಂತ್ರಜ್ಞಾನದ ಹಬ್‌ ಆಗಬೇಕೆಂಬ ವಿಚಾರ ನಮ್ಮೆಲ್ಲರದ್ದಾಗಿದೆ ಎಂದರು.

ದೇಶದಲ್ಲೆ ಪ್ರಥಮ ಬಾರಿಗೆ ಕರ್ನಾಟಕ ಸರ್ಕಾರ ಚಾಲನೆ ಮಾಡಿದ್ದು, ಇಲ್ಲಿ ಕಲಿತ ಎಲ್ಲರಿಗೆ ಖಂಡಿತವಾಗಿ ನೌಕರಿಗಾಗಿ ಪರಿತಪಿಸುವ ಭ್ರಮೆ ಇಲ್ಲ. ಈಗಾಗಲೇ ಟಾಟಾನವರ ಜೊತೆಗೆ ಒಡಂಬಡಿಕೆ ಮಾಡಿಕೊಂಡಿದ್ದು, ಪ್ರಾಯೋಗಿಕ ಪರಿಣಿತ ಕುಶಲಕರ್ಮಿಗಳಿಗೆ ಅವರೇ ಉದ್ಯೋಗ ಕೊಡುತ್ತಾರೆ. ತಾವು ಕೇವಲ ಕಲಿಯುವುದರ ಕಡೆಗೆ ಗಮನ ಹರಿಸಬೇಕು ಎಂದು ಕರೆ ನೀಡಿದರು.

ಹಿರಿಯ ಪ್ರಾಧ್ಯಾಪಕ ಪ್ರೊ| ಅಶೋಕ ಪಾಟೀಲ ಮಾತನಾಡಿ, ಇಂದು ಶಿಕ್ಷಣಕ್ಕೆ ಬೆಲೆ ಸಿಕ್ಕು, ನೌಕರಿ ಬೇಕೆಂದರೆ ವ್ಯಕ್ತಿಯಲ್ಲಿ ಕೌಶಲ ಕರಗತವಾಗಿರಬೇಕು. ನಮ್ಮ ಕಾಲೇಜಿನ ವಿದ್ಯಾರ್ಥಿಗಳಿಗೂ ಎರಡು ವರ್ಷಗಳಿಂದ ಮೆಕ್ಯಾನಿಕಲ್‌ ಹಾಗೂ ವೆಲ್ಡಿಂಗ್‌ ಡೆಕ್ನೊಲಾಜಿ ಬಗ್ಗೆ ಇಲ್ಲಿ ಪ್ರಾಯೋಗಿಕ ಹಾಗೂ ವೃತ್ತಿ ಸಿದ್ಧಾಂತ ಹೇಳಿಕೊಡಲಾಗುತ್ತಿದೆ. ಇದರಿಂದ ತುಂಬ ಅನುಕೂಲವಾಗಿದೆ. ಇನ್ಮುಂದೆ ಕೌಶಲ ಇದ್ದವನಿಗೆ ಮಾತ್ರ ನೌಕರಿ ಎಂಬುದು ನಾವೆಲ್ಲರೂ ಅರಿಯಬೇಕಿದೆ ಎಂದು ಹೇಳಿದರು.

ಜಿಲ್ಲಾ ಐಟಿಐ ನೋಡಲ್‌ ಅಧಿಕಾರಿ ಶಿವಶಂಕರ ಟೋಕರೆ ಅಧ್ಯಕ್ಷತೆ ವಹಿಸಿ, ಅನೇಕ ಸಂಕಷ್ಟಗಳ ಮಧ್ಯೆಯು ಇಲಾಖೆಯ ಮಾರ್ಗದರ್ಶನ ಹಾಗೂ ಸ್ಥಳಿಯ ಜನಪ್ರತಿನಿಧಿಗಳ ಸಹಕಾರ ಜೊತೆಗೆ ಅನೇಕ ಕೈಗಾರಿಕೆಗಳ ಮಾನವ ಸಂಪನ್ಮೂಲ ಅಧಿಕಾರಿಗಳು ನಮ್ಮ ಆಮಂತ್ರಣಕ್ಕೆ ಮನ್ನಣೆ ನೀಡಿರುವ ಫಲವೇ ಇಂದು ನಮ್ಮ ಬೀದರ ಐಟಿಐ ಅಭಿವೃದ್ಧಿ ಹೊಂದಲು ಪ್ರಮುಖ ಕಾರಣವಾಗಿದೆ ಎಂದರು.

ನಿವೃತ್ತ ಪಾಚಾರ್ಯ ಪ್ರೊ| ರಾಜಪ್ಪ ಅವರನ್ನು ಗೌರವಿಸಿದರು. ಇಲಾಖೆಯ ಹಿರಿಯ ಉಪನಿರ್ದೇಶಕ ಕೆ.ಆರ್‌. ಹಾಲಪ್ಪ ಶೆಟ್ಟಿ, ಪ್ರಾಚಾರ್ಯರಾದ ಲಕ್ಷ್ಮೀಕಾಂತ ಭಾಲ್ಕಿ, ಶಿವಕುಮಾರ ಪಾಟೀಲ, ವೀರೇಶ ಪಾಟೀಲ, ಬಸವರಾಜ ಗುಪ್ತಾ ಸೇರಿ ಇನ್ನಿತರರಿದ್ದರು. ಜಿಲ್ಲಾಡಳಿತದಿಂದ ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆದ ಕಿರಿಯ ತರಬೇತಿ ಅಧಿಕಾರಿ ಯೂಸುಫಮಿಯ್ಯ ಜೋಜನಾ ಅವರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: The accused in the ATM robbery-shootout case have finally been identified.

Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್‌ ಪ್ರಕರಣದ ಆರೋಪಿಗಳ ಗುರುತು ಪತ್ತೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: farmer ends his life

Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.