ಅಂಗವಿಕಲರ ಬಾಳಿಗೆ ಜೀವ ನೀಡಿದ ಸಂಗೀತ

ಸಂಗೀತದಿಂದ ತಲ್ಲಣಗೊಂಡಿರುವ ಮನಸ್ಸಿಗೆ ಮುದ ನೀಡಿ ಶಾಂತಚಿತ್ತಗೊಳಿಸುವ ಅತ್ಯದ್ಭುತ ಶಕ್ತಿ ಇದೆ

Team Udayavani, Feb 17, 2021, 5:49 PM IST

ಅಂಗವಿಕಲರ ಬಾಳಿಗೆ ಜೀವ ನೀಡಿದ ಸಂಗೀತ

ಬೀದರ: ಕೃತಿ ಮತ್ತು ಶ್ರುತಿ ಸೇರಿದಾಗ ಸಂಸ್ಕೃತಿ ಹೊರಹೊಮ್ಮುತ್ತದೆ. ಸಾಹಿತ್ಯ, ಸಂಗೀತ ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ಪಂ| ಪುಟ್ಟರಾಜ ಗವಾಯಿಗಳ ಸಂಗೀತ ಸೇವೆ ಅಪ್ರತಿಮ ಎಂದು ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚನ್ನಶೆಟ್ಟಿ ನುಡಿದರು. ನಗರದ ಬಸವ ಕೇಂದ್ರದಲ್ಲಿ ಗಾನಯೋಗಿ ಸಂಗೀತ ಪರಿಷತ್‌ ಜಿಲ್ಲಾ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿಕಲಚೇತನರ ಬಾಳಿಗೆ ಸಂಗೀತ ಜೀವ ನೀಡಿದೆ. ಭಿಕ್ಷೆ ಬೇಡುವ ಅನೇಕರಿಗೆ ಸಂಗೀತ ಶಿಕ್ಷಣ ನೀಡಿ ಬಾಳಿಗೊಂದು ಬೆಳಕು ನೀಡಿರುವ ಏಕೈಕ ಸಂಸ್ಥೆ ಗದುಗಿನ ಪುಣ್ಯಾಶ್ರಮ. ಭಾಷಣ, ಉಪನ್ಯಾಸ ಸಾಕೆನಿಸಬಹುದು. ಆದರೆ ಸಂಗೀತ ಮಾತ್ರ ಬೇಕೇ ಬೇಕೆನಿಸುತ್ತದೆ. ಸಂಗೀತಕ್ಕೆ ಮನಸ್ಸು ಶಾಂತಗೊಳಿಸುವ ಶಕ್ತಿ ಇದೆ ಎಂದರು.

ಬಸವ ಕೇಂದ್ರದ ಅಧ್ಯಕ್ಷ ಶರಣಪ್ಪ ಮಿಠಾರೆ ಮಾತನಾಡಿ, ಸಂಗೀತ ಮಾನಸಿಕ ನೆಮ್ಮದಿಗೆ ಮಹಾ ಔಷಧ. ಜೀವನದಲ್ಲಿ ಸಂಕಷ್ಟ, ಬೇಜಾರು ಎದುರಿಸುವಾಗ ಸಂಗೀತಕ್ಕೆ ಮೊರೆ ಹೋಗುತ್ತಾರೆ. ಸಂಗೀತ ಇರುವ ಮನೆ ನೆಮ್ಮದಿಯ ತಾಣ ಎಂದು ಹೇಳಿದರು.

ಹುಲಸೂರಿನ ಡಾ| ಶಿವಾನಂದ ಸ್ವಾಮಿಗಳು ಸಾನ್ನಿಧ್ಯ ವಹಿಸಿ, ಪುಟ್ಟರಾಜ ಗವಾಯಿಗಳು ಜನ್ಮ ತಾಳದಿದ್ದರೆ ವಿಕಲಚೇತನರ ಬಾಳು ಶಾಶ್ವತವಾಗಿ ಕತ್ತಲಾಗಿರುತಿತ್ತು. ಜಿಲ್ಲೆಯಲ್ಲಿಯೂ ಅನೇಕ ಕಲಾವಿದರು ಸಂಗೀತ ಕ್ಷೇತ್ರಕ್ಕೆ ಅಪಾರವಾದ ಸೇವೆ ಸಲ್ಲಿಸಿದ್ದಾರೆ. ಸರ್ಕಾರ ಸಂಗೀತ ನಿಗಮ ಮಂಡಳಿ ಸ್ಥಾಪಿಸಿ ಸಂಗೀತ ಕಲಿತ ಅಂಧರ ಮತ್ತು ಅಂಗವಿಕಲರೂ ಉನ್ನತ ಸ್ಥಾನಕ್ಕೆ ಬರುವ ಹಾಗೆ ಚಿಂತನೆ ಮಾಡಲು ಸಲಹೆ ನೀಡಿದರು.

ಸಂಗೀತ ಪರಿಷತ್‌ ಜಿಲ್ಲಾಧ್ಯಕ್ಷ ಶಿವಸ್ವಾಮಿ ಚೀನಕೇರಿ ಅಧ್ಯಕ್ಷತೆ ವಹಿಸಿ, ಅಂಧರಿಗೆ ಸಂಗೀತ ಆರ್ಥಿಕ ಸದೃಢತೆ ನೀಡಬಲ್ಲದು. ಸಂಗೀತದಿಂದ ಮದವೇರಿದ ಆನೆಯೂ ಸಹ ಶಾಂತವಾಗುವುದು. ಸಂಗೀತದಿಂದ ತಲ್ಲಣಗೊಂಡಿರುವ ಮನಸ್ಸಿಗೆ ಮುದ ನೀಡಿ ಶಾಂತಚಿತ್ತಗೊಳಿಸುವ ಅತ್ಯದ್ಭುತ ಶಕ್ತಿ ಇದೆ. ಪರಿಷತ್‌ ಮುಂದಿನ ದಿನಗಳಲ್ಲಿ ಸಂಗೀತಕ್ಕೆ ಸಂಬಂಧಿತ ಚಟುವಟಿಕೆಗಳನ್ನು ನಡೆಸಲಿದೆ ಎಂದು ತಿಳಿಸಿದರು.

ಸರ್ಕಾರಿ ಐಟಿಐ ನೋಡಲ್‌ ಅಧಿಕಾರಿ ಶಿವಶಂಕರ ಟೋಕರೆ ಇನ್ನಿತರರು ಇದ್ದರು. ನವಲಿಂಗ ಪಾಟೀಲ ಪ್ರಸ್ತಾವಿಕ ಮಾತನಾಡಿದರು. ಜಗನ್ನಾಥ ನಾನಕೇರಿ,
ವಿಶ್ವೇಶ್ವರ್‌ ಹಿರೇಮಠ, ಸಂತೋಷ ಕಾಮಶೆಟ್ಟಿ, ಜನಾರ್ಧನ ವಾಘಮಾರೆ, ಶಿವಲಿಂಗ ಎರಗಲ್‌, ಚನ್ನಬಸಪ್ಪ ನೌಬಾದೆ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಪರಿಷತ್‌ ತಾಲೂಕು ಘಟಕ ರಚಿಸಿ ಮಹೇಶ ಮಜಗೆ ಅವರನ್ನು ನೇಮಿಸಲಾಯಿತು.

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: The accused in the ATM robbery-shootout case have finally been identified.

Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್‌ ಪ್ರಕರಣದ ಆರೋಪಿಗಳ ಗುರುತು ಪತ್ತೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: farmer ends his life

Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.