![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Jun 26, 2021, 1:23 PM IST
ಬೀದರ್: ಕೋಳಾರ ಕೈಗಾರಿಕಾ ಪ್ರದೇಶದ ಡ್ರಗ್ ತಯಾರಿಕಾ ಘಟಕದ ಮೇಲೆ ಬೆಂಗಳೂರು ಎನ್.ಸಿ.ಬಿ ಅಧಿಕಾರಿಗಳ ತಂಡ ದಾಳಿ ನಡೆಸಿ, 91 ಕೆ.ಜಿ ನಿಷೇಧಿತ ಆಲ್ಪಾಜೋಲಮ್ ಮಾದಕ ವಸ್ತು ಮತ್ತು 62 ಲಕ್ಷ ರೂಪಾಯಿ ನಗದು ಹಣ ಜಪ್ತಿ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ.
ಹೈದರಾಬಾದನ ಎನ್.ವಿ ರೆಡ್ಡಿ ಎಂಬುವರಿಗೆ ಸೇರಿದ ಇಂದು ಡ್ರಗ್ಸ್ ಪ್ರೈವೇಟ್ ಲಿಮಿಟೆಡ್ ಕೈಗಾರಿಕಾ ಘಟಕ ಮತ್ತು ರೆಡ್ಡಿ ಅವರ ನಿವಾಸದ ಮೇಲೆ ಎನ್ ಸಿಬಿ ಬೆಂಗಳೂರು ವಲಯಾಧಿಕಾರಿ ಅಮಿತ್ ಗವಾಟೆ ನೇತೃತ್ವದ ಅಧಿಕಾರಿಗಳ ತಂಡ ದಾಳಿ ಮಾಡಿರುವ ಮಾಹಿತಿ ಲಭ್ಯವಾಗಿದೆ. ದಾಳಿ ವೇಳೆ ಘಟಕದಲ್ಲಿ 91 ಕೆ.ಜಿ ಡ್ರಗ್ಸ್ ಮತ್ತು ನಿವಾಸದಲ್ಲಿ 62 ಲಕ್ಷ ನಗದು ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ:ಕೋವಿಡ್ 19: ಬ್ರಿಟನ್ ನಲ್ಲಿ 35 ಸಾವಿರಕ್ಕೂ ಅಧಿಕ ಡೆಲ್ಟಾ ರೂಪಾಂತರಿತ ಪ್ರಕರಣ ಪತ್ತೆ
ನಿಷೇಧಿತ ಮಾದಕ ವಸ್ತುಗಳನ್ನು ಕರ್ನಾಟಕದ ವಿವಿಧೆಡೆ, ಮಹಾರಾಷ್ಟ್ರ ಮತ್ತು ತೆಲಂಗಾಣಾಕ್ಕೆ ಸರಬರಾಜು ಮಾಡಲಾಗುತ್ತಿತ್ತು ಎಂದೆನ್ನಲಾಗಿದೆ.
ವೈ.ವಿ ರೆಡ್ಡಿ. ಎಸ್.ಮೆನನ್, ಎನ್.ವಿ.ರೆಡ್ಡಿ, ಅಮೃತ್ ಹಾಗೂ ಭಾಸ್ಕರ್ ಎಂಬುವವರು ವಶಕ್ಕೆ ಪಡೆದಿರುವ ಅಧಿಕಾರಿಗಳ ತಂಡ ವಿಚಾರಣೆ ನಡೆಸುತ್ತಿದೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.