
ಪಾರದರ್ಶಕ ಆಡಳಿತದಲ್ಲಿ ಪತ್ರಿಕೆ ಪಾತ್ರ ದೊಡ್ಡದು
Team Udayavani, Aug 20, 2022, 3:33 PM IST

ಔರಾದ: ಉತ್ತಮ ಹಾಗೂ ಪಾರದರ್ಶಕ ಸಮಾಜ ನಿರ್ಮಾಣದಲ್ಲಿ ಪತ್ರಿಕೆಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಪಶು ಸಂಗೋಪನಾ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಹೇಳಿದರು.
ಪಟ್ಟಣದ ತಾಪಂ ಕಚೇರಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಯೋಜಿಸಲಾಗಿದ್ದ ಪತ್ರಿಕಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಜನರು ಪತ್ರಿಕೆಗಳ ಮೇಲೆ ಅಪಾರ ನಂಬಿಕೆ ಇಟ್ಟಿದ್ದು, ಸುಂದರ ಸಮಾಜ ನಿರ್ಮಾಣದಲ್ಲಿ ಪತ್ರಿಕೆಗಳ ಪಾತ್ರ ಮಹತ್ವದ್ದಾಗಿದೆ. ಪಟ್ಟಣದಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕೆ ಅಗತ್ಯ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.
ಸಂಘದ ಜಿಲ್ಲಾಧ್ಯಕ್ಷ ಅಶೋಕಕುಮಾರ ಕರಂಜಿ ಮಾತನಾಡಿ, ಗಡಿಯಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತ ಪರಿಹಾರ ಒದಗಿಸಿಕೊಡುವ ನಿಟ್ಟಿನಲ್ಲಿ ಪತ್ರಕರ್ತರ ಕಾಣಿಕೆ ಅಮೋಘವಾಗಿದೆ. ಸರ್ಕಾರ ವಿವಿಧ ರೀತಿಯಲ್ಲಿ ಪತ್ರಕರ್ತರಿಗೆ ನೆರವಾಗಬೇಕಿದೆ. ಪ್ರಸ್ತುತ ಸಮಾಜದಲ್ಲಿ ಅನೇಕ ಬಗೆಯ ಮಾಧ್ಯಮಗಳ ಪ್ರವೇಶವಾಗುತ್ತಿದ್ದರೂ ನಿಖರತೆ ಮತ್ತು ಸತ್ಯ ಸಂಗತಿಗಳ ಸುದ್ದಿಗಳಿಗೆ ಜನಮನ್ನಣೆ ಇದೆ ಎಂಬುದು ಅಲ್ಲಗಳೆಯುವಂತಿಲ್ಲ ಎಂದರು.
ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ ಮಾತನಾಡಿದರು. ವೇದಮೂರ್ತಿ ಗುರುಪಾದಯ್ಯ ಶಾಸ್ತ್ರಿ ಹಾನಗಲ್ ಸಾನ್ನಿಧ್ಯ ವಹಿಸಿದ್ದರು. ಇದೇ ಸಂದರ್ಭದಲ್ಲಿ ಕಮಲನಗರ ಹಾಗೂ ಔರಾದ ತಾಲೂಕಿನ ಪತ್ರಕರ್ತರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಪಪಂ ಅಧ್ಯಕ್ಷೆ ಅಂಬಿಕಾ ಪವಾರ್, ತಹಶೀಲ್ದಾರ್ ಮಲಶೆಟ್ಟಿ ಚಿದ್ರೆ, ಹಿರಿಯ ವರದಿಗಾರ ಅಪ್ಪಾರಾವ ಸೌದಿ, ತಾಪಂ ಇಒ ಬಿರೇಂದ್ರ ಸಿಂಗ್, ಸಿಪಿಐ ಮಲ್ಲಿಕಾರ್ಜುನ ಇಕ್ಕಳಕಿ, ಅನಿಲಕುಮಾರ ದೇಶಮುಖ, ಎಂ.ಪಿ ಮುದಾಳೆ, ಸಂತೋಷ ಚಟ್ಟೆ, ಸಂಘದ ತಾಲೂಕು ಅಧ್ಯಕ್ಷ ರವೀಂದ್ರ ಮುಕ್ತೆದಾರ್, ಕಮಲನಗರ ತಾಲೂಕು ಅಧ್ಯಕ್ಷ ಮನೋಜ ಹಿರೇಮಠ, ತಾಲೂಕು ಪ್ರಧಾನ ಕಾರ್ಯದರ್ಶಿ ಬಸವರಾಜ ಶಿವಪೂಜೆ, ಮಲ್ಲಪ್ಪ ಗೌಡ, ರಾಚಯ್ಯ ಸ್ವಾಮಿ, ಶ್ರೀಕಾಂತ ಹುಂಡೇಕರ್, ಅಮರೇಶ್ವರ ಚಿದ್ರೆ, ಅಮರ ಸ್ವಾಮಿ, ಅಂಬಾದಾಸ ನಳಗೆ, ಶಾಲಿವಾನ ಉದಗಿರೆ, ಬಾಲಾಜಿ ಅಮರವಾಡಿ, ಶಿವಕುಮಾರ ಬಿರಾದಾರ್, ಅಲಿಂ ಪಾಶಾ, ಸುಧೀರ ಪಾಂಡ್ರೆ ಇದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ
MUST WATCH
ಹೊಸ ಸೇರ್ಪಡೆ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.