ಪೋಲಿಯೋ ಜಾಗೃತಿ ಮೂಡಿಸಿದ ಜಾಥಾ


Team Udayavani, Oct 25, 2020, 6:12 PM IST

Bidara-tdy-1

ಬೀದರ: ಕಲ್ಯಾಣ ಝೋನ್‌ ವ್ಯಾಪ್ತಿಯ ರೋಟರಿ ಕ್ಲಬ್‌ಗಳ ವತಿಯಿಂದ ವಿಶ್ವ ಪೋಲಿಯೋ ದಿನದ ಅಂಗವಾಗಿ ನಗರದಲ್ಲಿ ಶನಿವಾರ ನಡೆದ ಜಾಥಾ ಸಾರ್ವಜನಿಕರಲ್ಲಿ ಪೋಲಿಯೋ ಜಾಗೃತಿ ಮೂಡಿಸಿತು.

ರೋಟರಿ ವೃತ್ತದಿಂದ ಆರಂಭಗೊಂಡ ಜಾಥಾ ಜನರಲ್‌ ಕಾರ್ಯಪ್ಪ ವೃತ್ತ, ಅಂಬೇಡ್ಕರ್‌ವೃತ್ತ, ಶಿವಾಜಿ ವೃತ್ತ, ಹರಳಯ್ಯ ವೃತ್ತದ ಮೂಲಕ ಹಾಯ್ದು ಐಎಂಎ ಹಾಲ್‌ಗೆ ತಲುಪಿ ಸಮಾರೋಪಗೊಂಡಿತು.

ಜಾಥಾದಲ್ಲಿ ಪಾಲ್ಗೊಂಡಿದ್ದ ಅಧಿಕಾರಿಗಳು, ರೋಟರಿ ಕ್ಲಬ್‌ ಪದಾಧಿಕಾರಿಗಳು ಹಾಗೂ ಗಣ್ಯರು ಎಂಡ್‌ ಪೋಲಿಯೋ ನೌ ಬರಹ ಹೊಂದಿದ್ದ ಟೀ ಶರ್ಟ್‌ ಧರಿಸಿದ್ದರು. ಎರಡು ಹನಿ ಪೋಲಿಯೋಮುಕ್ತ ಜೀವನಕ್ಕಾಗಿ ಲಸಿಕೆ ಹಾಕಿಸಿ ಪೋಲಿಯೋ ತೊಲಗಿಸಿ ಎಂಬಿತ್ಯಾದಿ ಬರಹಗಳಫಲಕಗಳನ್ನು ಹಿಡಿದು ಗಮನ ಸೆಳೆದರು. ಜಾಥಾಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌. ಅವರು, ವಿಶ್ವ ಮಟ್ಟದಲ್ಲಿ ಪೋಲಿಯೋ ನಿಯಂತ್ರಿಸುವಲ್ಲಿಅಂತಾರಾಷ್ಟ್ರೀಯ ರೋಟರಿ ಸಂಸ್ಥೆ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.

ಇದೀಗ ಪೋಲಿಯೋ ಮಾದರಿಯಲ್ಲಿಯೇ ಕೋವಿಡ್ ಸೋಂಕು ತಡೆಗೆ ಶ್ರಮಿಸಬೇಕಾದ ಅಗತ್ಯ ಇದೆ. ಕೋವಿಡ್ ಮುಕ್ತಿಗೆ ಎಲ್ಲರೂ ಕೈಜೋಡಿಸಬೇಕಾಗಿದೆ ಎಂದು ತಿಳಿಸಿದರು. ಅಂತಾರಾಷ್ಟ್ರೀಯ ರೋಟರಿ ಕ್ಲಬ್‌ ವಿಶ್ವದ 200ಕ್ಕೂ ಹೆಚ್ಚು ದೇಶಗಳಲ್ಲಿ ಸಾಮಾಜಿಕ ಚಟುವಟಿಕೆಗಳಲ್ಲಿ ನಿರತವಾಗಿದೆ ಎಂದು ಅಂತಾರಾಷ್ಟ್ರೀಯ ರೋಟರಿ ಜಿಲ್ಲೆ 3160 ಗವರ್ನರ್‌ ಚಿನ್ನಪ್ಪ ರೆಡ್ಡಿ ಹೇಳಿದರು. 1988ರಲ್ಲಿ ಪೋಲಿಯೋ ಮುಕ್ತಿಗೆ ಸಂಕಲ್ಪ ತೊಟ್ಟ ರೋಟರಿ ಕ್ಲಬ್‌ ಈ ಕಾರ್ಯದಲ್ಲಿ ಬಹುತೇಕ ಯಶಸ್ವಿಯಾಗಿದೆ ಎಂದು ತಿಳಿಸಿದರು.

ರೋಟರಿ ಸಂಸ್ಥೆಯು 32 ವರ್ಷಗಳಲ್ಲಿ ಪೋಲಿಯೋ ನಿರ್ಮೂಲನೆಗೆ 15 ಸಾವಿರ ಕೋಟಿ ರೂ. ಖರ್ಚು ಮಾಡಿದೆ. ರೋಟರಿ ಶ್ರಮದಿಂದಾಗಿ ಪ್ರತಿ ವರ್ಷ ಸರಾಸರಿ 3.5 ಲಕ್ಷಮಕ್ಕಳಲ್ಲಿ ಕಂಡು ಬರುತ್ತಿದ್ದ ಪೋಲಿಯೋ ಈಗ ಕೇವಲ 129 ಮಕ್ಕಳಲ್ಲಿ ಇದೆ. ಪೋಲಿಯೋ ವಿಶ್ವದಲ್ಲಿ ಎರಡು ದೇಶಗಳಲ್ಲಿ ಮಾತ್ರ ಉಳಿದುಕೊಂಡಿದೆ ಎಂದು ಅಂತಾರಾಷ್ಟ್ರೀಯ ರೋಟರಿ ಜಿಲ್ಲೆ 3160 ಪೋಲಿಯೋ ಪ್ಲಸ್‌ ಸಮಿತಿ ಅಧ್ಯಕ್ಷ ಬಸವರಾಜ ಧನ್ನೂರ ಹೇಳಿದರು.

ಭಾರತ ಪೋಲಿಯೋ ಮುಕ್ತ ದೇಶವಾದರೂ, ನೆರೆ ದೇಶಗಳಿಂದ ಮತ್ತೆ ಬರುವ ಸಾಧ್ಯತೆ ಇರುತ್ತದೆ. ಹೀಗಾಗಿ ಇಡೀ ವಿಶ್ವದಿಂದ ಪೋಲಿಯೋ ಸಂಪೂರ್ಣವಾಗಿ ತೊಲಗುವವರೆಗೆ 5 ವರ್ಷದ ಒಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ವಿ.ಜಿ. ರೆಡ್ಡಿ, ರೋಟರಿ ಮಾಜಿ ಗವರ್ನರ್‌ ಕೆ.ಸಿ. ಸೇನನ್‌, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ| ಕೃಷ್ಣಾರೆಡ್ಡಿ, ರೋಟರಿ ಕಲ್ಯಾಣ ಝೋನ್‌ ಅಸಿಸ್ಟಂಟ್‌ ಗವರ್ನರ್‌ ಡಾ| ಜಗದೀಶ ಪಾಟೀಲ, ಐಎಂಎ ಅಧ್ಯಕ್ಷ ಡಾ| ವಿ.ವಿ. ನಾಗರಾಜ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ, ರೋಟರಿ ಕ್ಲಬ್‌ ಅಧ್ಯಕ್ಷ ಹಾವಶೆಟ್ಟಿಪಾಟೀಲ, ಕಾರ್ಯದರ್ಶಿ ರಂಜೀತ್‌ ಪಾಟೀಲ, ರೋಟರಿ ಕ್ಲಬ್‌ ಬೀದರ ಫೋರ್ಟ್‌ ಅಧ್ಯಕ್ಷ ಶೇಖರ ರಾಗಾ, ಕಾರ್ಯದರ್ಶಿ ಎಸ್‌.ಬಿ. ಚಿಟ್ಟಾ,

ರೋಟರಿ ಕ್ಲಬ್‌ ಬೀದರ ನ್ಯೂ ಸೆಂಚುರಿ ಅಧ್ಯಕ್ಷ ಸೂರ್ಯಕಾಂತ ರಾಮಶೆಟ್ಟಿ, ಕಾರ್ಯದರ್ಶಿ ಡಾ| ಕಪಿಲ್‌ ಪಾಟೀಲ, ರೋಟರಿ ಕ್ಲಬ್‌ಬೀದರ ಕ್ವೀನ್ಸ್‌ ಅಧ್ಯಕ್ಷೆ ಸುಷ್ಮಾ ಪಾಟೀಲ, ಕಾರ್ಯದರ್ಶಿ ಮೇನಕಾ ಪಾಟೀಲ, ರೋಟರಿಕ್ಲಬ್‌ ಭಾಲ್ಕಿ ಫೋರ್ಟ್‌ ಅಧ್ಯಕ್ಷ ಯುವರಾಜಜಾಧವ, ಕಾರ್ಯದರ್ಶಿ ಸಾಗರ ನಾಯಕ, ಬಸವಕಲ್ಯಾಣದ ರೋಟರಿ ಕ್ಲಬ್‌ ಅಧ್ಯಕ್ಷ ಡಾ| ಸಾಗರ ಬಸನಾಳೆ, ಕಾರ್ಯದರ್ಶಿ ಡಾ| ಸದಾನಂದ ಪಾಟೀಲ, ಇನ್ನರ್‌ ವಿಲ್‌ ಕ್ಲಬ್‌ ಅಧ್ಯಕ್ಷೆ ಭಾರತಿ ಚನಶೆಟ್ಟಿ, ಕಾರ್ಯದರ್ಶಿ ಸುನೈನಾ ಗುತ್ತಿ ಇದ್ದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನ.7ರಿಂದ ರಾಜ್ಯಾದ್ಯಂತ ‘ಅಕ್ಷರ ಜ್ಯೋತಿ’ ಯಾತ್ರೆ

Bidar: ನ.7ರಿಂದ ರಾಜ್ಯಾದ್ಯಂತ ‘ಅಕ್ಷರ ಜ್ಯೋತಿ’ ಯಾತ್ರೆ

crime

Bidar:‌ ರಸ್ತೆ ಅಪಘಾತ; ಇಬ್ಬರು ಬಲಿ; ಪ್ರಕರಣ ದಾಖಲು

4-

Bidar: ವಿಮಾನಯಾನ ಸೇವೆ ಕುರಿತಂತೆ ಈಶ್ವರ ಖಂಡ್ರೆ ಸಭೆ

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.