ತಾಪಂ-ಜಿಪಂ ಚುನಾವಣೆಗೆ ಭರ್ಜರಿ ತಯಾರಿ: ಎರಡು ಕುಟುಂಬಗಳ ಮಧ್ಯೆ ಕದನ

ಈ ಕ್ಷೇತ್ರದ ಮೇಲೆ ಕಾಂಗ್ರೆಸ್‌ ಪಕ್ಷದ ಪ್ರಭಾವ ಹೆಚ್ಚಿದೆ.

Team Udayavani, Aug 25, 2021, 6:25 PM IST

ತಾಪಂ-ಜಿಪಂ ಚುನಾವಣೆಗೆ ಭರ್ಜರಿ ತಯಾರಿ: ಎರಡು ಕುಟುಂಬಗಳ ಮಧ್ಯೆ ಕದನ

ಹುಮನಾಬಾದ: ಜಿಲ್ಲಾ ಪಂಚಾಯತ್‌ ಹಾಗೂ ತಾಲೂಕು ಪಂಚಾಯತ್‌ ಚುನಾವಣೆ ಕುರಿತು ಚುನಾವಣಾ ಆಯೋಗ ಅಧಿಕೃತವಾಗಿ ದಿನಾಂಕ ಘೋಷಣೆ ಮಾಡುವ ಮುನ್ನವೆ ಹುಮನಾಬಾದ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌-ಬಿಜೆಪಿ ಭರ್ಜರಿ ಚುನಾವಣಾ ತಯಾರಿ ನಡೆಸಿವೆ. ಕಳೆದ ನಾಲ್ಕು ದಶಕಗಳಿಂದ ಆಡಳಿತ ನಡೆಸಿದ ಪಾಟೀಲ ಪರಿವಾರದಲ್ಲಿ ಕಳೆದ ಕೆಲ ತಿಂಗಳಿಂದ ರಾಜಕೀಯವಾಗಿ ಬಿರುಕು ಮೂಡಿದ್ದು, ಇದೀಗ ಪಾಟೀಲ ಪರಿವಾರದಲ್ಲಿಯೇ ರಾಜಕೀಯ ಗುದ್ದಾಟ ನಡೆಯಲ್ಲಿದೆ.

ಬಸವಕಲ್ಯಾಣ ಉಪ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ಪಕ್ಷ ತೊರೆದು ಬಿಜೆಪಿ ಸೇರ್ಪಡೆಗೊಂಡ ಡಾ| ಸಿದ್ದಲಿಂಗಪ್ಪ ಪಾಟೀಲ ಪರಿವಾರ ಹಾಗೂ ಕಾಂಗ್ರೆಸ್‌ ಪಕ್ಷದ ಸ್ಥಳೀಯ ಶಾಸಕ ರಾಜಶೇಖರ ಪಾಟೀಲ ಪರಿವಾರ ಇದೀಗ ಖುದ್ದು ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿ ಮುಂದೆ ಬರಲ್ಲಿರುವ ಚುನಾವಣೆಗಳಲ್ಲಿ ತಮ್ಮ ಬೆಂಬಲಿಗರನ್ನು ಗೆಲ್ಲಿಸುವ ತಯಾರಿ ನಡೆಸಿದ್ದಾರೆ.

ಶಾಸಕ ರಾಜಶೇಖರ ಪಾಟೀಲ ವಿವಿಧ ಇಲಾಖೆ ಅಧಿಕಾರಿಗಳ ಜೊತೆಗೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಜನರಿಂದ ಕುಂದುಕೊರೆತಗಳನ್ನು ಆಲಿಸಿ ಸಮಸ್ಯೆಗಳು ಬಗೆಹರಿಸುವ ಪ್ರಯತ್ನ ನಡೆಸಿದ್ದಾರೆ. ಇವರಿಗೆ ವಿಧಾನ ಪರಿಷತ್‌ ಸದಸ್ಯ ಡಾ| ಚಂದ್ರಶೇಖರ ಪಾಟೀಲ, ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಭೀಮರಾವ ಪಾಟೀಲ, ಯುವ ಮುಖಂಡ ಅಭಿಷೇಕ್‌ ಪಾಟೀಲ ಪ್ರತೇಕ ತಂಡಗಳು ರಚಿಸಿಕೊಂಡು ವಿವಿಧ ಗ್ರಾಮಗಳಲ್ಲಿ ಸಂಚರಿಸಿ ಪ್ರಚಾರ ಕಾರ್ಯ ನಡೆಸಿದ್ದಾರೆ. ಯಾವುದೇ ಸಮಸ್ಯೆಗಳು ಇದ್ದರೆ ನೇರವಾಗಿ ಬಂದು ಮಾತಾಡುವಂತೆ ಜನರಿಗೆ ಮನವರಿಕೆ ಮಾಡುತ್ತಿದ್ದಾರೆ.

ಬಿಜೆಪಿಯಿಂದ ಯುವ ಮುಖಂಡ ಡಾ| ಸಿದ್ದಲಿಂಗ ಪಾಟೀಲ, ಸಹೋದರ ಸಂತೋಷ ಪಾಟೀಲ ಸೇರಿದಂತೆ ಇತರೆ ಕಾರ್ಯಕರ್ತರ ತಂಡಗಳು ರಚಿಸಿಕೊಂಡು ಹಳ್ಳಿಗಳಲ್ಲಿ ಜನರ ಸಂಪರ್ಕ ಸಾಧಿಸುವ ಕಾರ್ಯ ನಡೆಸಿದ್ದಾರೆ. ಒಂದೇ ಕುಟುಂಬದವರು ಇರುವ ಕಾರಣ ರಾಜಕೀಯ ಲೆಕ್ಕಾಚಾರಗಳು ಪರಸ್ಪರ ಕರಗತವಾಗಿ ಮಾಡಿಕೊಂಡಿದ್ದು, ಚುನಾವಣಾ ಪೂರ್ವದಲ್ಲಿಯೇ ಭರ್ಜರಿ ತಯಾರಿಗಳು ನಡೆಸಿದ್ದಾರೆ.

ಎರಡು ಕುಟುಂಬಗಳ ಮಧ್ಯೆ ಫೈಟ್‌
ಕೆಲ ತಿಂಗಳ ಹಿಂದೆ ನಡೆದ ರಾಜಕೀಯ ಬದಲಾವಣೆ ನಂತರ ಎರೆಡು ಕುಟುಂಬಗಳು ಜನರ ಮಧ್ಯೆ ತೆರಳುತ್ತಿದ್ದು, ನಿರಂತರ ಜನರ ಸಂಪರ್ಕ ಸಾಧಿಸುವಲ್ಲಿ ಪ್ರಯತ್ನ ನಡೆಸುತ್ತಿದ್ದಾರೆ. ಆದರೆ, ಬೆಂಬಲಿಗರು ಇಂದಿಗೂ ಕೂಡ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳುವಲ್ಲಿ ಗೊಂದಲದಲ್ಲಿ ಇದ್ದಾರೆ. ಸಾಮಾನ್ಯವಾಗಿ ಅಧಿಕಾರದಲ್ಲಿರುವ ಕಡೆಗಳಲ್ಲಿ ಜನರು ಹೆಚ್ಚಿನ ಒಲವು ತೋರುವುದು ಸಾಮಾನ್ಯವಾಗಿದ್ದು, 1999ರಲ್ಲಿ ನಡೆದ ವಿಧನ ಸಭೆ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಬಿಜೆಪಿ ಜಯಗಳಿಸಿ ನಂತರ ಅಧಿಕಾರ ಕಳೆದುಕೊಂಡಿದ್ದು, ನಂತದಲ್ಲಿ ಅಧಿಕಾರಕ್ಕೆ ಬಂದಿಲ್ಲ. ಈ ಕ್ಷೇತ್ರದ ಮೇಲೆ ಕಾಂಗ್ರೆಸ್‌ ಪಕ್ಷದ ಪ್ರಭಾವ ಹೆಚ್ಚಿದೆ. ಇದೀಗ ಸಿದ್ದಲಿಂಗಪ್ಪ ಪಾಟೀಲ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಮುಂದೆ ನಡೆಯಲ್ಲಿರುವ ಚುನಾವಣೆಗಳಿಂದ ಪಕ್ಷಗಳ ಬಲಾಬಲ
ಗೊತ್ತಾಗಲ್ಲಿದೆ.

*ದುರ್ಯೋಧನ ಹೂಗಾರ

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: The accused in the ATM robbery-shootout case have finally been identified.

Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್‌ ಪ್ರಕರಣದ ಆರೋಪಿಗಳ ಗುರುತು ಪತ್ತೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: farmer ends his life

Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.