
ಪಿಯು ಪರೀಕ್ಷೆ ಪಾರದರ್ಶಕವಾಗಿರಲಿ
Team Udayavani, Feb 17, 2018, 12:40 PM IST

ಬೀದರ: ಮಾರ್ಚ್ನಲ್ಲಿ ನಡೆಯುವ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯನ್ನು ಸಂಪೂರ್ಣವಾಗಿ ಪಾರದರ್ಶಕವಾಗಿ ಹಾಗೂ
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನಡೆಸಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವರಾಜ ಪಾಟೀಲ ಅವರು ಪರೀಕ್ಷಾ ಮುಖ್ಯಸ್ಥರಿಗೆ ತಾಕೀತು ಮಾಡಿದರು.
ನಗರದ ಜ್ಞಾನಸುಧಾ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಮುಖ್ಯ ಅಧಿಧೀಕ್ಷಕರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಮ್ಮ ಜಿಲ್ಲೆಯಲ್ಲಿ ಜರಗುವ ಕಟ್ಟುನಿಟ್ಟಿನ ಪರೀಕ್ಷೆಗಳು ಇತರರಿಗೆ ಮಾದರಿಯಾಗಿವೆ. ಪರೀಕ್ಷೆ ಕಾರ್ಯಕ್ಕೆ ನಿಯೋಜನೆಗೊಂಡ ಸಿಬ್ಬಂದಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸಿ, ಸಮಯ ಪಾಲನೆಯತ್ತ ಗಮನ ಹರಿಸಬೇಕು ಎಂದರು. ಮಕ್ಕಳು, ಪಾಲಕರು ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು.
ಪರೀಕ್ಷೆಯಲ್ಲಿ ಅಕ್ರಮ ನಡೆಯದಂತೆ ಇಲೆಕ್ಟ್ರಾನಿಕ್ಸ್ ಗ್ಯಾಜೆಟ್ಗಳನ್ನು ಸಂಪೂರ್ಣವಾಗಿ ನಿಷೇ ಧಿಸಬೇಕು. ವಿದ್ಯಾರ್ಥಿಗಳಿಗೆ ಅನಾನು ಕೂಲವಾಗದಂತೆ ಆಸನ ವ್ಯವಸ್ಥೆ ಏರ್ಪಡಿಸಿ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಆಗಬೇಕು.
ಅಳವಡಿಸಲಾಗಿರುವ ಸಿಸಿ ಕ್ಯಾಮೆರಾಗಳು ಬಂದ್ ಆಗದಂತೆ ಎಚ್ಚರ ವಹಿಸಬೇಕು. ಅನುದಾನ ರಹಿತ ಕಾಲೇಜುಗಳ ಪರೀಕ್ಷಾ ಕೇಂದ್ರಕ್ಕೆ ಸರ್ಕಾರಿ- ಅನುದಾನಿತ ಕಾಲೇಜು ಪ್ರಾಚಾರ್ಯರು ಮುಖ್ಯಸ್ಥರಾಗಿರುತ್ತಾರೆ. ಒಂದು ಪರೀಕ್ಷಾ ಕೋಠಡಿಯಲ್ಲಿ ಗರಿಷ್ಠ 24ರಿಂದ 30 ವಿದ್ಯಾರ್ಥಿಗಳಿಗೆ ಕೂಡುವ ವ್ಯವಸ್ಥೆ ಇರಬೇಕು. ಪ್ರಶ್ನೆಪತ್ರಿಕೆ ಖರೀದಿ ಹಾಗೂ ಮಾರಾಟ ಮಹಾಪರಾಧವಾಗಿದ್ದು, ತಪ್ಪಿತಸ್ಥರಿಗೆ ಐದು ವರ್ಷ ಜೈಲು ಶಿಕ್ಷೆ ಖಂಡಿತ ಎಂದು ಹೇಳಿದರು.
ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಹಣಮಂತರಾವ ಮೈಲಾರಿ, ಪ್ರಧಾನ ಕಾರ್ಯದರ್ಶಿ ವಿಠಲದಾಸ ಪ್ಯಾಗೆ ಹಾಗೂ ಪ್ರಾಚಾರ್ಯರಾದ ನಂದಿಹಳ್ಳಿ, ಬಸವರಾಜ ಮಠಪತಿ ಪರೀಕ್ಷಾ ವ್ಯವಸ್ಥೆ ಕುರಿತು ಮಾತನಾಡಿದರು. ಮಠಪತಿ ಕಾರ್ಯಕ್ರಮ ನಿರೂಪಿಸಿದರು. ಕಚೇರಿ ಅಧೀಕ್ಷಕ ಸಂಗನಬಸವ, ಸಿಬ್ಬಂದಿ ಮಲ್ಲಿಕಾರ್ಜುನ ಕಡೋದೆ ಸೇರಿದಂತೆ ಜಿಲ್ಲೆಯ ಪರೀಕ್ಷಾ ಮುಖ್ಯಸ್ಥರು ಇದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.