ರಮೇಶಕುಮಾರ ವಿರುದ್ಧ ಮಹಿಳಾ ಮೋರ್ಚಾ ನಿರಶನ
Team Udayavani, Dec 19, 2021, 12:24 PM IST
ಬೀದರ: ವಿಧಾನಸಭೆ ಅಧಿವೇಶನದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿರುವ ಮಾಜಿ ಸಭಾಪತಿ ರಮೇಶಕುಮಾರ ಅವರನ್ನು ಪಕ್ಷದಿಂದಲೇ ವಜಾಗೊಳಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಮಹಿಳಾ ಮೋರ್ಚಾದಿಂದ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.
ಮೋರ್ಚಾ ಜಿಲ್ಲಾಧ್ಯಕ್ಷೆ ಲುಂಬಿಣಿ ಗೌತಮ ಮತ್ತು ಪಕ್ಷದ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಕರ್ ನೇತೃತ್ವದಲ್ಲಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಘೋಷಣೆ ಕೂಗಲಾಯಿತು.
ರಮೇಶಕುಮಾರ ಹೇಳಿಕೆ ನೀಡುವ ಮೂಲಕ ಇಡೀ ಮಹಿಳಾ ಸಮಾಜಕ್ಕೆ ಅವಮಾನಿಸಿದ್ದಾರೆ. ಒಬ್ಬ ಹಿರಿಯ ಮುತ್ಸದ್ದಿ ರಾಜಕಾರಣಿಯಾಗಿ ರೇಪ್ಗೆ ಸಂಬಂಧಿಸಿದಂತೆ, ತುಲಾನಾತ್ಮಕವಾಗಿ ಆಡಿರುವ ಮಾತುಗಳಿಂದ ಪ್ರಜ್ಞಾವಂತ ಸಮಾಜ ತಲೆ ತಗ್ಗಿಸುವಂತೆ ನಡೆದುಕೊಂಡಿರುತ್ತಾರೆ ಎಂದು ಪ್ರಮುಖರು ಕಿಡಿಕಾರಿದರು.
ಪ್ರತಿಭಟನೆಯಲ್ಲಿ ಬಿಜೆಪಿ ವಿಭಾಗೀಯ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ, ಪ್ರಮುಖರಾದ ಮಾಯಾದೇವಿ ಸಿಂದನಕೇರಾ,ಪ್ರಸನ್ನಲಕ್ಷ್ಮೀದೇಶಪಾಂಡೆ, ಶೋಭಾ ತೆಲಂಗ್, ವುಲ್ಕಾವತಿ, ರೂಪಾವತಿ ಜಾಧವ, ಸಂಗೀತಾ ಅಡಕೆ, ಪ್ರೇಮಾ ತಲವಾರ, ಸರಸ್ವತಿ ಜಮಾದರ, ಮಹಾನಂದ ಪಾಟೀಲ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ
Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ
BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ
Kerala: ವಿಡಿಯೋ ಅಪ್ಲೋಡ್ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ
Explainer: ವಯನಾಡ್ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್ ಅಖಾಡಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.