ಗ್ರಂಥಾಲಯ ಓದುಗ-ಕೃತಿ ನಡುವಿನ ಸೇತುವೆ

ಮತದ ಸೋಂಕಿಲ್ಲದ, ಲಿಂಗ ಭೇಧವಿಲ್ಲದ ಎಲ್ಲರ ಅರಿವಿನ ಜ್ಞಾನದ ವಿಸ್ತಾರದ ಜಾಗವಿದೆ.

Team Udayavani, Nov 17, 2021, 6:04 PM IST

ಗ್ರಂಥಾಲಯ ಓದುಗ-ಕೃತಿ ನಡುವಿನ ಸೇತುವೆ

ಬಸವಕಲ್ಯಾಣ: ಗ್ರಂಥಾಲಯಗಳು ಓದುಗರ ಮತ್ತು ಕೃತಿಗಳ ನಡುವೆ ಆಪ್ತವಾದ ಸಂಬಂಧ ಬೆಳೆಸುತ್ತವೆ. ಜತೆಗೆ ನಿರಂತರ ಸಂಬಂಧ ಇರಿಸಿಕೊಳ್ಳಬೇಕು. ವ್ಯಕ್ತಿಯ ವ್ಯಕ್ತಿತ್ವ ಬೆಳೆಸುವ ಗುಣ ಪುಸ್ತಕಕ್ಕಿದೆ ಎಂದು ಹುಲಸೂರು ತಹಶೀಲ್ದಾರ್‌ ಶಿವಾನಂದ ಮೇತ್ರೆ ಹೇಳಿದರು.

ನಗರದ ಸಾರ್ವಜನಿಕ ಗ್ರಂಥಾಲಯದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆ, ಜಿಲ್ಲಾ ಕೇಂದ್ರ ಗ್ರಂಥಾಲಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಕೋವಿಡ್‌ ವಿಷಮ ಸ್ಥಿತಿ ಹಾಗೂ ಲಾಕ್‌ ಡೌನ್‌ನಲ್ಲಿ ಮಾನಸಿಕ ಒತ್ತಡ ನಿವಾರಣೆಗೆ ಪುಸ್ತಕಗಳು ಸಂಗಾತಿಗಳಾಗಿದ್ದವು.

ಸಾರ್ವಜನಿಕ ಗ್ರಂಥಾಲಯ ವಿದ್ಯಾರ್ಥಿಗಳ ಸ್ಪರ್ಧಾತ್ಮಕ ಪರೀಕ್ಷೆಗೆ ಅನುಕೂಲವಾಗಿದ್ದು, ಸದುಪಯೋಗ ಪಡೆಯಬೇಕು ಎಂದರು. ಅಕ್ಕಮಹಾದೇವಿ ಕಾಲೇಜು ಉಪನ್ಯಾಸಕ ಡಾ| ಭೀಮಾಶಂಕರ ಬಿರಾದಾರ ಮಾತನಾಡಿ, ಸಾಹಿತ್ಯ, ಸಂಸ್ಕೃತಿ, ಸಮಾಜ, ಮಾನವ ವರ್ತನೆ, ರಾಜಕಾರಣ, ಆರ್ಥಿಕತೆಗಳ ಕ್ರಮಬದ್ಧ ವಿಶ್ಲೇಷಣೆ ಮಾಡಲು ಹಾಗೂ ಪ್ರಬುದ್ಧ ಚಿಂತನಾ ಕ್ರಮ ಬೆಳೆಸಿಕೊಳ್ಳಲು ಶ್ರೇಷ್ಠ ಕೃತಿಗಳು ಮತ್ತು ಗ್ರಂಥಾಲಯಗಳ ಒಡನಾಟದಿಂದ ಸಾಧ್ಯ. ಬೌದ್ಧಿಕ ಬದ್ಧತೆ ಜೊತೆಗೆ ಚರಿತ್ರೆ, ಸಮಕಾಲೀನ ಸಮಾಜಗಳ ಆಳವಾದ ಗ್ರಹಿಕೆಗೆ ಪತ್ರಿಕೆ ಮತ್ತು ಕೃತಿಗಳ ಅನುಸಂಧಾನ ಅವಶ್ಯ ಎಂದರು.

ಜಾತಿ, ವರ್ಗ, ವರ್ಣ, ಮತದ ಸೋಂಕಿಲ್ಲದ, ಲಿಂಗ ಭೇಧವಿಲ್ಲದ ಎಲ್ಲರ ಅರಿವಿನ ಜ್ಞಾನದ ವಿಸ್ತಾರದ ಜಾಗವಿದೆ. ಪುಸ್ತಕ ಮನೆ ವೈಚಾರಿಕ-ವೈಜ್ಞಾನಿಕ ಮತ್ತು ಸೈದ್ಧಾಂತಿಕ ಮಂಥನಕ್ಕೆ ವೇದಿಕೆಯಾಗಿದೆ. ಗ್ರಂಥಾಲಯಗಳು ಅರಿವಿನ ಮಂಟಪವಾಗಿದ್ದು ಅಲ್ಲಿ ನಿತ್ಯ ಬಹುಜ್ಞಾನದ ಸಂಕಥನ ನಡೆಯುತ್ತಿರುತ್ತದೆ ಎಂದರು.

ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಸಿದ್ಧಾರ್ಥ ಭಾವಿಕಟ್ಟೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಂಥಾಲಯ ಮತ್ತು ಗ್ರಂಥಗಳ ಕುರಿತು ಓದುಗರು- ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ನ.14ರಿಂದ 20 ರವರೆಗೆ ಗ್ರಂಥಾಲಯ ಸಪ್ತಾಹ ಹಮ್ಮಿಕೊಳ್ಳಲಾಗಿದೆ. ಮೊಬೈಲ್‌ ಸಂಸ್ಕೃತಿಯಿಂದ ಪುಸ್ತಕ ಸಂಸ್ಕೃತಿಗೆ ಎಲ್ಲರೂ ಬರಬೇಕಿದೆ. ಓದುವ ಹವ್ಯಾಸದಿಂದ ಮನುಷ್ಯನ ವಿಕಾಸ ಸಾಧ್ಯ ಎಂದರು.

ಈ ವೇಳೆ ಲೋಕೇಶ್‌ ಕನಕ, ಚನ್ನಪ್ಪಾ, ಮಹಾದೇವಪ್ಪ ಮಾನೆ, ಬಸವಕಲ್ಯಾಣ ಮತ್ತು ಹುಲಸೂರು ತಾಲೂಕಿನ ಗ್ರಂಥಾಲಯ ಮೇಲ್ವಿಚಾರಕರು ಇದ್ದರು. ಭವಾನಿ ಕೆ. ನಿರೂಪಿಸಿದರು. ನಿಂಗಪ್ಪ ತುಂಬಗಿ ಸ್ವಾಗತಿಸಿದರು. ರಘು ವಂದಿಸಿದರು.

ಟಾಪ್ ನ್ಯೂಸ್

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: The accused in the ATM robbery-shootout case have finally been identified.

Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್‌ ಪ್ರಕರಣದ ಆರೋಪಿಗಳ ಗುರುತು ಪತ್ತೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: farmer ends his life

Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.