“ಶತಕ’ ದಾಟಿದ ತರಕಾರಿಗಳ ಬೆಲೆ!


Team Udayavani, Oct 20, 2021, 2:53 PM IST

The price of vegetables

ಬೀದರ: ಜಿಲ್ಲೆಯಲ್ಲಿ ಮಳೆಯಾರ್ಭಟದ ಜತೆಗೆ ತೈಲದರ ಹೆಚ್ಚಳದ ಬಿಸಿ ತರಕಾರಿ ಮಾರುಕಟ್ಟೆಗೂ ತಟ್ಟಿದೆ.ಬಹುತೇಕ ತರಕಾರಿ ಬೆಲೆ ಶತಕ ದಾಟಿದ್ದು, ಗ್ರಾಹಕರಜೇಬಿಗೆ ಕತ್ತರಿ ಬೀಳುತ್ತಿದೆ. ಹೀಗಾಗಿ ಬಡ, ಮಧ್ಯಮವರ್ಗದ ಕುಟುಂಬಗಳಿಗೆ ಊಟಕ್ಕೆ ತೀಳಿ ಸಾರೇ ಗತಿ ಎಂಬಂತಾಗಿದೆ.

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಆರ್ಥಿಕಸಂಕಷ್ಟ ಎದುರಿಸುತ್ತಿರುವ ಜನ ಸಾಮಾನ್ಯರಿಗೆಈಗ ದುಬಾರಿ ತರಕಾರಿ ಈಗ ಗಾಯದ ಮೇಲೆಬರೆ ಬಿದ್ದಂತಾಗಿದೆ. ಕಳೆದೊಂದು ವಾರದಲ್ಲಿ ಪ್ರತಿತರಕಾರಿಯಲ್ಲಿ 20 ರಿಂದ 50 ರೂ. ಬೆಲೆ (ಚಿಲ್ಲರೆಮಾರುಕಟ್ಟೆ) ಹೆಚ್ಚಳವಾಗಿದೆ.

ಬೆಲೆ ಏರಿಕೆಯಿಂದತರಕಾರಿ ಬೆಳೆದ ರೈತರಿಗೂ ಲಾಭ ಕೈಸೇರುತ್ತಿಲ್ಲ, ಇತ್ತಗ್ರಾಹಕರಿಗೂ ಕಂಗಾಲಾಗಿಸಿದೆ.ಅಕ್ಟೋಬರ್‌ ಪ್ರಾರಂಭದಲ್ಲಿ ಸರಾಸರಿಗಿಂತ ಅತ್ಯ ಕಮಳೆ ಸುರಿದು ಮುಂಗಾರು ಬೆಳೆ ಹಾನಿಯಾಗಿದ್ದರೆಈಗ ಕಳೆದ ನಾಲ್ಕೈದು ದಿನಗಳಲ್ಲಿ ಬಿದ್ದ ಮಳೆಗೆತರಕಾರಿ ನೀರು ಪಾಲಾಗಿಸಿದೆ.

ಜಿಲ್ಲೆಯ ವಿವಿಧೆಡೆಬೆಳೆದಿದ್ದ ತರಕಾರಿ ನೀರಿನಲ್ಲೇ ಕೊಳೆತು ಹೋಗಿದ್ದು,ಉತ್ತಮವಾಗಿರುವ ಕೆಲವೆಡೆ ಕಟಾವು ಮಾಡಲುಸಾಧ್ಯವಾಗುತ್ತಿಲ್ಲ. ಹಾಗಾಗಿ ಸಧ್ಯ ಗಡಿ ಜಿಲ್ಲೆಗೆಮಹಾರಾಷ್ಟ್ರದ ಸೊಲ್ಲಾಪುರ, ತೆಲಂಗಾಣದಹೈದ್ರಾಬಾದ ಮತ್ತು ಬೆಳಗಾವಿಯಿಂದ ತರಕಾರಿಬರುತ್ತಿದ್ದು, ಪೆಟ್ರೋಲ್‌-ಡೀಸೆಲ್‌ ಹೆಚ್ಚಳ ಜತೆಗೆಸರಕು ಸಾಗಣೆ ವಾಹನಗಳ ಬಾಡಿಗೆ ಪರಿಷ್ಕರಣೆಯಿಂದತರಕಾರಿ ದರ ಗಗನಕ್ಕೇರಿದೆ.

ಅಡುಗೆ ರುಚಿ ಹೆಚ್ಚಿಸುವ ಟೊಮ್ಯಾಟೊ ಪ್ರತಿಮನೆಯಲ್ಲಿ ದಿನ ನಿತ್ಯದ ಊಟಕ್ಕೆ ಬೇಕೆ ಬೇಕು.ಆದರೆ, ಮಾರುಕಟ್ಟೆಯಲ್ಲಿ ಟೊಮ್ಯಾಟೊ ದರಕೇಳಿದರೆ ಹೌಹಾರಿಸುತ್ತಿದೆ. ಕೋಲಾರ ಜಿಲ್ಲೆಯಿಂದಆವಕ ಆಗುತ್ತಿರುವ ಟೊಮ್ಯಾಟೊಗೆ ವಾರದಹಿಂದೆ ಕೇವಲ 20 ರೂ. ಇತ್ತು. ಈಗ 50 ರೂ.ಗೆ ಹೆಚ್ಚಳವಾಗಿದೆ. ಇನ್ನೂ ಕೊತ್ತಂಬರಿ ಕೆ.ಜಿಗೆ 100ರೂ.ಯಿಂದ 200 ರೂ.ಗೆ ಜಿಗಿದಿದ್ದು, ತೂಕ ಮಾಡಿಮಾರಾಟ ಮಾಡಲಾಗುತ್ತಿರುವುದು ವಿಶೇಷ.ನಗರದ ಮಾರುಕಟ್ಟೆಯಲ್ಲಿ ಈರುಳ್ಳಿ ದರ ಮಾತ್ರ40 ರಿಂದ 30 ರೂ. ಇಳಿಕೆಯಾಗಿದ್ದು, ಉಳಿದೆಲ್ಲವೂಹೆಚ್ಚಳ ಆಗಿದೆ.

80 ರೂ. ಇದ್ದ ಮೆಂತೆ ಸೊಪ್ಪು 120ರೂ., 60 ರೂ. ಇದ್ದ ಬಿನಿಸ್‌ 100 ರೂ., 80 ರೂ.ಇದ್ದ ನುಗ್ಗೆಗಾಯಿ 160 ರೂ. 80 ರೂ. ಇದ್ದ ಬೆಳ್ಳುಳ್ಳಿ100 ರೂ. ಹಾಗೂ 40 ರೂ. ಇದ್ದ ಪಾಲಕ್‌ 80 ರೂ.ಗಳಿಗೆ ಹೆಚ್ಚಳವಾಗಿದೆ.

ಆಲೂಗಡ್ಡೆ, ಹಿರೇಕಾಯಿ,ಕರಿಬೇವು ಮಾತ್ರ ಸ್ಥಿರವಾಗಿದೆ.ಸದ್ಯ ಇಲ್ಲಿ ಮಳೆ ನಿಂತಿದ್ದರೂ ತೋಟಗಾರಿಕೆಜಮೀನುಗಳಲ್ಲಿ ಮಾತ್ರ ಇನ್ನೂ ತೇವಾಂಶಕಡಿಮೆಯಾಗಿಲ್ಲ. ಮಾರುಕಟ್ಟೆಗೆ ಜಿಲ್ಲೆಯಿಂದಲೇತರಕಾರಿ ಬರಲು ಇನ್ನೊಂದು ವಾರ ಬೇಕು,ಅಲ್ಲಿಯವರೆಗೆ ಬೆಲೆ ಕಡಿಮೆಯಾಗವ ಸಾಧ್ಯತೆ ಇಲ್ಲಎನ್ನುತ್ತಾರೆ ತರಕಾರಿ ಅಂಗಡಿ ಮಾಲೀಕರು.

ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: The accused in the ATM robbery-shootout case have finally been identified.

Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್‌ ಪ್ರಕರಣದ ಆರೋಪಿಗಳ ಗುರುತು ಪತ್ತೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: farmer ends his life

Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.