ಅಭಿವೃದ್ಧಿ ಕಾಣದ ಕವಿ ಸಮಾಧಿ ಸಿದ್ಧಶೈಲ


Team Udayavani, Aug 21, 2018, 1:17 PM IST

bid-1.jpg

ಬಸವಕಲ್ಯಾಣ: ಕನ್ನಡದ ಕವಯತ್ರಿ, ಕನ್ನಡ ಮತ್ತು ಮರಾಠಿಯಲ್ಲಿ ಸಾಹಿತ್ಯ ರಚಿಸಿ ಎರಡೂ ಭಾಷಿಕರ ಮಧ್ಯೆ ಸೇತುಯಾಗಿ ನಿಂತಿದ್ದ ಹಾಗೂ 1974ರಲ್ಲಿ ಮಂಡ್ಯದಲ್ಲಿ ನಡೆದ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳದ ಅಧ್ಯಕ್ಷೆಯಾಗಿದ್ದ ಡಾ| ಜಯದೇವಿತಾಯಿ ಲಿಗಾಡೆ ಅವರ ಇಲ್ಲಿನ ಸಮಾಧಿ ಸ್ಥಳ ಸಿದ್ಧಶೈಲ ಅಭಿವೃದ್ಧಿಗಾಗಿ ಕಾಯುತ್ತಿದೆ.

ಲಿಗಾಡೆಯವರು ಮಹಾರಾಷ್ಟ್ರದ ಸೊಲ್ಲಾಪೂರದ ಶ್ರೀಮಂತ ಮನೆತನವಾದ ಅರಮನೆಯಂಥ ಇಂದ್ರಭುವನದಲ್ಲಿ 1912 ಜೂ.23ರಂದು ಜನಿಸಿದ್ದರು. ಕರ್ನಾಟಕ ಏಕೀಕರಣಕ್ಕಾಗಿ ಹೋರಾಟ ನಡೆಸಿದ್ದ ಈ ಧೀಮಂತ ಮಹಿಳೆ ಶಿಕ್ಷಣ ಮತ್ತು
ಆಡಳಿತದಲ್ಲಿ ಕನ್ನಡ ಭಾಷೆ ಅನುಷ್ಠಾನ ಸೊಲ್ಲಾಪೂರ ಮತ್ತು ಇತರೆ ಕನ್ನಡ ಭಾಷಿಕರ ಪ್ರದೇಶಗಳು ಕರ್ನಾಟಕಕ್ಕೆ ಸೇರಬೇಕು ಎಂದು ಸಾಕಷ್ಟು ಪ್ರಯತ್ನ ನಡೆಸಿದವರು.

ತ್ರಿಪದಿಯಲ್ಲಿ ಸಿದ್ಧರಾಮ ಪುರಾಣ ಬರೆದರು. ಜಯಗೀತ ಸಾವಿರದ ಪದಗಳು ಸೇರಿದಂತೆ ವಚನಗಳನ್ನು ಮಠಾರಿಗೆ ಅನುವಾದಿಸಿ ಪ್ರಚಾರ ಮಾಡಿದವರು. ಕನ್ನಡ ಸಾಹಿತ್ಯ ಪ್ರಕಟಣೆಗಾಗಿ ಕನ್ನಡ ಕೋಟೆ ಎನ್ನುವ ಪ್ರಕಾಶನ ಸಂಸ್ಥೆ ಸ್ಥಾಪಿಸಿದ್ದ ಕೀರ್ತಿ ಇವರಿಗೆ ಸಲ್ಲುತ್ತದೆ.

ಆದರೆ ಸೊಲ್ಲಾಪೂರ ಕರ್ನಾಟಕಕ್ಕೆ ಸೇರುವುದಿಲ್ಲ ಎಂಬುದು ಗೊತ್ತಾದಾಗ ಅಲ್ಲಿನ ಶ್ರೀಮಂತಿಕೆ ಮತ್ತು ಮನೆಯನ್ನು ಬಿಟ್ಟು 1982ರಲ್ಲಿ ಬಸವಕಲ್ಯಾಣಕ್ಕೆ ಬಂದು ಅನುಭವ ಮಂಟಪಕ್ಕೆ ಹೋಗುವ ರಸ್ತೆಯಲ್ಲಿ ಭಕ್ತಿ-ಭವನ ಮನೆ ನಿರ್ಮಿಸಿ, ಕೊನೆ ಉಸಿರುವವರೆಗೂ ಬಸವಕಲ್ಯಾಣದಲ್ಲಿ ವಾಸವಾಗಿದ್ದರು.

ಇವರು ವಾಸವಾಗಿದ್ದ ಮನೆ ಕೇವಲ ಮನೆಯಾಗಿರಲಿಲ್ಲ. ಮಾಹಿತಿಯ ಭಂಡಾರವಾಗಿತ್ತು. ಕನ್ನಡ ಮತ್ತು ಮರಾಠಿಗರ ಅನೇಕ ಮಹತ್ವದ ಕೃತಿಗಳನ್ನು ಅವರು ಸಂಗ್ರಹಿಸಿ ಇಟ್ಟಿದ್ದರು. ಹಾಗಾಗಿ ಸಂಶೋಧಕರು ಮತ್ತು ಬರಹಾಗಾರರು ಅವರ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳುತ್ತಿದ್ದರು. ಕನ್ನಡ ಮರಾಠಿಗರಿಗೆ ಸೇತುವೆಯಾಗಿ ಕೆಲಸ ಮಾಡಿದ್ದ ಡಾ| ಲಿಗಾಡೆತಾಯಿ 1986 ಜು.25ರಂದು ನಿಧನರಾದರು. ಅವರು ವಾಸವಾಗಿದ್ದ ಮನೆಯ ಹಿಂಭಾದಲ್ಲಿ ಸಮಾ ಧಿ ಸಿದ್ಧಶೈಲ ಕಟ್ಟಲಾಗಿದೆ. 

ಆದರೆ ಈವರೆಗೆ ಸರಕಾರ ಮತ್ತು ಜನಪ್ರತಿನಿಧಿಗಳು ಸಮಾಧಿಸ್ಥಳದತ್ತ ಗಮನ ಹರಿಸಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿಲ್ಲ. ಇದರಿಂದ ಪ್ರವಾಸಿ ತಾಣವಾಗಬೇಕಾಗಿದ್ದ ಸಮಾಧಿಸ್ಥಳದಲ್ಲಿ ಗಿಟಗಳು ಬೆಳೆದು ನಿಂತಿವೆ. ಭಕ್ತಿ-ಭವನ ಹಿಂದಿನ ಭಾಗ ಶಿಥಿಲಾವಸ್ಥೆಗೆ ತಲುಪಿದೆ. ಸ್ಥಳಕ್ಕೆ ಭೇಟಿ ನೀಡಿದರೆ, ಲಿಗಾಡೆತಾಯಿ ಸಮಾಧಿಇದೇನಾ ಎನ್ನುವ ಹಂತಕ್ಕೆ ತಲುಪಿದೆ. ಅಲ್ಲಿ ಡಾ| ಲಿಗಾಡೆತಾಯಿ ಅವರನ್ನು ನೆನಪಿಸುವಂತಹ ಯಾವುದೇ ಕುರುಹುಗಳು ಇಲ್ಲ. ಹೀಗೆ ರಾಜ್ಯಕ್ಕೆ ಮತ್ತು ದೇಶಕ್ಕೆ ಮಾದರಿಯಾಬೇಕಾದ ಡಾ| ಜಗದೇವಿ ಲಿಗಾಡೆ ತಾಯಿ ಸಮಾ  ಸಿದ್ಧಶೈಲ ನಿರ್ಲಕ್ಷಕ್ಕೆ ಒಳಗಾಗಿರುವುದು ವಿಷಾದನೀಯ ಎನ್ನಬಹುದು.

ಡಾ| ಜಗದೇವಿತಾಯಿ ಲಿಗಾಡೆ ಸಮಾಧಿ ಸ್ಥಳ ಸಿದ್ಧಶೈಲದಲ್ಲಿ ಸ್ಮಾರಕ ನಿರ್ಮಾಣ ಮಾಡಬೇಕು. ಮತ್ತು ಗ್ರಂಥಾಲಯ
ಅಥವಾ ವಸ್ತು ಸಂಗ್ರಾಲಯ ನಿರ್ಮಿಸುವ ಮೂಲಕ ಇವರ ಜೀವನ ಚರಿತ್ರೆ ಮುಂದಿನ ಪೀಳಿಗೆಗೆ ಮಾದರಿ ಆಗುವಂತೆ ಮಾಡಬೇಕು.  ದೇವೇಂದ್ರ ಬರಗಾಲೆ ಡಾ| ಜಯದೇವಿತಾಯಿ ಲಿಗಾಡೆ ಪ್ರತಿಷ್ಠಾನ ಅಧ್ಯಕ್ಷ

ಡಾ| ಜಯದೇವಿತಾಯಿ ಲಿಗಾಡೆ ಕೃತಿಗಳು ಸಂಪುಟವಾಗಿ ಪುನಃ ಮುದ್ರಣವಾಗಬೇಕು. ಹಾಗೂ ಸಮಾಧಿಸಿದ್ಧಶೈಲ ಸಂರಕ್ಷಣೆ ಮಾಡುವ ಹೊಣೆಗಾರಿಕೆಯನ್ನು ಸರಕಾರ ವಹಿಸಿಕೊಳ್ಳಬೇಕು. ಕನ್ನಡದ ವಿಮರ್ಶಕರು ಲಿಗಾಡೆ ಅವರ ಸಾಹಿತ್ಯ ಕುರಿತು ಗಂಭೀರ ಚರ್ಚೆ ಮಾಡಬೇಕು.
 ಡಾ. ಭೀಮಾಶಂಕರ ಬಿರಾದಾರ್‌

„ವೀರಾರೆಡ್ಡಿ ಆರ್‌.ಎಸ್‌.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; Minister Eshwar Khandre visits Gunateerthawadi village; Financial assistance to the bereaved family

Bidar; ಗುಣತೀರ್ಥವಾಡಿ ಗ್ರಾಮಕ್ಕೆ ಈಶ್ವರ ಖಂಡ್ರೆ ಭೇಟಿ; ನೊಂದ ಕುಟುಂಬಕ್ಕೆ ಹಣಕಾಸಿನ ನೆರವು

Bidar: BRIMS ಆಸ್ಪತ್ರೆಯಲ್ಲಿ ಕೈಕೊಟ್ಟ ವಿದ್ಯುತ್… ಆಕ್ಸಿಜನ್ ಇಲ್ಲದೆ ರೋಗಿಗಳ ಪರದಾಟ

Bidar: BRIMS ಆಸ್ಪತ್ರೆಯಲ್ಲಿ ಕೈಕೊಟ್ಟ ವಿದ್ಯುತ್… ಆಕ್ಸಿಜನ್ ಇಲ್ಲದೆ ರೋಗಿಗಳ ಪರದಾಟ

1-bhalki

Bidar; ಪೊಲೀಸರ ಮೇಲೆ ಮಚ್ಚಿನಿಂದ ಹಲ್ಲೆ: ಕಿಡ್ನಾಪ್ ಆರೋಪಿ ಕಾಲಿಗೆ ಗುಂಡೇಟು

1-bidar-1

Bidar; ಬಾನಂಗಳದಲ್ಲಿ ಲೋಹದ ಹಕ್ಕಿಗಳ ಚಿತ್ತಾರ: ಪುಳಕಿತರಾದ ಜನರು

Bidar; ಜನರ ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳ ಅಸಹಕಾರ: ಗ್ರಾ.ಪಂ. ಸದಸ್ಯ ರಾಜೀನಾಮೆ

Bidar; ಜನರ ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳ ಅಸಹಕಾರ: ಗ್ರಾ.ಪಂ. ಸದಸ್ಯ ರಾಜೀನಾಮೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.