ನೀರುಣಿಸಿ.. ಕಾಡು ಪ್ರಾಣಿ ಜೀವ ಉಳಿಸಿ


Team Udayavani, Dec 9, 2018, 11:17 AM IST

bid-1.jpg

ಬೀದರ: ಬೇಸಿಗೆ ಬಂದರೆ ಬಿಸಿ ತಾಳಲಾರದೆ ವನ್ಯ ಜೀವಿಗಳು ನೀರಿಗಾಗಿ ಕಾಡಿನಿಂದ ನಾಡಿನಕಡೆಗೆ ಬರುವುದು ಸಾಮಾನ್ಯ. ಆದರೆ, ಚಳಿಗಾಲದಲ್ಲಿಯೇ ಕುಡಿಯಲು ನೀರು ಸಿಗದೇ ಕಾಡುಪ್ರಾಣಿಗಳು ನಾಡಿನ ಕಡೆಗೆ ಮುಖ ಮಾಡಿದ್ದು, ಬರಗಾಲದ ಭೀಕರತೆಯನ್ನು ತೋರುವಂತಿದೆ.

ಬೀದರ್‌ ತಾಲೂಕಿನ ವಿವಿಧ ಅರಣ್ಯ ಪ್ರದೇಶ, ಹುಮನಾಬಾದ, ಬಸವಕಲ್ಯಾಣ, ಔರಾದ ತಾಲೂಕು ಸೇರಿದಂತೆ ವಿವಿಧೆಡೆ ಇರುವ ಅರಣ್ಯ ಪ್ರದೇಶದ ವನ್ಯ ಜೀವಿಗಳು ಕುಡಿಯಲು ನೀರು ಸಿಗದೆ ನಾಡಿನ ಕಡೆಗೆ ಮುಖ ಮಾಡುತ್ತಿವೆ. ಕಾಡು ಪ್ರಾಣಿಗಳು ಹಾಡುಹಗಲೆ ರಸ್ತೆಗೆ ಬರುತ್ತಿದ್ದು, ಎಲ್ಲಿ ಅಪಘಾತಕ್ಕೆ ತುತ್ತಾಗುತ್ತವೆಯೋ ಎಂಬ ಭಯ ವಾಹನ ಸವಾರರಿಗೆ ಕಾಡುತ್ತಿದೆ. ಕಾಡಿನಲ್ಲಿ ಸ್ವತ್ಛಂದವಾಗಿ ಕುಣಿಯುತ್ತಿರುವ ಕಾಡು ಪ್ರಾಣಿಗಳು ಈಗ ಆಹಾರ, ನೀರಿಗಾಗಿ ಪ್ರಾಣ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣಗೊಳ್ಳುತ್ತಿದೆ. 

ಕಾಡಿನಲ್ಲಿರುವ ಕೆರೆ, ಕುಂಟೆಗಳು ಬತ್ತಿ ಹೋಗಿವೆ. ಹನಿ ನೀರು ಹುಡುಕಿಕೊಂಡು ಅನೇಕ ಜಿಂಕೆ, ಕೃಷ್ಣಮೃಗ, ನವಿಲು ರಸ್ತೆಗಳಲ್ಲಿ ಕಂಡುಬರುತ್ತಿವೆ. ಜಿಲ್ಲೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜಿಂಕೆ, ಕೃಷ್ಣಮೃಗ, ನವಿಲು ಸೇರಿದಂತೆ ಇತರೆ ಕಾಡು ಪ್ರಾಣಿಗಳು ಇವೆ. ಸದ್ಯದ ಸ್ಥಿತಿಯಲ್ಲಿ ಅವುಗಳ
ರಕ್ಷಣೆ ಮಾಡುವುದು ಅತಿ ಅವಶ್ಯಕವಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಬೀದರ್‌ ತಾಲೂಕಿನ ಬೆಳೂರ್‌ ಅರಣ್ಯ ಪ್ರದೇಶದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡುತ್ತಿರುವುದಾಗಿ ಹೇಳಲಾಗುತ್ತಿದೆ. ಆದರೆ, ಕಾಡು ಪ್ರಾಣಿಗಳು ಮಾತ್ರ ನಾಡಿನ ಕಡೆಗೆ ಮುಖಮಾಡುತ್ತಿರುವುದು ಅನೇಕ ಅನುಮಾನಕ್ಕೆ ಕಾರಣವಾಗಿದೆ.

ಬೇಕಿದೆ ನೀರು: ಬರದಿಂದ ಪರಿತಪಿಸುತ್ತಿರುವ ಕಾಡು ಪ್ರಾಣಿಗಳಿಗೆ ಬೇಸಿಗೆ ಮುಗಿಯುವವರೆಗೂ ನೀರು ಒದಗಿಸುವ ಕೆಲಸ ಆಗಬೇಕಾಗಿದೆ. ಈ ಮೂಲಕ ಪ್ರಾಣಿ, ಪಕ್ಷಿಗಳು ನಾಡಿನತ್ತ ಮುಖ ಮಾಡುವುದನ್ನು ತಪ್ಪಿಸಬೇಕಾಗಿದೆ. ಅಲ್ಲದೆ, ಪ್ರಾಣಿಗಳು ರಸ್ತೆಗೆ ಬಂದು ಪ್ರಾಣ ಕಳೆದುಕೊಳ್ಳುವುದನ್ನು ಕೂಡ ಅಧಿಕಾರಿಗಳು ತಪ್ಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕಾಗಿದೆ.

ಇಲ್ಲದಿದ್ದರೆ ನೀರು ಹುಡುಕಿಕೊಂಡು ಬಂದು ನಾಯಿಗಳ ದಾಳಿಯಿಂದ ಅಥವಾ ರಸ್ತೆ ಅಪಘಾತದಲ್ಲಿ ಸಾವನ್ನಪ್ಪುವುದು ನಿಶ್ಚಿತವಾಗಿದೆ. ಅರಣ್ಯ ಪ್ರದೇಶಗಳಲ್ಲಿ ಕೃತಕವಾಗಿ ಕೆರೆ, ಚೆಕ್‌ಡ್ಯಾಂ ಹಾಗೂ ಹೊಂಡಗಳನ್ನು ನಿರ್ಮಿಸುವ ಕಾರ್ಯಕ್ಕೆ ಅಧಿಕಾರಿಗಳು ಮುಂದಾಗಬೇಕಾಗಿದೆ. ಹೊಂಡಗಳಲ್ಲಿ ಟ್ಯಾಂಕರ್‌ ಮೂಲಕ ನೀರು ಹರಿಸಿ ಪ್ರಾಣಿಗಳ ದಾಹ ಇಂಗಿಸುವ ಕೆಲಸವನ್ನು ಅರಣ್ಯ ಇಲಾಖೆ ಮಾಡಬೇಕಿದೆ. ಬರುವ ಬೇಸಿಗೆಯ ತೀವ್ರತೆ ಅರಿತು ಆ ದಿನಗಳಲ್ಲಿ ವನ್ಯಜೀವಿಗಳ ರಕ್ಷಣೆಯ ಹೊಣೆ ಹೊರಬೇಕಾಗಿದೆ. ಅತಿ ಅಮೂಲ್ಯದ ಪ್ರಾಣಿಗಳು ಜಿಲ್ಲೆಯಲ್ಲಿದ್ದು, ಸಂಬಂಧಿಸಿದ ಅಧಿಕಾರಿಗಳು ಅವುಗಳ ಸಂರಕ್ಷಣೆಗೆ ಸೂಕ್ತ ಕ್ರಮಗಳು ಕೈಗೊಳ್ಳಬೇಕಾಗಿದೆ. 

ಕೆಲ ವರ್ಷಗಳ ಹಿಂದೆ ಎದುರಾದ ಬರಕ್ಕಿಂತ ಇದೀಗ ಬರದ ಭೀಕರತೆ ಹೆಚ್ಚಿದ್ದು, ಪ್ರಾಣಿ ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡವ ಕಾರ್ಯಕ್ಕೆ ವಿವಿಧ ಸಂಘ, ಸಂಸ್ಥೆಗಳು ಕೂಡ ಶ್ರಮಿಸಬೇಕಾಗಿದೆ. ಮಾನವೀಯತೆ ಆಧಾರದಲ್ಲಾದರೂ ಕೂಡ ಪ್ರಾಣಿಗಳ ಪ್ರಾಣ ಉಳಿಸುವ ಪ್ರಾಮಾಣಿಕ ಪ್ರಯತ್ನ ನಡೆಯಬೇಕು ಎಂಬುದು ಪ್ರಾಣಿ ಪ್ರಿಯರ ಅಳಲು.

ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತಿರುವುದು ಗಮನಕ್ಕೆ ಬಂದಿದೆ. ಈಗಾಗಲೇ ಬೀದರ ತಾಲೂಕಿನ ಬೆಳೂರ್‌ ಅರಣ್ಯ ಪ್ರದೇಶದಲ್ಲಿ ಪ್ರಾಣಿಗಳಿಗೆ ಕುಡಿಯು ನೀರು ಪೂರೈಕೆ ಮಾಡಲುವ ಕೆಲಸ ನಡೆಯುತ್ತಿದೆ. ಜಿಲ್ಲೆಯ ವಿವಿಧೆಡೆ ಕೂಡ ನೀರು ಪೂರೈಸುವ ಕೆಲಸ ನಡೆಯಲಿದೆ. ಸಿಮೆಂಟ್‌ ಟ್ಯಾಂಕ್‌ಗಳನ್ನು ನಿರ್ಮಿಸಿದ್ದು, ಅವುಗಳಲ್ಲಿ ನೀರು ಹರಿಸುವ ಕೆಲಸ ನಡೆಯಲಿದೆ.
 ಎಂ.ಡಿ. ತೊಡುಲಕರ್‌, ಜಿಲ್ಲಾ ಅರಣ್ಯಾಧಿಕಾರಿ

ದುರ್ಯೋಧನ ಹೂಗಾರ

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.