ಯುವಕರು ಆರ್ಥಿಕತೆ, ಅಭಿವೃದ್ಧಿಯ ಚಾಲಕರು: ರಾಜ್ಯಪಾಲ ಗೆಹ್ಲೋಟ್


Team Udayavani, Apr 28, 2022, 4:32 PM IST

gehlot

ಬೀದರ್: ಯುವಕರು ಈ ದೇಶದ ಆರ್ಥಿಕತೆ ಮತ್ತು ಅಭಿವೃದ್ಧಿಯ ಚಾಲಕರು. ದೇಶದ ಯಶಸ್ಸು, ನಾವು ನಮ್ಮ ಯುವಕರನ್ನು ಶಿಕ್ಷಣ, ಕೌಶಲ್ಯ ಮತ್ತು ಮೌಲ್ಯಗಳ ಮೂಲಕ ಉತ್ಪಾದಕ ಮಾನವ ಸಂಪನ್ಮೂಲಗಳಾಗಿ ಹೇಗೆ ಪರಿವರ್ತಿಸುತ್ತೇವೆ ಎಂಬುದರ ಮೇಲೆ ಅವಲಂಬಿತವಾಗಿದೆ ಎಂದು ಪಶು ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟರು.

ಇಲ್ಲಿನ ನಂದಿ ನಗರದ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಗುರುವಾರ ನಡೆದ ವಿವಿ 12ನೇ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಮತ್ತು ಪದಕ ವಿತರಿಸಿ ಮಾತನಾಡಿದ ಅವರು, ನಾವೀನ್ಯತೆ, ಸಂಶೋಧನೆ ಮತ್ತು ಅಭಿವೃದ್ಧಿಯ ಮೂಲಕ ನಾವು ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರಬಹುದು. ಬಡತನ, ನಿರುದ್ಯೋಗ ಮತ್ತು ಹಸಿವು ಅಂಥ ಅನೇಕ ಸಮಸ್ಯೆಗಳನ್ನು ಪರಿಹರಿಸಬಹುದು. ಪಶು ವಿವಿಯ ಪದವೀಧರರು ವಿಜ್ಞಾನದ ಜ್ಞಾನವನ್ನು ಬಳಸಿಕೊಂಡು ಸಮಾಜದಲ್ಲಿ ಪರಿವರ್ತನೆಯನ್ನು ತರುವ ಜವಾಬ್ದಾರಿಯನ್ನು ಹೊಂದಿದ್ದಾರೆ ಎಂದರು.

ಭಾರತದ ಆರ್ಥಿಕತೆಯಲ್ಲಿ ಜಾನುವಾರುಗಳು ಪ್ರಮುಖ ಪಾತ್ರ ವಹಿಸುತ್ತವೆ. ತಮ್ಮ ಮುಖ್ಯ, ಪೂರಕ ಆದಾಯಕ್ಕಾಗಿ ಮತ್ತು ಸುಸ್ಥಿರ ಜೀವನೋಪಾಯಕ್ಕಾಗಿ ಜಾನುವಾರು ಸಾಕಾಣಿಕೆ ಕೈಗೊಳ್ಳುತ್ತಾರೆ. ಗ್ರಾಮೀಣ ಪ್ರದೇಶಗಳಲ್ಲಿ ರೈತರ ಆದಾಯವನ್ನು ದ್ವಿಗುಣಗೊಳಿಸುವಲ್ಲಿ ಪಶುವೈದ್ಯರ ಪಾತ್ರ ಪ್ರಮುಖ ಎಂದು ಒತ್ತಿ ಹೇಳಿದ ರಾಜ್ಯಪಾಲರು, ಪದವೀಧರ ವಿದ್ಯಾರ್ಥಿಗಳು ತಮ್ಮ ಸೇವೆಯನ್ನು ಮುಂದಿನ ದಿನಗಳಲ್ಲಿ ಸಂಶೋಧನೆ ಹಾಗೂ ರೈತಾಪಿ ವರ್ಗದವರ ಕಲ್ಯಾಣಕ್ಕಾಗಿ ಶ್ರಮಿಸಲು ಕರೆ ನೀಡಿದರು.

ಇದನ್ನೂ ಓದಿ:“ಈ ದೇಶದಲ್ಲಿ” ಕೇವಲ ಮುಸ್ಲಿಮರನ್ನು ಮಾತ್ರ ಟಾರ್ಗೆಟ್ ಮಾಡಲಾಗುತ್ತಿದೆ: ಒಮರ್ ಅಬ್ದುಲ್ಲಾ

ಭಾರತ ಸರ್ಕಾರವು ನೂತನ ಕಂಪನಿಗಳನ್ನು ಉತ್ತೇಜಿಸಲು, ಉದ್ಯಮಶೀಲತೆ ಮತ್ತು ಉದ್ಯೋಗ ಸೃಷ್ಟಿಗೆ ಪ್ರೋತ್ಸಾಹ ನೀಡಲು ‘ಸ್ಟಾರ್ಟ್-ಅಪ್ ಇಂಡಿಯಾ’ ಅಭಿಯಾನವನ್ನು ಪ್ರಾರಂಭಿಸಿದೆ. ಪದವೀಧರ ವಿದ್ಯಾರ್ಥಿಗಳು ಅವಕಾಶಗಳನ್ನು ಅನ್ವೇಷಿಸಲು, ಉದ್ಯಮಿಗಳಾಗಲು ಮತ್ತು ಉದ್ಯೋಗಗಳನ್ನು ಸೃಷ್ಟಿಸಲು ಮುಂದಾಗಬೇಕು ಎಂದು ಕಿವಿ ಮಾತು ಹೇಳಿದರು.

ನವ ದೆಹಲಿ ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ಉಪ ಮಹಾ ನಿರ್ದೇಶಕ ಡಾ. ಬಿ.ಎನ್ ತ್ರಿಪಾಠಿ ಅವರು ಘಟಿಕೋತ್ಸವ ಭಾಷಣ ಮಾಡಿದರು. ವಿವಿ ಸಹ ಕುಲಾಧಿಪತಿಗಳು ಆದ ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಕುಲಪತಿ ಪ್ರೊ. ಕೆ.ಸಿ ವಿರಣ್ಣ, ರಜಿಸ್ಟ್ರಾರ್ ಬಿ.ವಿ ಶಿವಪ್ರಕಾಶ ವೇದಿಕೆಯಲ್ಲಿದ್ದರು. ಶಾಸಕರಾದ ರಹೀಮ್ ಖಾನ್, ಬಂಡೆಪ್ಪ ಕಾಶೆಂಪುರ್, ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಪಂ ಸಿಇಒ ಜಹೀರಾ ನಸೀಮ್, ಎಸ್‌ಪಿ ಕಿಶೋರ ಬಾಬು ಸೇರಿದಂತೆ ವಿವಿ ಆಡಳಿತ ಮಂಡಳಿ ಸದಸ್ಯರು, ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: The accused in the ATM robbery-shootout case have finally been identified.

Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್‌ ಪ್ರಕರಣದ ಆರೋಪಿಗಳ ಗುರುತು ಪತ್ತೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: farmer ends his life

Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.