![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Jan 15, 2022, 5:58 PM IST
ಇಂಡಿ: ಕೋವಿಡ್-19 ಹಿನ್ನೆಲೆಯಲ್ಲಿ ಕಂದಾಯ ಉಪವಿಬಾಗಾಧಿಕಾರಿ ರಾಹುಲ್ ಶಿಂಧೆಯವರು ಮಹಾರಾಷ್ಟ್ರದ ಗಡಿಯ ಭಾಗದ ಧೂಳಖೇಡ ಚೆಕ್ ಪೋಸ್ಟ್ಗೆ ಗುರವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಕೋವಿಡ್ ತಪಾಸಣೆ ಬಗ್ಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕರ್ತವ್ಯದಲ್ಲಿದ್ದ ಕಂದಾಯ, ಆರೋಗ್ಯ ಮತ್ತು ಪೊಲೀಸ್ ಇಲಾಖೆಯವರಿಂದ ತಪಾಸಣೆ ಬಗ್ಗೆ ಮಾಹಿತಿ ಮತ್ತು ದಾಖಲೆ ಪಡೆದುಕೊಂಡರು. ಕೋವಿಡ್ ನಿಯಮಾವಳಿ ಪ್ರಕಾರ ಪ್ರತಿ ವಾಹನಗಳನ್ನು ತಡೆಸಿ ಪರಿಶೀಲಿಸಿ ಅಗತ್ಯ ದಾಖಲೆ ಪಡೆಯಿರಿ. ಸೂಕ್ತ ದಾಖಲೆ ಇಲ್ಲದವರನ್ನು ವಾಪಸ್ ಕಳುಹಿಸಿ. ಇದರಲ್ಲಿ ಯಾವುದೇ ಮುಲಾಜು ಬೇಡ ಎಂದು ತಿಳಿಸಿದರು.
ಅಲ್ಲದೆ ಮಹಾರಾಷ್ಟ್ರದ ದೇವಸ್ಥಾನಗಳಿಗೆ ಹೋಗಿ ಬರುವ ಭಕ್ತರು ಕಡ್ಡಾಯ ಎರಡು ಲಸಿಕೆ ಪಡೆದಿರುವ ಬಗ್ಗೆ ದಾಖಲೆ ಪರಿಶೀಲಿಸಿ. ಆರ್ಟಿಪಿಸಿಆರ್ ತಪಾಸಣೆ ನಡೆಸುವಂತೆ ಶಿಂಧೆ ಸೂಚಿಸಿದರು.
ಚಡಚಣ ತಹಶೀಲ್ದಾರ್ ಸುರೇಶ ಚವಲರ, ಕಂದಾಯ ನಿರೀಕ್ಷಕ ಪಿ.ಜೆ. ಕೊಡಹೊನ್ನ, ಆಶಾ ಕಾರ್ಯಕರ್ತೆಯರು,ಪೊಲೀಸ್ ಸಿಬ್ಬಂದಿ ಮತ್ತಿತರರಿದ್ದರು.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
You seem to have an Ad Blocker on.
To continue reading, please turn it off or whitelist Udayavani.