ಜಾನುವಾರು ಆರೋಗ್ಯ ಕಾಪಾಡಲು ತಡಲಗಿ ಸಲಹೆ


Team Udayavani, Sep 30, 2020, 5:00 PM IST

ಜಾನುವಾರು ಆರೋಗ್ಯ ಕಾಪಾಡಲು ತಡಲಗಿ ಸಲಹೆ

ಸಿಂದಗಿ: ಜಾನುವಾರುಗಳ ಆರೋಗ್ಯ ಕಾಪಾಡುವುದು ಪ್ರತಿ ರೈತರ ಕರ್ತವ್ಯ ಎಂದು ಸಿಂದಗಿ ಪಶು ಆಸ್ಪತ್ರೆ ಹಿರಿಯ ವೈದ್ಯಾಧಿಕಾರಿ ಡಾ| ಮಾರುತಿ ತಡಲಗಿ ಹೇಳಿದರು.

ತಾಲೂಕಿನ ಸಾಸಾಬಾಳ ಗ್ರಾಮದಲ್ಲಿ ಜಿಪಂ, ಪಶು ಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆ ಸಿಂದಗಿ ಸಂಯುಕ್ತಾಶ್ರಯದಲ್ಲಿ ನಡೆದ ಬರಡು ದನಗಳ ಚಿಕಿತ್ಸಾ ಶಿಬಿರ ಮತ್ತು ಕಿಸಾನ್‌ ಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಜಾನುವಾರಗಳಿಗೆ ಚಿಕಿತ್ಸೆ ನೀಡಿ ಅವರು ಮಾತನಾಡಿದರು.

ಜಾನುವಾರುಗಳ ಮೂಕ ಪ್ರಾಣಿಗಳಾಗಿದ್ದರಿಂದ ಆರೋಗ್ಯದ ಕಡೆಗೆ ಹೆಚ್ಚು ಗಮನ ನೀಡಬೇಕು. ಇತ್ತೀಚೆಗೆ ರಾಜ್ಯದಲ್ಲಿ ಲಿಂಪಿ ಸ್ಕಿನ್‌ಡಿಸಿಸ್‌ ಪಕ್ಕದ ಕಲಬುರಗಿ ಜಿಲ್ಲೆ  ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಕಂಡು ಬಂದಿದೆ. ಸಿಂದಗಿ ತಾಲೂಕು ಕಲಬುರಗಿ ಜಿಲ್ಲೆಗೆ ಹೊಂದಿಕೊಂಡಿರುವುದರಿಂದ ಜಾನುವಾರು ಹೊಂದಿದ ರೈತರು ಜಾಗೃತರಾಗಿರಬೇಕು ಎಂದು ಹೇಳಿದರು.

ಕ್ಯುಲೆಕ್ಸ್‌ ಮತ್ತು ಏಡಿಸ್‌ ಸೊಳ್ಳೆಗಳಿಂದ, ಕಚ್ಚುವ ನೋಣಗಳಿಂದ, ಉಣ್ಣೆಗಳಿಂದ,ರೋಗಗ್ರಸ್ತ ಜಾಣುವಾರುಗಳಿಂದ ಲಿಂಪಿ ಸ್ಕಿನ್‌ ಡಿಸಿಸ್‌ ಹರಡುತ್ತದೆ. ಆದ್ದರಿಂದ ಈ ರೋಗ ಲಕ್ಷಣಗಳನ್ನು ಕಂಡು ಬಂದಲ್ಲಿ ರೋಗಗ್ರಸ್ತ ಜಾನುವಾರುಗಳನ್ನು ಪ್ರತ್ಯೇಕವಾಗಿ ಕಟ್ಟಬೇಕು. ಪ್ರತ್ಯೇಕವಾಗಿ ನೀರು, ಮೇವು ನೀಡಬೇಕು. ಆಗ ರೋಗಗ್ರಸ್ತ ಜಾನುವಾರುಗಳು ಗುಣಮುಖವಾಗುತ್ತವೆ. ಅಲ್ಲದೆ ಬೇರೆ ಜಾನುವಾರುಗಳಿಗೆ ರೋಗ ಹರಡುವುದಿಲ್ಲ. ಈ ರೋಗದಿಂದ ಜಾನುವಾರುಗಳಿಗೆ ಯಾವುದೇ ಅಪಾಯವಿಲ್ಲ. ರೈತರು ಗಾಬರಿಯಾಗುವ ಅವಶ್ಯಕತೆಯಿಲ್ಲ ಎಂದು ಹೇಳಿದರು.

ಜಾನುವಾರುಗಳ ಕೊಟ್ಟಿಗೆ, ನೀರು ಕುಡಿಸುವ ದಾವಣಿ ಸ್ವತ್ಛತೆಯಿಂದ ಕಾಪಾಡಬೇಕು. ಜಾನುವಾರುಗಳಲ್ಲಿ ಜ್ವರ, ಚರ್ಮದಲ್ಲಿ ಗಂಟು, ಕಾಲುಗಳಲ್ಲಿ ಊತ, ಜೊಲ್ಲು ಸೋರುವುದು, ಎದೆಯಲ್ಲಿ ಬಾವು ಮುಂತಾದ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣವೆ ಪಶು ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಬೇಕು ಎಂದು ಸಲಹೆ ನೀಡಿದರು. ಶಿಬಿರದಲ್ಲಿ ವಿವಿಧ ರೋಗಗಳಿಂದ ಬಳಲುತ್ತಿರುವ ನೂರಕ್ಕು ಹೆಚ್ಚು ಜಾನುವಾರುಗಳಿಗೆ ಮತ್ತು 30ಕ್ಕೂ ಹೆಚ್ಚು ಲಿಂಪಿ ಸ್ಕಿನ್‌ ಡಿಸಿಸ್‌ ರೋಗದಿಂದ ಬಳಲುತ್ತಿರುವ ಜಾನುವಾರುಗಳಿಗೆ ಚಿಕಿತ್ಸೆ ನೀಡಿದರು. ನಂತರ ಗ್ರಾಮದ ಸುತ್ತಲಿನಿ ಹೊಲಗಳಿಗೆ ಹೋಗಿ ಅಲ್ಲಿ ರೋಗಗಳಿಂದ ಬಳಲುತ್ತಿರುವ ಜಾನುವಾರುಗಳಿಗೆ ಚಿಕಿತ್ಸೆ ನೀಡಿದರು.

ಈ ಸಂದರ್ಭದಲ್ಲಿ ಪಶು ವೈದ್ಯಕೀಯ ಪರೀಕ್ಷಕ ಡಾ| ಆರ್‌.ಎಂ. ಕುಬಕಡ್ಡಿ ಚಿಕಿತ್ಸೆ ನೀಡಿದರು. ರೈತರಾದ ಕುಮಾರಗೌಡ ಬಿರಾದಾರ, ಮುತ್ತು ಪೊಲಾಸಿ, ಗೋಲ್ಲಾಳಪ್ಪ ಪಟ್ಟಣದ, ಮಲ್ಲು ಯಾಳಗಿ, ಶಿವಣ್ಣ ಪೊಲಾಸಿ, ಸಕ್ರೆಪ್ಪ ಕೋರಿ, ಹನುಮಂತ್ರಾಯಗೌಡ ಬಿರಾದಾರ, ದಾವಲಸಾಬ ಯಡ್ರಾಮಿ,ನಿಂಗಪ್ಪ ಪೊಲಾಸಿ, ಮಲ್ಲಪ್ಪ ಪೊಲಾಸಿ, ಅಪ್ಪಾಸಾಹೇಬ ಚನ್ನೂರ, ಭೀಮಣ್ಣ ಚನ್ನೂರ, ಮುದಕಪ್ಪ ಮೂಲಿಮನಿ, ನಾನಾಗೌಡ ಬಿರಾದಾರ, ಗುರುಬಸಪ್ಪ ಹಿರೆಗೋಗಿ ಸೇರಿದಂತೆ ರೈತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.