![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 17, 2022, 3:38 PM IST
ವಿಜಯಪುರ: ನಗರದಲ್ಲಿರುವ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆ ಸಂದರ್ಭದಲ್ಲಿ ಬಾಣಂತಿಯರ ಶಸ್ತ್ರಚಿಕಿತ್ಸೆ ಮಾಡಿದ ಲೋಪ ಪ್ರಕರಣ ಅತ್ಯಂತ ಆತಂಕಕಾರಿ ಸಂಗತಿ. ಕೂಡಲೇ ಈ ಪ್ರಕರಣದ ತನಿಖೆ ನಡೆಸುವಂತೆ ಆಗ್ರಹಿಸಿ ಎಐಎಂಎಸ್ಎಸ್ ಮಹಿಳಾ ಸಾಂಸ್ಕೃತಿಕ ಸಂಘಟನೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದೆ.
ಸೋಮವಾರ ಸಂಘಟನೆಯ ಜಿಲ್ಲಾ ಸಂಚಾಲಕಿ ಶಿವಬಾಳಮ್ಮ ಕೊಂಡಗೂಳಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಡಾ| ವಿ.ಬಿ. ದಾನಮ್ಮವರ ಅವರಿಗೆ ಮನವಿ ಸಲ್ಲಿಸಿದ ಮಹಿಳಾ ಸಂಘಟನೆ ಕಾರ್ಯಕರ್ತರು, ಮಾಧ್ಯಮದಲ್ಲಿ ವರದಿಯಾದಂತೆ ವಿಜಯಪುರ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರಿಗೆ ಶಸ್ತ್ರಚಿಕತ್ಸೆಯ ಬಳಿಕ ಹೊಲಿಗೆ ಬಿಚ್ಚಿಕೊಂಡು ಸಮಸ್ಯೆಯಾಗಿ ಬಾಣಂತಿಯರು ನರಳುತ್ತಿದ್ದಾರೆ. ಶಸ್ತ್ರಚಿಕಿತ್ಸೆ ಮಾಡಿದ ದೇಹದ ಭಾಗದಲ್ಲಿ ಸೋಂಕು ತಗುಲಿ ಬಾಣಂತಿಯರು ನೋವಿನಿಂದ ನರಳುತ್ತಿರುವ ಘಟನೆ ಆಘಾತಕಾರಿ ವಿಷಯ ಎಂದು ಜಿಲ್ಲಾಡಳಿತಕ್ಕೆ ವಿವರಿಸಿದ್ದಾರೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಬಡವರೇ ಹೆಚ್ಚಾಗಿ ಚಿಕಿತ್ಸೆ ಪಡೆಯುತ್ತಾರೆ. ಕೆಳ ಮಧ್ಯಮ ಹಾಗೂ ಕಡುಬಡವರು ಮಹಿಳೆಯರು ಹೆರಿಗೆ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆ ಮೊರೆ ಹೋಗುತ್ತಾರೆ. ಇಂಥ ಸಂದರ್ಭದಲ್ಲಿ ಬಾಣಂತಿಯರಿಗೆ ಸರಿಯಾದ ಆರೈಕೆ, ಚಿಕಿತ್ಸೆ ಸಿಗದೆ ನೋವಿನಿಂದ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.
ಸದರಿ ಸಮಸ್ಯೆಗೆ ಶಸ್ತ್ರ ಚಿಕಿತ್ಸಾ ಘಟಕ ಒಂದೇ ಇರುವುದು ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ. ಕೂಡಲೇ ಇದನ್ನು ಸರಿಪಡಿಸಿ, ಅಗತ್ಯ ಮೂಲಸೌಲಭ್ಯ ಕಲ್ಪಿಸಬೇಕು. ಗರ್ಭಿಣಿಯರ ಆರೋಗ್ಯ ಸೇವೆಯಲ್ಲಿ ಬೇಜವಾಬ್ದಾರಿ ತೋರಿದವರ ವಿರುದ್ಧ ಸೂಕ್ತ ತನಿಖೆ ನಡೆಸಬೇಕು. ತಪ್ಪಿತಸ್ತರಿಗೆ ಶಿಕ್ಷೆಯಾಗಬೇಕು. ಸೋಂಕಿಗೊಳಗಾದ ಬಾಣಂತಿಯರ ಹೆಚ್ಚಿನ ವಿಶ್ರಾಂತಿ ಹಾಗೂ ಆರೈಕೆಗಾಗಿ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು. ಮಹಿಳಾ ಸಂಘಟನೆ ಸಹ ಸಂಚಾಲಕಿ ಎಚ್. ಗೀತಾ, ಎಸ್ .ಬಿ. ಶಿವರಂಜನಿ ಸೇರಿದಂತೆ ಇತರರು ಇದ್ದರು.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.