ಆಲಮಟ್ಟಿ: ಟೆಂಡರ್‌ ಪ್ಯಾಕೇಜ್‌ ಪದ್ದತಿಗೆ ವಿರೋಧ


Team Udayavani, Sep 21, 2022, 6:08 PM IST

16-demand

ಆಲಮಟ್ಟಿ: ಕೃಷ್ಣಾ ಭಾಗ್ಯ ಜಲ ನಿಗಮದವತಿಯಿಂದ ಕರೆಯಲಾಗುತ್ತಿರುವ ಕಾಮಗಾರಿಗಳ ಟೆಂಡರ್‌ನ ಪ್ಯಾಕೇಜ್‌ ಪದ್ದತಿ ವಿರೋಧಿಸಿ ಆಲಮಟ್ಟಿ ಕೃಷ್ಣಾತೀರ ಗುತ್ತಿಗೆದಾರರ ಸಂಘದ ವತಿಯಿಂದ ಮುಖ್ಯ ಅಭಿಯಂತರರಿಗೆ ಮನವಿ ಸಲ್ಲಿಸಲಾಯಿತು.

ಮಂಗಳವಾರ ಮಧ್ಯಾಹ್ನ ಕೃಷ್ಣಾ ತೀರ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಲಕಾಜಪ್ಪ ಮೇಟಿ ಅವರ ನೇತೃತ್ವದಲ್ಲಿ ಕೆಬಿಜೆನ್ನೆಲ್‌ ಮುಖ್ಯ ಅಭಿಯಂತರರ ಕಚೇರಿವರೆಗೆ ತೆರಳಿ ಮನವಿ ಸಲ್ಲಿಸಿ ಮಾತನಾಡಿದ ಗುತ್ತಿಗೆದಾರರ ಸಂಘದ ಮಾಜಿ ಅಧ್ಯಕ್ಷ ಸಿ.ಬಿ.ಅಸ್ಕಿ, ಕೃಷ್ಣಾ ಮೇಲ್ದಂಡೆ ಯೋಜನೆಯ ಅನುಷ್ಠಾನಕ್ಕಾಗಿ ಅಖಂಡ ವಿಜಯಪುರ ಜಿಲ್ಲೆಯ ಜನತೆ ಮನೆ-ಮಠ, ಜಮೀನುಗಳನ್ನು ತ್ಯಾಗಮಾಡಿದ್ದಾರೆ. ನಾರಾಯಣಪುರದ ಬಸವಸಾಗರ ಮತ್ತು ಆಲಮಟ್ಟಿ ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಜಲಾಶಯಗಳ ಹಿನ್ನೀರಿಗಾಗಿ ನೂರಾರು ಗ್ರಾಮಗಳ ಜನರು ತಮ್ಮ ಆಸ್ತಿ-ಪಾಸ್ತಿ ಕಳೆದುಕೊಂಡು ನಿರಾಶ್ರಿತ ಸಂತ್ರಸ್ತರಾಗಿದ್ದಾರೆ. ಅವರಲ್ಲಿ ಕೆಲವರು ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದಾರೆ. ಬೃಹತ್‌ ಮೊತ್ತದ ಒಂದೊಂದು ಪ್ಯಾಕೇಜ್‌ ಟೆಂಡರ್‌ ಕರೆಯುತ್ತಿರುವದರಿಂದ ಈ ಭಾಗದ ಗುತ್ತಿಗೆದಾರರು ನಿರುದ್ಯೋಗಿಗಳಾಗುವಂತಾಗಿದೆ ಎಂದು ಆರೋಪಿಸಿದರು.

ಕೃಷ್ಣಾ ಭಾಗ್ಯ ಜಲ ನಿಗಮದ ಆಲಮಟ್ಟಿ ವಲಯದಲ್ಲಿ ಕರೆಯಾಗಿರುವ ಸಿಸಿ ರಸ್ತೆ, ವಿತರಣಾ ಕಾಲುವೆ, ಅಚ್ಚುಕಟ್ಟು ರಸ್ತೆಗಳು ಸೇರಿದಂತೆ ವಿವಿಧ ಕಾಮಗಾರಿಗಳನ್ನು ಒಂದುಗೂಡಿಸಿ 30ರಿಂದ40ಕೋಟಿ ರೂ.ಗಳ ಮೊತ್ತದಲ್ಲಿ ಟೆಂಡರ್‌ ಕರೆಯುತ್ತಿರುವದರಿಂದ ನೂರಾರು ಗುತ್ತಿಗೆದಾರರು ನಿರುದ್ಯೋಗ ಸಮಸ್ಯೆ ಎದುರಿಸಲಿದ್ದಾರೆ ಎಂದು ಹೇಳಿದರು.

ಬೇರೆ ಬೇರೆ ಅಂದಾಜು ಪತ್ರಿಕೆಗಳನ್ನು ಒಂದುಗೂಡಿಸಿ ಟೆಂಡರ್‌ ಕರೆಯಬಾರದು ಎಂದು ಸರ್ಕಾರದ ಸ್ಪಷ್ಟ ನಿರ್ದೇಶನವಿದ್ದರೂ ಅಧಿಕಾರಿಗಳು ಕೆಲವೇ ಜನ ಗುತ್ತಿಗೆದಾರರಿಗೆ ಅನುಕೂಲ ಕಲ್ಪಿಸಲು ಪ್ಯಾಕೇಜ್‌ ಮಾಡಲಾಗುತ್ತಿದೆ. ಇಷ್ಟೇ ಅಲ್ಲದೇ ಬೇರೆ ವಿಧದ ಕಾಮಗಾರಿಗಳಿದ್ದರೂ ಅವುಗಳನ್ನು ಒಂದುಗೂಡಿಸಿದ್ದಾರೆ. ವಿತರಣಾ ಕಾಲುವೆಗಳಲ್ಲಿಯೂ ಬೇರೆ ಬೇರೆ ಕಿ.ಮೀ.ಗಳಲ್ಲಿ ಕಾಮಗಾರಿಗಳಿದ್ದರೂ ಅವುಗಳನ್ನೂ ಕೂಡ ಒಂದುಗೂಡಿಸಿದ್ದಾರೆ. ಹೀಗೆ ವ್ಯವಸ್ಥಿತವಾಗಿ ಸಣ್ಣ ಗುತ್ತಿಗೆದಾರರನ್ನು ಕಾಮಗಾರಿಗಳಿಂದ ಮುಕ್ತ ಮಾಡುವ ಹುನ್ನಾರ ಅಡಗಿದೆ ಎಂದು ಗುತ್ತಿಗೆದಾರರ ಸಂಘದ ಮಾಜಿ ಅಧ್ಯಕ್ಷ ಸಿ.ಬಿ.ಅಸ್ಕಿ ಹೇಳಿದರು.

ಗುತ್ತಿಗೆದಾರ ಸಿ.ಜಿ.ವಿಜಯಕರ ಮಾತನಾಡಿ, ಇತ್ತೀಚೆಗೆ ಆಲಮಟ್ಟಿ ಎಡದಂಡೆ ಕಾಲುವೆ ವಿಭಾಗದಲ್ಲಿ ಕರೆಯಲಾಗಿರುವ ಕಾಮಗಾರಿಗಳಿಗೆ ಹಳೆಯ ದರವನ್ನು ನಿಗದಿಪಡಿಸಲಾಗಿದೆ. ಅದನ್ನು ಹೊಸ ದರಕ್ಕೆ ಮಾರ್ಪಡಿಸಿ ಸಣ್ಣ ಗುತ್ತಿಗೆದಾರರಿಗೂ ಕಾಮಗಾರಿ ನಿರ್ವಹಿಸುವಂತೆ ಟೆಂಡರ್‌ ಕರೆಯಬೇಕು ಎಂದರು.

ಸಂಘದ ಅಧ್ಯಕ್ಷ ಮಲಕಾಜಪ್ಪ ಮೇಟಿ ಮಾತನಾಡಿ, ಕೃಷ್ಣಾ ಭಾಗ್ಯ ಜಲ ನಿಗಮದ ಆಲಮಟ್ಟಿ ವಲಯ ಮುಖ್ಯ ಅಭಿಯಂತರರ ಕಚೇರಿ ವ್ಯಾಪ್ತಿಯಲ್ಲಿ ಬರುವ ವಿವಿಧ ವಿಭಾಗಗಳಲ್ಲಿ ಕರೆಯಲಾಗಿರುವ ಪ್ಯಾಕೇಜ್‌ ಟೆಂಡರ್‌ ಪದ್ದತಿಯನ್ನು ರದ್ದುಗೊಳಿಸಬೇಕು ಮತ್ತು ಸ್ಥಳೀಯ ಗುತ್ತಿಗೆದಾರರಿಗೆ ಕಾಮಗಾರಿಗಳನ್ನು ನಿರ್ವಹಿಸಲು ಅನುಕೂಲವಾಗುವಂತೆ ಟೆಂಡರ್‌ ಕರೆಯಬೇಕು. ಈಗ ಕರೆಲಾಗಿರುವ ಪ್ಯಾಕೇಜ್‌ ಟೆಂಡರ್‌ ಪದ್ದತಿಯನ್ನು ಕೈಬಿಡಬೇಕು ಇಲ್ಲದಿದ್ದರೆ ಮುಖ್ಯ ಅಭಿಯಂತರರ ಕಚೇರಿಯ ಆವರಣದಲ್ಲಿ ಅರ್ನಿಷ್ಠ ಧರಣಿ ಸತ್ಯಾಗ್ರಹ ನಡೆಸಲಾಗುವದು ಎಂದು ಎಚ್ಚರಿಕೆ ನೀಡಿದರು.

ಮನವಿಯನ್ನು ಉಪಮುಖ್ಯ ಅಭಿಯಂತರ ಡಿ.ಸುರೇಶ ಸ್ವೀಕರಿಸಿದರು. ರಾಯನಗೌಡ ತಾತರಡ್ಡಿ, ಜೆ.ಟಿ.ಇಲಕಲ್ಲ, ಎಚ್‌.ಟಿ.ಕುರಿ, ಎಸ್‌.ಐ.ಹಿರೇಮಠ, ಬಿ.ಪಿ.ರಾಠೊಡ, ವೈ.ವೈ.ಬಿರಾದಾರ, ಎಸ್‌.ಎಲ್‌.ಲಮಾಣಿ, ಪಿ.ಎಸ್‌ .ಬಯಾಪುುರ, ವೆಂಕಟೇಶ ನಾಯಕ, ಬಿ.ವಿ.ಮೈಲೇಶ್ವರ, ವೈ. ವೈ.ಚಲವಾದಿ ಇದ್ದರು.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.