ಅಂಬೇಡ್ಕರ್‌ ತುಳಿತಕ್ಕೊಳಗಾದವರ ದೇವರು:ಎ.ಎಸ್‌. ಪಾಟೀಲ

ಸರ್ವರಿಗೂ ಸಮಬಾಳು, ಸಮಪಾಲು ಎನ್ನುವುದನ್ನು ಬಿಂಬಿಸಿದ ಅಂಬೇಡ್ಕರ್‌ ಎಲ್ಲರಿಗೂ ಆದರ್ಶ ಎಂದರು.

Team Udayavani, Apr 15, 2021, 6:28 PM IST

AS-Nada

ಮುದ್ದೇಬಿಹಾಳ: ದೇಶದಲ್ಲಿ ಜಾತಿ ವ್ಯವಸ್ಥೆ ಇರುವರೆಗೂ ಡಾ| ಅಂಬೇಡ್ಕರ್ ಪ್ರತಿಪಾದಿಸಿದ ಮೀಸಲಾತಿ ವ್ಯವಸ್ಥೆ ಜಾರಿಯಲ್ಲಿರುತ್ತದೆ. ಈ ಬಗ್ಗೆ ನಾನು ವಿಧಾನಸಭೆ ಅಧಿ ವೇಶನದಲ್ಲೂ ಮಾತನಾಡಿದ್ದೇನೆ. ಡಾ|ಅಂಬೇಡ್ಕರ್ ಅವರನ್ನು ದೂರವಿರಿಸುವುದು ಯಾರಿಂದಲೂ ಸಾಧ್ಯವಿಲ್ಲ. ಅವರು ತುಳಿತಕ್ಕೊಳಗಾದ ಎಲ್ಲ ಜನರ ದೇವರು ಎಂದು ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಹೇಳಿದರು.

ಅಂಬೇಡ್ಕರ್‌ ವೃತ್ತದಲ್ಲಿ ದಲಿತ ಸಂಘಟನೆಗಳು ಆಯೋಜಿಸಿದ್ದ ಡಾ| ಅಂಬೇಡ್ಕರ್‌ರವರ 130ನೇ ಜಯಂತಿಯಲ್ಲಿ ಮೂರ್ತಿಗೆ ಹೂಮಾಲೆ ಹಾಕಿ, ಮಹಾನಾಯಕ ಕ್ಯಾಲೆಂಡರ್‌ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ದೇಶಾಭಿಮಾನಕ್ಕೆ ಇನ್ನೊಂದು ಹೆಸರೇ ಅಂಬೇಡ್ಕರ್‌. ತುಳಿತಕ್ಕೊಳಗಾದವರ ಪರ ನಿಂತು ನ್ಯಾಯ ಕೊಡಿಸಿದರು. ಅವರ ನೇತೃತ್ವದಲ್ಲಿ ರಚನೆಯಾದ ಸಂವಿಧಾನ ದೇಶಕ್ಕೆ ದೊಡ್ಡ ಕೊಡುಗೆ. ಸರ್ವರಿಗೂ ಸಮಬಾಳು, ಸಮಪಾಲು ಎನ್ನುವುದನ್ನು
ಬಿಂಬಿಸಿದ ಅಂಬೇಡ್ಕರ್‌ ಎಲ್ಲರಿಗೂ ಆದರ್ಶ ಎಂದರು.

ಎಲ್ಲರ ಬೇಡಿಕೆಯಂತೆ ಅಂಬೇಡ್ಕರ್ ವೃತ್ತದಲ್ಲಿ ಡಾ| ಅಂಬೇಡ್ಕರ್‌ರವರ ಬೃಹತ್‌ ಕಂಚಿನ ಅಥವಾ ಪಂಚಲೋಹದ ಮೂರ್ತಿ ಸ್ಥಾಪನೆಗೆ ವೈಯಕ್ತಿಕವಾಗಿ ಹಣ ಕೊಟ್ಟು ಮಹತ್ವ ಕೊಡುತ್ತೇನೆ. ಅಂಬೇಡ್ಕರ್‌ ಆದರ್ಶ, ವಿಚಾರ ಜನರಿಗೆ ತಿಳಿಸುವ ಅವರ ಮತ್ತು ಅವರ ಬರಹಗಳ ಕುರಿತ ವಿಚಾರ ಸಂಕಿರಣ ಹಮ್ಮಿಕೊಳ್ಳುವ ಯೋಜನೆ ಇದೆ. ನಾನು ಅಂಬೇಡ್ಕರ್‌ ಮತ್ತು ಅವರ ವಿಚಾರಧಾರೆ ಪ್ರೀತಿಸುವ ವ್ಯಕ್ತಿಯಾಗಿ ದಲಿತರು, ಬಡವರು, ತುಳಿತಕ್ಕೊಳಗಾದವರಿಗೆ ನನ್ನ ಕೈಲಾದ ನೆರವು ನೀಡುತ್ತಿದ್ದೇನೆ ಎಂದರು.

ಈ ವೇಳೆ ಪುರಸಭೆ ಅಧ್ಯಕ್ಷೆ ಪ್ರತಿಭಾ ಅಂಗಡಗೇರಿ, ಉಪಾಧ್ಯಕ್ಷೆ ಶಾಜಾದಬಿ ಹುಣಚಗಿ, ಎಲ್ಲ ಸದಸ್ಯರು, ಪಿಎಸೈ ಎಂ.ಬಿ. ಬಿರಾದಾರ, ಪುರಸಭೆ ಮುಖ್ಯಾಧಿಕಾರಿ ಗೋಪಾಲ ಕಾಸೆ, ಸಮಾಜ ಕಲ್ಯಾಣಾಧಿಕಾರಿ ಉಮೇಶ ಲಮಾಣಿ, ದಲಿತ ಮುಖಂಡರಾದ ಡಿ.ಬಿ. ಮುದೂರ, ಹರೀಶ ನಾಟಿಕಾರ, ಚನ್ನಪ್ಪ ವಿಜಯಕರ, ರೇವಣೆಪ್ಪ ಹರಿಜನ, ಬಸವರಾಜ ಪೂಜಾರಿ, ಪ್ರಕಾಶ ಚಲವಾದಿ ಸರೂರ, ದೇವರಾಜ ಹಂಗರಗಿ, ಸಿದ್ದು ಚಲವಾದಿ, ಶಶಿಕಾಂತ ಮಾಲಗತ್ತಿ, ಪರಶುರಾಮ ಕೊಣ್ಣೂರ, ಅಶೋಕ ಇಲಕಲ್‌ ಇದ್ದರು.ಹರೀಶ ನಾಟಿಕಾರ ನಿರೂಪಿಸಿದರು.

ವಿದ್ಯುತ್‌ ಅಲಂಕಾರ-ಪೂಜೆ: ಜಯಂತಿ ಹಿನ್ನೆಲೆ ಪುರಸಭೆಯಿಂದ ಅಂಬೇಡ್ಕರ್ ವೃತ್ತದವರೆಗಿನ ರಸ್ತೆಯ ಎರಡೂ ಬದಿಯಲ್ಲಿ ಅಲಂಕಾರಿಕ ವಿದ್ಯುತ್
ದೀಪ ಅಳವಡಿಸಿ, ವೃತ್ತ ಹಾಗೂ ಅಂಬೇಡ್ಕರ್‌ ಮೂರ್ತಿ ಹೂಗಳಿಂದ ಅಲಂಕರಿಸಲಾಗಿತ್ತು. ವೃತ್ತದಲ್ಲಿರುವ ಭಗವಾನ್‌ ಬುದ್ಧ, ಅಂಬೇಡ್ಕರ್‌ ಚಿಕ್ಕ ಮೂರ್ತಿಗಳಿಗೆ ಶಾಸಕರಾದಿಯಾಗಿ ಎಲ್ಲರೂ ಪೂಜೆ ಸಲ್ಲಿಸಿದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.