ಈರುಳ್ಳಿ-ತೊಗರಿಗೆ ಬೆಂಬಲ ಬೆಲೆ ಘೋಷಿಸಿ


Team Udayavani, Dec 1, 2018, 12:31 PM IST

vij-2.jpg

ಬಸವನಬಾಗೇವಾಡಿ: ಈರುಳ್ಳಿ ಹಾಗೂ ತೊಗರಿಗೆ ಕೇಂದ್ರ ಹಾಗೂ ರಾಜ್ಯಸರಕಾರ ತಕ್ಷಣ ಬೆಂಬಲ ಬೆಲೆ ಘೋಷಣೆ ಮಾಡಿ ಅವುಗಳ ಖರೀದಿಗೆ ಮುಂದಾಗಬೇಕು ಎಂದು ಒತ್ತಾಯಿಸಿ ಶುಕ್ರವಾರ ಮನಗೂಳಿ-ಬಿಜ್ಜಳ, ಬಾರಖೇಡ-ಬೀಳಗಿ ರಾಜ್ಯ ಹೆದ್ದಾರಿ ಮೇಲೆ ಈರುಳ್ಳಿ ಸುರಿದು ಪ್ರತಿಭಟನೆ ನಡೆಸಲಾಯಿತು.

ಶುಕ್ರವಾರ ಪಟ್ಟಣದ ಬಸವೇಶ್ವರ ದೇವಸ್ಥಾನದಲ್ಲಿ ತಾಲೂಕಿನಿಂದ ಆಗಮಿಸಿದ್ದ ನೂರಾರು ರೈತರು, ರೈತ ಮಹಿಳೆಯರು ಹಾಗೂ ಅಖಂಡ ಕರ್ನಾಟಕ ರೈತ ಸಂಘದ ಕಾರ್ಯಕರ್ತರು ಮನಗೂಳಿ-ಬಿಜ್ಜಳ ಬಾರಖೇಡ-ಬೀಳಗಿ ರಾಜ್ಯ ಹೆದ್ದಾರಿ ಮಧ್ಯ ಇರುವ ಬಸವೇಶ್ವರ ವೃತ್ತದಲ್ಲಿ ಈರುಳ್ಳಿ ರಸ್ತೆಗೆ ಚೆಲ್ಲಿ ಪ್ರತಿಭಟನೆ ಮಾಡಿ ರಾಜ್ಯ ಹಾಗೂ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗುತ್ತಾ ಕೆಲ ಹೊತ್ತು ಪ್ರತಿಭಟನೆ ನಡೆಸಿದರು.

ನಂತರ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ರೈತರು ಬೆಳೆದ ಈರುಳ್ಳಿಗೆ ಶ್ರಮದ ತಕ್ಕ ಬೆಲೆ ಇಲ್ಲ. ಮಾರುಕಟ್ಟೆಗೆ ತೆಗೆದುಕೊಂಡು ಹೋದರು ಪ್ರಯೋಜನವಿಲ್ಲವೆಂದು ಈರುಳ್ಳಿ ಬೆಳೆದ ರೈತರು ಈರುಳ್ಳಿಯನ್ನು ರಸ್ತೆಗೆ ಹಾಕುವ ಪರಿಸ್ಥಿತಿ ನಿರ್ಮಾ ಣವಾಗಿದೆ ಎಂದು ಹೇಳಿದರು.

ಸರಿಯಾದ ಬೆಲೆ ಸಿಗದೆ ರೈತರು ಈರುಳ್ಳಿ ಮುಂದೆ ಕುಳಿತು ಕಣ್ಣೀರಿಡುತ್ತಿದ್ದಾರೆ. ಮೊದಲೇ 3-4 ವರ್ಷಗಳಿಂದ ಭೀಕರ ಬರಗಾಲಕ್ಕೆ ನಲುಗಿದ ರೈತರು ಅಲ್ಪ ಸ್ವಲ್ಪ ಬೆಳೆದ ಈರುಳ್ಳಿಗಾದರೂ ಬೆಲೆ ಸಿಕ್ಕು ನೆಮ್ಮದಿಯಿಂದ ಇರಬೇಕೆಂದರೆ ಅದೂ ಕೂಡ ಸಾಧ್ಯವಿಲ್ಲದಂತಾಗಿದೆ. ಈರುಳ್ಳಿಗೆ ಬೆಂಬಲ ಬೆಲೆ ಬರುವವರೆಗೂ ಬಳತದಲ್ಲಿ ಸಂಗ್ರಹಣೆ ಮಾಡಿಟ್ಟರೆ ಬಂದ ಈರುಳ್ಳಿ ಫಸಲಿನಲ್ಲಿ ಅರ್ಧ ಭಾಗ ಕೊಳೆತು ಹೋಗುತ್ತವೆ.

ಬಂದಷ್ಟು ಹಣ ಬರಲಿ ಎಂದು ಮಾರುಕಟ್ಟೆಗೆ ತೆಗೆದುಕೊಂಡು ಹೋಗಿ ಮಾರಾಟ ಮಾಡಬೇಕು. ಇಲ್ಲವೆ ಈರುಳ್ಳಿ ಬೆಲೆ ಕೇಳಿದರೆ ಮನನೊಂದು ಅಲ್ಲಿಯೇ ರಸ್ತೆಯ ಮೇಲೆ ಹಾಕಿ ಬರಬೇಕು ಅಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಾರಣ ಸರ್ಕಾರ ಕೂಡಲೇ ಈರುಳ್ಳಿಗೆ ಕನಿಷ್ಠ ಕ್ವಿಂಟಾಲ್‌ ಗೆ 2000ರೂ.ವರೆಗೆ ಬೆಂಬಲ ಬೆಲೆ ಘೋಷಿಸಿ ಸರ್ಕಾರವೇ ಈರುಳ್ಳಿಯನ್ನು ಖರೀದಿಸಬೇಕು.

ಈಗಾಗಲೇ ಸರ್ಕಾರ ಈರುಳ್ಳಿಗೆ ಕೇವಲ 900 ರೂ. ವರೆಗೆ ಬೆಂಬಲ ಬೆಲೆ ಘೋಷಿಸಿದ್ದು ಇದು ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ಅಲ್ಲ. ಈರುಳ್ಳಿ ನಾಟಿ ಮಾಡುವ ಪ್ರಾರಂಭದಿಂದಲೂ ಫಸಲು ಕೈ ಸೇರುವವರೆಗೂ ಎಲ್ಲ ರೀತಿಯ ಖರ್ಚು ವೆಚ್ಚಗಳನ್ನು ಲೆಕ್ಕ ಹಾಕಿ ಬೆಂಬಲ ಬೆಲೆ ಘೋಷಿಸಬೇಕೆಂದು ಒತ್ತಾಯಿಸಿದರು.

ತಾಲೂಕಾಧ್ಯಕ್ಷ ಸಿದ್ದರಾಮ ಅಂಗಡಗೇರಿ ಮಾತನಾಡಿ, ರಾಜ್ಯದಲ್ಲಿ ಭೀಕರ ಬರಗಾಲದ ನಡುವೆಯೂ ರೈತರು ಅಲ್ಪ ಸ್ವಲ್ಪ ತೊಗರಿ ಬೆಳೆದಿದ್ದಾರೆ. ಈ ಬಾರಿ ಸಕಾಲಕ್ಕೆ ಮಳೆ ಆಗದೆ ಇದ್ದರೂ ಪ್ರತಿ ಎಕರೆಗೆ 2 ಕ್ವಿಂಟಲ್‌ವರೆಗೆ ತೊಗರಿ ಫಸಲು ಬಂದಿದೆ. ಆದರೆ ಈ ಸದ್ಯ ರೈತರು ತೊಗರಿಯನ್ನು ಕಟಾವು ಮಾಡಿ ಫಸಲು ಕೈ ಸೇರಿದೆ. ಕಳೆದ ವರ್ಷ ಸರ್ಕಾರ ಈ ಸಮಯದಲ್ಲಿ ತೊಗರಿಗೆ ಬೆಂಬಲ ಬೆಲೆ ಘೋಷಿಸಿ ಖರೀದಿ ಪ್ರಾರಂಭಿಸಿತ್ತು. ಆದರೆ ಈ ವರ್ಷ ಇಲ್ಲಿವರೆಗೂ ಬೆಂಬಲ ಬೆಲೆ ಘೋಷಿಸಿ ತೋಗರಿ ಖರೀದಿಸುವ ಕುರಿತು ಯಾವುದೇ ಘೋಷಣೆ ಮಾಡಿಲ್ಲ.

ತೊಗರಿ ಬೆಳೆದು ಅಲ್ಪ ಸ್ವಲ್ಪ ಫಸಲು ಪಡೆದುಕೊಂಡು ರೈತರು ಇಂದು ನಾಳೆ ಸರ್ಕಾರ ಬೆಂಬಲ ಬೆಲೆ ಘೋಷಿಸಿ ತೊಗರಿ ಖರೀದಿಸುತ್ತಾರೆಂದು ಚಾತಕ ಪಕ್ಷಿಯಂತೆ ಕಾದು ಕುಳಿತಿದ್ದಾರೆ. ಆದ್ದರಿಂದ ಸರ್ಕಾರ ಕೂಡಲೇ ಬೆಂಬಲ ಬೆಲೆ ಘೋಷಿಸಿ ತೊಗರಿ ಖರೀದಿಯನ್ನು ಪ್ರಾರಂಭಿಸಬೇಕು. ರಾಜ್ಯ ಸರಕಾರ ಹಿಂದೇಟು ಹಾಕಿದಲ್ಲಿ ಉಗ್ರ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಈರಣ್ಣ ದೇವರಗುಡಿ, ಡಾ| ಎಂ.ರಾಮಚಂದ್ರ ಬಮ್ಮನಜೋಗಿ, ಹೊನಕೆರೆಪ್ಪ ತೆಲಗಿ, ಕೃಷ್ಣಪ್ಪ ಬಮರೆಡ್ಡಿ, ಹನುಮಂತ ತೋಟದ, ಚಂದ್ರಾಮ ತೆಗ್ಗಿ, ಶಿವಾನಂದ ಐಗಳಿ, ಶ್ರೀಶೈಲ ತೋಟದ, ಪರಮಾನಂದ ಮಾಳೂರ, ರಂಜಾನ ಹೆಬ್ಟಾಳ, ಸುಭಾಷ್‌ ಬಿಸಿರೊಟ್ಟಿ, ಶಾಂತಗೌಡ ಬಿರಾದಾರ, ಮೈಬೂಬಸಾಬ ಅವಟಿ, ರೈತ ಮಹಿಳೆಯರಾದ ಶಾರದಾ ಲಮಾಣಿ, ಕಾಳಮ್ಮ ಬಡಿಗೇರ. ಗುರುಬಾಯಿ ಹಾದಿಮನಿ, ಜ್ಯೋತಿ ಹಿರೇಮಠ, ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ನಂತರ ಗ್ರೇಡ್‌-2 ತಹಶೀಲ್ದಾರ್‌ ಪಿ.ಜಿ. ಪವಾರ ಅವರಿಗೆ ಮನವಿ ಸಲ್ಲಿಸಿದರು.

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

Government will not turn a blind eye if public is inconvenienced: CM Siddaramaiah

Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.