BJP ಹೈಕಮಾಂಡ್ ಗೆ ದೊಡ್ಡವರ ಪಕ್ಷ ವಿರೋಧಿ ಚಟುವಟಿಕೆ ಮಾಹಿತಿ: ಯತ್ನಾಳ್

ಸೋಮಣ್ಣ, ಡಾ.ಜಾಧವ್ , ಜೊಲ್ಲೆ, ಖೂಬಾ ಅವರೆಲ್ಲ ದೂರಿದ್ದಾರೆ...

Team Udayavani, Jun 24, 2024, 6:30 PM IST

yatnal

ವಿಜಯಪುರ : ಲೋಕಸಭೆ ಚುನಾವಣೆಯಲ್ಲಿ ದೊಡ್ಡ ದೊಡ್ಡ ಹುದ್ದೆಯಲ್ಲಿದ್ದವರೇ ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಕುರಿತು ಹೈಕಮಾಂಡ್ ಗಮನಕ್ಕೆ ಬಂದಿದೆ. ಹೈಕಮಾಂಡ್ ಏನು ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ಸೋಮವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಯಾವ ಯಾವ ಕ್ಷೇತ್ರದಲ್ಲಿ ಏನೇನಾಗಿದೆ, ಪಕ್ಷ ವಿರೋಧಿ ಚಟುವಟಿಕೆ ಎಲ್ಲಿ ನಡೆದಿದೆ ಎಂಬುದರ ಕುರಿತು ಹೈಕಮಾಂಡ್ ಗೆ ಮಾಹಿತಿ ರವಾನೆಯಾಗಿದೆ ಸೋಲಿನ ಕುರಿತು ಹಲವು ಕ್ಷೇತ್ರಗಳಿಂದಲೂ ದೂರು ಕೇಳಿ ಬಂದಿದ್ದು, ಸತ್ಯ ಸೋಧನಾ ಸಮಿತಿ ರಚಿಸಬೇಕು. ಹೈಕಮಾಂಡ್ ಏನು ನಿರ್ಧಾರ ಕೈಗೊಳ್ಳಲಿದೆ ಎಂದು ಕಾದು ನೋಡಬೇಕಿದೆ ಎಂದರು.

ದಾವಣಗೆರೆ ಕ್ಷೇತ್ರದ ಸೋಲಿಗೆ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾರಣ ಎಂದು ಹರಿಹರದ ಶಾಸಕರಾಗಿರುವ ಹರೀಶ ಮಾಡಿರುವುದು ಗಂಭೀರ ಆರೋಪ. ಪಕ್ಷದ ಓರ್ವ ಶಾಸಕರೇ ಆರೋಪ ಮಾಡುತ್ತಾರೆ ಎಂದರೆ ಸಾಮಾನ್ಯವಾಗಿ ಪರಿಗಣಿಸುವಂತಿಲ್ಲ ಎಂದರು.

ಯಾವ ಅಭ್ಯರ್ಥಿ ತೊಂದರೆ ಅನುಭವಿಸಿದ್ದಾರೆ ಎಂಬುದರ ಕುರಿತು ಸ್ವಯಂ ಅಭ್ಯರ್ಥಿಗಳೇ ಮಾಹಿತಿ ನೀಡಿದ್ದಾರೆ. ಎಲ್ಲೆಲ್ಲಿ ಸಂಪನ್ಮೂಲ ಹಾಗೂ ಇತರೆ ಸೌಲಭ್ಯಗಳ ಕೊರತೆ ಆಗಿದೆ ಎಂಬುದರ ಕುರಿತು ಸ್ಪರ್ಧಿಗಳೇ ಮಾಹಿತಿ ನೀಡಿದ್ದಾರೆ ಎಂದರು.

ತುಮಕೂರು ಕ್ಷೇತ್ರದಲ್ಲಿ ಸೋಮಣ್ಣ ಅವರನ್ನ ಸೋಲಿಸಲು ಬಿಜೆಪಿ ಮೂಲದಿಂದಲೇ ಅಪಾರ ಪ್ರಮಾಣದ ಹಣ ಹೋಗಿರುವ ಆರೋಪವಿದೆ. ಬೀದರ್ ನಲ್ಲಿ ಭಗವಂತ ಖೂಬಾ, ಕಲಬುರಗಿಯಲ್ಲಿ ಉಮೇಶ ಜಾಧವ್ ಇದೇ ರೀತಿಯ ಆರೋಪ ಮಾಡಿದ್ದಾರೆ, ಚಿಕ್ಕೋಡಿಯಲ್ಲಿ ಅಣ್ಣಾಸಾಹೇಬ ಜೊಲ್ಲೆ ಪರಿಸ್ಥಿತಿಯೂ ಇದೇ ಎಂದಿದ್ದಾರೆ. ಹೀಗಾಗಿ ಸತ್ಯ ಶೋಧನಾ ಸಮಿತಿ ರಚನೆಯಾಗಲಿ ಎಂದು ಆಗ್ರಹಿಸಿದರು.

ಲೋಕಸಭೆ ಚುನಾವಣೆಯಲ್ಲಿ ಗೆದ್ದವರು ಮಾತ್ರವಲ್ಲ, ಪರಾಜಿತರು ಸಹ ಪಕ್ಷ ವಿರೋಧಿ ಚಟುವಟಿಕೆ ಕುರಿತು ದೂರಿದ್ದಾರೆ. ಹಾಗಂತ ಎಲ್ಲ ಕಡೆಗಳಲ್ಲೂ ಪಕ್ಷ ವಿರೋಧಿ ಚಟುವಟಿಕೆಯೇ ಕಾರಣವಲ್ಲ. ಕೆಲವು ಸಂಸದರು ಪಕ್ಷದ ಕಾರ್ಯಕರ್ತರೊಂದಿಗೆ ಉತ್ತಮ ಬಾಂಧವ್ಯ ಇರಿಸಿಕೊಳ್ಳದಿರುವುದು, ಕ್ಷೇತ್ರದ ಜನರ ಸಂಪರ್ಕ ಕಳೆಕೊಂಡುದು ಕೂಡ ಅವರ ಸೋಲಿಗೆ ಕಾರಣವಾಗಿದೆ. ಇಂಥಲ್ಲೆಲ್ಲ ಮೋದಿ ಅಥವಾ ಬಿಜೆಪಿ ಪಕ್ಷದ್ದೇನೂ ತಪ್ಪಿಲ್ಲ ಎಂದು ವಿಶ್ಲೇಷಿಸಿದರು.

ನನಗೂ ವೈರುಧ್ಯವಿತ್ತು
ವಿರೋಧಿ ಅಲೆ ಇದ್ದ ಕ್ಷೇತ್ರಗಳಲ್ಲಿ ಬೇರೆಯವರಿಗೆ ಬಿಟ್ಟು ಕೊಡಬೇಕಿತ್ತು. ವಿಜಯಪುರ ಕ್ಷೇತ್ರದಲ್ಲಿ ಹಾಲಿ ಸಂಸದ ರಮೇಶ ಜಿಗಜಿಣಗಿ ಮಧ್ಯೆ ನನಗೂ ರಾಜಕೀಯ ವೈರುಧ್ಯವಿತ್ತು. ಒಂದು ಕ್ಷೇತ್ರ ಕಳೆದುಕೊಂಡರೇ ಮೋದಿ ಅವರನ್ನೇ ಕಳೆದುಕೊಂಡಂತೆ ಎಂಬ ಕಾರಣಕ್ಕೆ ಪಕ್ಷ ಹಾಗೂ ದೇಶದ ವಿಚಾರ ಬಂದ ಕಾರಣ ಒಂದಾಗಿ ಕೆಲಸ ಮಾಡಿದ್ದೇವೆ ಎಂದರು.

ಭವಿಷ್ಯದಲ್ಲಿ ಇಂಥ ಕಾರಣಗಳಿಂದ ಸಾಕಷ್ಟು ಬದಲಾವಣೆ ಆಗಲಿದೆ ಎಂದು ಭವಿಷ್ಯ ನುಡಿದ ಅವರು, ಖಚಿತವಾಗಿ ಬದಲಾವಣೆ ಆಗಲಿದ್ದು, ಎಲ್ಲವೂ ಸ್ವಚ್ಛವಾಗಲಿದೆ ಎಂದರು.

ಹಿಂದಿನ ಸರ್ಕಾರದ ಸಂದರ್ಭದಲ್ಲಿ ನಮ್ಮ ಪಕ್ಷಕ್ಕೆ ಭಾರಿ ಬಹುಮತ ಇತ್ತು. ಕಾಶ್ಮೀರದಲ್ಲಿನ ಸಂವಿಧಾನ 370ನೇ ಕಲಂ ತೆಗೆದೆ ಹಾಕಿದೆವು, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಯ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸತತವಾಗಿ ಮೂರನೇ ಬಾರಿಗೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚಿಸಿದ್ದರೂ ಪೂರ್ಣ ಬಹುಮತ ಇಲ್ಲ. 400 ಸ್ಥಾನ ಗೆಲ್ಲುವ ನಿರೀಕ್ಷೆ ಹುಸಿಯಾಗಿದ್ದು, ಇದೀಗ ಎನ್‍ಡಿಎ ಸರ್ಕಾರ ಅಸ್ತಿತ್ವದಲ್ಲಿದೆ. ಮಿತ್ರಪಕ್ಷಗಳೊಂದಿಗೆ ಚರ್ಚಿಸಿ, ಒಪ್ಪಿಗೆ ಪಡೆದ ಮೇಲೆಯೇ ನಿರ್ಣಯ ಕೈಗೊಳ್ಳಬೇಕಿರುವ ಅನಿವಾರ್ಯತೆ ಎದುರಾಗಿದೆ ಎಂದರು.

ಟಾಪ್ ನ್ಯೂಸ್

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

NIA (2)

NIA ದಾಳಿ; ತಮಿಳುನಾಡಿನಲ್ಲಿ ಉಗ್ರ ಸಂಘಟನೆ ಸೇರಲು ಕುಮ್ಮಕ್ಕು: ಇಬ್ಬರ ಸೆರೆ

U.T. Khader ವಿದ್ಯುತ್‌ ಅವಘಡಕ್ಕೆ ಅಧಿಕಾರಿಗಳೇ ಹೊಣೆ

U.T. Khader ವಿದ್ಯುತ್‌ ಅವಘಡಕ್ಕೆ ಅಧಿಕಾರಿಗಳೇ ಹೊಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

“ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Minister Parameshwara; “ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

1-asdsad

Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.