ಬಟ್ಟೆ ಕಳ್ಳತನಕ್ಕೆ ಯತ್ನ: ಗಸ್ತು ತಿರುಗುತ್ತಿದ್ದ ಗೂರ್ಖನ ಸಮಯಪ್ರಜ್ಞೆಯಿಂದ ತಪ್ಪಿದ ಕಳ್ಳತನ


Team Udayavani, Oct 9, 2020, 4:07 PM IST

ಬಟ್ಟೆ ಕಳ್ಳತನಕ್ಕೆ ಯತ್ನ: ಗಸ್ತು ತಿರುಗುತ್ತಿದ್ದ ಗೂರ್ಖನ ಸಮಯಪ್ರಜ್ಞೆಯಿಂದ ತಪ್ಪಿದ ಕಳ್ಳತನ

ಆರೋಪಿ. ಒಳಚಿತ್ರದಲ್ಲಿ ಗೂರ್ಖಾ ಬಹಾದ್ದೂರ್ ಸಿಂಗ್ ಥಾಪಾ

ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಬಟ್ಟೆ ಅಂಗಡಿ ಶಟರ್ ಮುರಿದು ದೋಚಲು ಯತ್ನಿಸಿದ ತೃತೀಯ ಲಿಂಗಿಯೊಬ್ಬನನ್ನು ಅಲ್ಲೇ ಗಸ್ತು ತಿರುಗುತ್ತಿದ್ದ ಗೂರ್ಖನ ಸಮಯಪ್ರಜ್ಞೆಯಿಂದ ಸೆರೆ ಹಿಡಿದ ಕಾರಣ ಲಕ್ಷಾಂತರ ಮೌಲ್ಯದ ಬಟ್ಟೆ ಕಳ್ಳತನ ತಪ್ಪಿದೆ.

ಕಳ್ಳತನಕ್ಕೆ ಯತ್ನಿಸಿದ ತೃತೀಯ ಲಿಂಗಿಯನ್ನು ಕೊಪ್ಪಳ ಜಿಲ್ಲೆಯವನೆಂದು ಗುರುತಿಸಲಾಗಿದೆ. ಕಳ್ಳತನ ಕಂಡು ಆರೋಪಿಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾದ ಗೂರ್ಖಾ ಬಹಾದ್ದೂರ್ ಸಿಂಗ್ ಥಾಪಾ ಇದೀಗ ವ್ಯಾಪಾರಿಗಳ ಮೆಚ್ಚುಗೆಗೆ ಪಾತ್ರವಾಗಿದ್ದು, ತನ್ನ ಜೀವದ ಹಂಗು ತೊರೆದು ಲಕ್ಷಾಂತರ ರೂ. ಮೌಲ್ಯದ ಬಟ್ಟೆ ಕಳ್ಳತನ ತಪ್ಪಿಸಿದ್ದಕ್ಕೆ ನಗದು ಬಹುಮಾನ ಪಡೆದಿದ್ದಾನೆ.

ಗುರುವಾರ ಮಧ್ಯರಾತ್ರಿ ಮುದ್ದೇಬಿಹಾಳ ಪಟ್ಟಣದಲ್ಲಿನ ಮಹಾವೀರ ಜೈನ್ ಎಂಬರಿಗೆ ಸೇರಿದ ದಾದಾಗಣಪತಿ ಬಟ್ಟೆ ಅಂಗಡಿಯ ಶಟರ್ ಮುರಿದು, ಕಳ್ಳತನಕ್ಕೆ ಯತ್ನ ನಡೆದಿತ್ತು. ಈ ಹಂತದಲ್ಲಿ ಗಸ್ತು ತಿರುಗುತ್ತಿದ್ದ ಗೂರ್ಖಾ ಬಹಾದ್ದೂರಸಿಂಗ್ ಅಂಗಡಿ ಕಳ್ಳತನವನ್ನು ಕಂಡು ಕೂಡಲೇ ಅಂಗಡಿ‌ ಮಾಲೀಕನಿಗೆ ಮೊಬೈಲ್ ಕರೆ ಮಾಡಿ ವಿಷಯ ತಿಳಿಸಿದ್ದಾನೆ. ಅಷ್ಟರಲ್ಲಿ ಹೊರಗಿನಿಂದ ಯಾರೋ ಮಾತನಾಡಿದ ಸದ್ದು ಕೇಳಿದ 3-4 ಜನ ಕಳ್ಳರು ಪರಾರಿಯಾಗಲು ಯತ್ನಿಸಿದ್ದಾರೆ. ಈ ಹಂತದಲ್ಲಿ ಜೀವದ ಹಂಗು ತೊರೆದ ಬಹಾದ್ದೂರ್ ಸಿಂಗ್ ತೃತೀಯ ಲಿಂಗಿ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾನೆ.

ಇದನ್ನೂ ಓದಿ:ಮಂಗಳೂರು: ಹೆಬ್ಬಾವು ಕಚ್ಚಿದರೂ ಅಳುಕದೆ ಅದರ ತಲೆಮೇಲೆ ಕಾಲಿಟ್ಟು ಸೆರೆಹಿಡಿದ 10ರ ಪೋರ !

ಕಳ್ಳತನಕ್ಕೆ ಯತ್ನಿಸಿದವರು ಅಂಗಡಿಯಲ್ಲಿನ ಬೆಳೆ ಬಾಳುವ ಸುಮಾರು 3-4 ಲಕ್ಷ ರೂ. ಮೌಲ್ಯದ ಸೀರೆಗಳನ್ನು ಗಂಟು ಕಟ್ಡಿ ಇಟ್ಡಿದ್ದರು. ಗೂರ್ಖಾ ಅದೇ ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ಬಂದು, ಸಮಯಪ್ರಜ್ಞೆ ತೋರದಿದ್ದಲ್ಲಿ ಕಳ್ಳರ ಕೈಚಳಕ ಯಶಸ್ವಿಯಾಗಿ ನಡೆಯುತ್ತಿತ್ತು.

ಗೂರ್ಖಾ ಬಹಾದ್ದೂರ್ ಸಿಂಗ್ ಥಾಪಾ

ಗೂರ್ಖಾ ಸೆರೆಹಿಡಿದು ಕೊಟ್ಟ ಆರೋಪಿ ರಾಯಣ್ಣ ತಾನು ತೃತೀಯ ಲಿಂಗಿಯಾಗಿದ್ದಾನೆ. ಲಿಂಗ ಪರಿವರ್ತನೆ ಶಸ್ತ್ರ ಚಿಕಿತ್ಸಾ ವೈದ್ಯಕೀಯ ವೆಚ್ಚಕ್ಕಾಗಿ 1 ಲಕ್ಷ ರೂ ಬೇಕಿತ್ತು. ಈ ಹಣ ಹೊಂದಿಸಿಕೊಳ್ಳಲು ಕಳ್ಳತನಕ್ಕೆ ಮುಂದಾಗಿದ್ದಾಗಿ ಹೇಳಿಕೊಂಡಿದ್ದಾನೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ಬಯಲಾಗಿದೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

Vijayapura; ಯತ್ನಾಳ ಭಾವಚಿತ್ರವಿದ್ದ ಬೆಂಬಲಿಗರ ಬ್ಯಾನರ್ ಹರಿದ ಕಿಡಿಗೇಡಿಗಳು

Vijayapura; ಯತ್ನಾಳ ಭಾವಚಿತ್ರವಿದ್ದ ಬೆಂಬಲಿಗರ ಬ್ಯಾನರ್ ಹರಿದ ಕಿಡಿಗೇಡಿಗಳು

dw

Muddebihal: ಬೈಕ್ ವ್ಹೀಲಿಂಗ್ ನಾಲ್ವರು ಯುವಕರ ಬಲಿ

Yathanal

Ganesh Festival: ಪ್ರಸಾದಕ್ಕೆ ಪರವಾನಗಿ: ಹಿಂದೂ ಹಬ್ಬಗಳ ಹತ್ತಿಕ್ಕುವ ಪ್ರಯತ್ನ: ಯತ್ನಾಳ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.