ಅನಿಷ್ಠ ಪದ್ದತಿ ನಿವಾರಣೆಗೆ ಜಾಗೃತಿ ಅಗತ್ಯ


Team Udayavani, Aug 20, 2022, 4:19 PM IST

20-caste

ವಿಜಯಪುರ: ಸಂವಿಧಾನದಲ್ಲಿ ಮದುವೆ ವಯಸ್ಸಿಗೆ ಮಿತಿ ಇದ್ದರೂ ಸಮಾಜದಲ್ಲಿ ಅವ್ಯಾ ಹತವಾಗಿ ಬಾಲ್ಯವಿವಾಹಗಳು ನಡೆಯುತ್ತಿವೆ. ಆದರೆ ಜನರಲ್ಲಿ ಇದರ ದುಷ್ಪರಿಣಾಮಗಳ ಅರಿವು ಇಲ್ಲದಿರುವುದರಿಂದ ಇಂತಹ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಸಚಿವ ಬಿ.ಎಸ್‌.ನಾವಿ ಹೇಳಿದರು.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅಹಲ್ಯಾ ಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ ಹಾಗೂ ಎನ್ನೆಸ್ಸೆಸ್‌ ಕೋಶದಿಂದ ಹಮ್ಮಿಕೊಂಡಿದ್ದ ವರದಕ್ಷಿಣೆ, ಬಾಲ್ಯವಿವಾಹ ಮತ್ತು ಚುಡಾಯಿಸುವಿಕೆ ಕುರಿತ ಕಾನೂನು ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆಧುನಿಕ ಸಮಾಜದಲ್ಲೂ ಬಾಲ್ಯವಿವಾಹಗಳು ನಡೆಯುತ್ತಿರುವುದು ನೋವಿನ ಸಂಗತಿ ಎಂದರು.

ಸಮಾಜದಲ್ಲಿ ಇನ್ನೂ ವರದಕ್ಷಿಣೆ, ಬಾಲ್ಯವಿವಾಹ ಮತ್ತು ಮಹಿಳೆಯರನ್ನು ಚುಡಾಯಿಸುವಂಥ ಅನಿಷ್ಠ ಪದ್ದತಿಗಳು ಇವತ್ತಿಗೂ ಜಾರಿಯಲ್ಲಿವೆ. ಇಂಥ ಕೃತ್ಯಗಳಿಗೆ ಕಡಿವಾಣ ಹಾಕಲು ವಿದ್ಯಾವಂತರು ಸಮಾಜದಲ್ಲಿ ಅರಿವು ಮೂಡಿಸುವ ಜವಾ ಬ್ದಾರಿ ನಿಭಾಯಿಸಬೇಕು. ಇಂತಹ ಕಾರ್ಯಕ್ರಮಗಳಿಂದ ಜನರು ಸದೃಢರಾಗಲು ಸಾಧ್ಯ ಎಂದರು.

ಸಂಪನ್ಮೂಲ ವ್ಯಕ್ತಿಯಾಗಿದ್ದ ಅಂಜುಮನ್‌ ಕಾನೂನು ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಉಜ್ವಲಾ ಸರನಾಡಗೌಡ ಮಾತನಾಡಿ, ವರದಕ್ಷಿಣೆ, ಬಾಲ್ಯವಿವಾಹ ಮತ್ತು ಚುಡಾಯಿಸುವಿಕೆ ಸಾಮಾಜಿಕ ರೋಗದ ಲಕ್ಷಣಗಳು. ಕಾನೂನು ಮೂಲ ಕವೇ ಇಂಥ ರೋಗಗಳಿಗೆ ಚಿಕಿತ್ಸೆ ಸಾಧ್ಯ ಎಂದರು.

ಆದರೆ ಇವುಗಳಿಗೆ ಮೂಲಕಾರಣ ಬೇರೆಯೇ ಇದೆ. ಮಹಿಳೆ ಭೋಗದ ವಸ್ತು ಎಂದು ತಿಳಿದಿರುವ ಸಮಾಜದಲ್ಲಿನ ಅನೇಕರ ಧೋರಣೆ, ಸಮಾಜದಲ್ಲಿರುವ ಮೌಲ್ಯ ವ್ಯವಸ್ಥೆ, ಪಿತೃ ಪ್ರಧಾನ ಧೋರಣೆಯಿಂದಾಗಿ ಇಂತಹ ಪೀಡುಗು ಹಾಗೂ ಕೃತ್ಯಗಳು ನಡೆಯುತ್ತಿವೆ. ಇಂಥ ಮನಸ್ಥಿತಿ ಜನಮನದಲ್ಲಿ ಬದಲಾದಾಗ ಮಾತ್ರ ಮಹಿಳೆಯರ ಮೇಲಿನ ಶೋಷಣೆ ನಿಗ್ರಹ ಸಾಧ್ಯ. ಅಲ್ಲದೇ ಮಹಿಳೆಯರಿಗೆ ಕಾನೂನಿನಲ್ಲಿ ಹಲವು ಅವಕಾಶಗಳಿದ್ದು, ಅವುಗಳ ಸದ್ಬಳಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು.

ಮಹಿಳಾ ಅಧ್ಯಯನ ಕೇಂದ್ರದ ಮುಖ್ಯಸ್ಥೆ ವೈ.ಲಕ್ಷ್ಮೀದೇವಿ ಪ್ರಾಸ್ತಾವಿಕ ಮಾತನಾಡಿದರು. ಎನ್ನೆಸ್ಸೆಸ್‌ ಕೋಶದ ಸಂಯೋಜಕಿ ಟಿ.ಶಾಂತಾದೇವಿ ಸ್ವಾಗತಿಸಿದರು. ಡಾ| ಶೈಲಾ ಬಳಗಾನೂರ ನಿರೂಪಿಸಿದರು. ಜಕ್ಕವ್ವ ವಠಾರ ವಂದಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.