Vijayapura: ದುಡುಕಿನ ನಿರ್ಧಾರ ಕೈಗೊಂಡು ಆಪರೇಷನ್ ಹಸ್ತಕ್ಕೆ ಬಲಿಯಾಗದಿರಿ: ಯತ್ನಾಳ್


Team Udayavani, Sep 1, 2023, 6:07 PM IST

Vijayapura: ದುಡುಕಿನ ನಿರ್ಧಾರ ಕೈಗೊಂಡು ಆಪರೇಷನ್ ಹಸ್ತಕ್ಕೆ ಬಲಿಯಾಗದಿರಿ: ಯತ್ನಾಳ್

ವಿಜಯಪುರ : ರಾಹುಲ್ ಗಾಂಧಿ, ಸಿದ್ಧರಾಮಯ್ಯ, ಶಿವಕುಮಾರ ಕರೆದಿದ್ದಾರೆ ಎಂದು ಬಿಜೆಪಿ ಪಕ್ಷದ ಯಾವುದೇ ಶಾಸಕರು ದುಡುಕಿನ ನಿರ್ಧಾರ ಕೈಗೊಂಡು ಆಪರೇಷನ್ ಹಸ್ತಕ್ಕೆ ಬಲಿಯಾಗಬೇಡಿ. ಕಾಂಗ್ರೆಸ್ ಸೇರಿದರೆ ಭವಿಷ್ಯದಲ್ಲಿ ನೀವೆಂದೂ ಶಾಸಕರಾಗಲು ಸಾಧ್ಯವಿಲ್ಲ. ಅಲ್ಲದೇ ನ ಘರ್ ಕಾ, ನಾ ಘಾಟ್ ಕಾ ಎಂಬಂತೆ ರಾಜಕೀಯ ಭವಿಷ್ಯವೇ ನಾಶವಾಗಲಿದೆ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಎಚ್ಚರಿಸಿದರು.

ಶುಕ್ರವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಬಹಳಷ್ಟು ಶಾಸಕರು ಅಸಮಾಧಾನಗೊಂಡಿದ್ದಾರೆ. ಸ್ವಪಕ್ಷದ ಶಾಸಕರಗೆ ಸಚಿವರು ಗೌರವ ನೀಡುತ್ತಿಲ್ಲವಂದು, ಮತ್ತೆ ಕೆಲ ಶಾಸಕರಿಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂಬ ಅಸಮಾಧಾನವಿದೆ. ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಹಣ ನೀಡುತ್ತಿಲ್ಲ. ಸರ್ಕಾರದ ಐದು ಗ್ಯಾರೆಂಟಿಗಳಿಗೆ ವಾರ್ಷಿಕವಾಗಿ 52 ಸಾವಿರ ಕೋಟಿ ರೂ. ಅಗತ್ಯವಿದ್ದು, ಈ ಹಣ ಹೊಂದಿಸಲು ಅನಗತ್ಯವಾಗಿ ತೆರೆಇಗೆ ಹಾಕಲಾಗುತ್ತಿದೆ.

ಬಿಜೆಪಿ ನಾಯಕ ಬಿ.ಎಲ್.ಸಂತೋಷ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಶಾಸಕರ ಮಾಜಿ ಶಾಸಕರು, ಮುಖಂಡರ ಸಭೆಯಲ್ಲಿ ಕಾಂಗ್ರೆಸ್ ಪಕ್ಷದಿಂದ 45 ಶಾಸಕರು ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದ ಅವರಿಗೆ ಎಲ್ಲವೂ ಗಮನಕ್ಕೆ ಬಂದಿರುತ್ತದೆ ಎಂದ ಯತ್ನಾಳ, ಸದರಿ ಸಭೆಗೆ ಏನೋ ಗಡಿಬಿಡಿ ಇದೆ ಎಂದು ನಾನು ಮೊದಲೇ ಹೇಳಿ ಬಂದಿದ್ದೇನೆ. ಆದರೆ ಗಡಿಬಿಡಿ ಏನು ಎಂದು ಹೇಳುವ ಪರಿಸ್ಥಿತಿಯಲ್ಲಿ ಇಲ್ಲ ಎಂದರು.

ಕ್ರಿಕೆಟ್ ಪ್ರೇಮಿಯಲ್ಲ, ಪಾಕ್ ಸೋಲಲಿ : ವಯಕ್ತಿಕವಾಗಿ ನಾನು ಕ್ರಿಕೆಟ್ ಕ್ರೀಡಾ ಆಸಕ್ತಿ ಇರುವ ವ್ಯಕ್ತಿಯಲ್ಲ. ಕ್ರಿಕೆಟ್ ನೇರ ಪ್ರಸಾರ ಇದ್ದರೂ ನಾನು ಸುದ್ದಿ ವಾಹಿನಿಗಳನ್ನು ವೀಕ್ಷಿಸುತ್ತೇನೆ. ಆದರೆ ಏಷಿಯಾ ಕಪ್ ಪಂದ್ಯಾವಳಿಯಲ್ಲಿ ಭಾರತ ಗೆಲ್ಲಲೇ ಬೇಕು. ಭಾರತದ ಚಂದ್ರಯಾನಿ ವಿಕ್ರಂ ಲ್ಯಾಂಡರ್‍ನಂತೆ ಕ್ರಿಕೆಟ್‍ನಲ್ಲಿ ಪಾಕಿಸ್ಥಾನದ ವಿರುದ್ಧ ಭಾರತ ಸದಾ ಗೆಲುವು ಸಾಧಿಸಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದರು.

ಭಾರತ ಇಸ್ರೋ ವಿಜ್ಞಾನಿಗಳ ಪರಿಶ್ರಮದ ಫಲವಾಗಿ ಚಂದ್ರನ ದಕ್ಷಿಣ ಭಾಗದಲ್ಲಿ ವಿಕ್ರಂ ಲ್ಯಾಂಡರ್ ಇಳಿಸಿ ವಿಶ್ವದ ಯಾವ ದೇಶವೂ ಮಾಡದ ಸಾಧನೆ ಮಾಡಿರುವುದು, ಹೆಮ್ಮೆಯ ಸಂಗತಿ. ಸೂರ್ಯ-ಚಂದ್ರರು ಇರುವವರೆಗೂ ಭಾರತ ಎಲ್ಲ ರಂಗದಲ್ಲೂ ವಿಜಯ ಸಾಧಿಸಲಿ ಏಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.

ಸರ್ಕಾರಕ್ಕಿಂತ ಅಧಿಕಾರಿಗಳೇ ಬಲಿಷ್ಠ : ವಿಜಯಪುರ ಜಿಲ್ಲೆಯ ಆಲಮಟ್ಟಿಯಲ್ಲಿರುವ ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕರ ಕಛೇರಿಯನ್ನು ಬೆಂಗಳೂರಿಗೆ ಸ್ಥಳಾಂತರಿಸುವಲ್ಲಿ ಅಧಿಕಾರಿಗಳ ಹಿತಾಸಕ್ತಿ ಕೆಲಸ ಮಾಡಿದೆ. ಸರ್ಕಾರಕ್ಕಿಂದ ಅಧಿಕಾರಿಗಳೇ ಪ್ರಭಾವಿಗಳು ಎಂಬುದು ಕಾಂಗ್ರೆಸ್ ಸರ್ಕಾರದಲ್ಲಿ ಸಾಬೀತಾಗಿದೆ ಎಂದು ಶಾಸಕ ಯತ್ನಾಳ ಕಿಡಿ ಕಾರಿದರು.

ಈ ಹಿಂದೆ ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿದ್ದ ರಾಷ್ಟ್ರೀಯ ಹೆದ್ದಾರಿ ಕಾರ್ಯನಿವಾರ್ಹಕ ಅಭಿಯಂತರರ ಕಛೇರಿಯನ್ನು ಲೋಕೋಪಯೋಗಿ ಸಚಿವರಾಗಿದ್ದ ಎಚ್.ಡಿ.ರೇವಣ್ಣ ಹಾಸನ ಜಿಲ್ಲೆಗೆ ಸ್ಥಳಾಂತರಿಸಿಕೊಂಡರು. ನೈರುತ್ಯ ರೇಲ್ವೇ ಕಚೇರಿ ವಿಚಾರದಲ್ಲೂ ಹೀಗೆ ಆಗಿತ್ತು ಎಂದು ಅಸಮಾಧಾನ ಹೊರ ಹಾಕಿದರು.

ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಬೆಳಗಾವಿಯ ಸುವರ್ಣ ಸೌಧಕ್ಕೆ ಹಲವು ಕಛೇರಿಗಳನ್ನು ಸ್ಥಳಾಂತರಿಸಿದ್ದೆವು. ಕೆಬಿಜೆಎನ್‍ಎಲ್ ಕಛೇರಿ ಸ್ಥಳಾಂತರದ ವಿಷಯಲ್ಲಿ ನ್ಯಾಯಾಲಯವೂ ತರಾಟೆಗೆ ತೆಗೆದುಕೊಂಡಿದೆ. ಬೆಂಗಳೂರಿನ ಆಚೆಗೆ ಹೋಗುವುದು ಬಂದರೆ ಅಧಿಕಾರಿಗಳು ಅರಣ್ಯ ವಾಸಕ್ಕೆ ಹೋದವರಂತೆ ವರ್ತಿಸುತ್ತಾರೆ. ಬೆಂಗಳೂರಿನಲ್ಲಿ ಎಲ್ಲ ಕಡತ ಇರಿಸಿಕೊಂಡು, ನಮ್ಮ ಭಾಗದಲ್ಲಿ ತಾತ್ಕಾಲಿಕ ಕಛೇರಿ ಎಂಬಂತೆ ವರ್ತಿಸುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಇದು ಸರ್ಕಾರಕ್ಕಿಂತ ಅಧಿಕಾರಿಗಳೇ ಬಲಿಷ್ಠರು ಎಂಬುದನ್ನು ತೋರಿಸುತ್ತದೆ. ಅಧಿಕಾರಿಗಳಿಗೆ ಸರ್ಕಾರದ ಭಯವೇ ಇಲ್ಲದಂತಾಗಿದೆ. ನಮ್ಮ ಸರ್ಕಾರ ಇದ್ದಾಗ ಆಲಮಟ್ಟಿಗೆ ಕೆಬಿಜೆಎನ್‍ಎಲ್ ವ್ಯವಸ್ಥಾಪಕ ನಿರ್ದೇಶಕರ ಕಛೇರಿಯನ್ನು ವರ್ಗಾಯಿಸಿ, ಆದೇಶಿಸಿತ್ತು. ಆದರೂ ಅಧಿಕಾರಿಗಳು ಸರ್ಕಾರದ ಆದೇಶಕ್ಕೆ ಬೆಲೆ ಕೊಡದೇ ಬೆಂಗಳೂರು ಬಿಟ್ಟು ಕದಲುತ್ತಿಲ್ಲ. ಕಾರಣ ಈ ಭಾಗದ ರೈತರು ಬೆಂಗಳೂರಿಗೆ ಅಲೆಯುವ ದುಸ್ಥಿತಿ ನಿರ್ಮಾಣವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಸರ್ಕಾರದ ವೈಫಲ್ಯಗಳ ಕುರಿತು ಸದನದಲ್ಲಿ ಚರ್ಚೆ ಮಾಡುವುದಾಗಿ ಎಚ್ಚರಿಸಿದ ಶಾಸಕ ಯತ್ನಾಳ, ಉತ್ತರ ಕರ್ನಾಟಕದ ಸಚಿವರು ನಮ್ಮ ಭಾಗಕ್ಕೆ ಅನ್ಯಾಯವಾದರೂ ಏನು ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ ಉತ್ತರ ಕರ್ನಾಟಕದ ಬಗ್ಗೆ ಮಾತನಾಡುವ ಇಬ್ಬರು ಧೀಮಂತ ಸಚಿವರಿದ್ದು, ಉತ್ತರ ಕೊಡಲಿ ಎಂದು ಪರೋಕ್ಷವಾಗಿ ಸಚಿವರಾದ ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ ಅವರನ್ನು ಕೆಣಕಿದರು.

ಒನ್ ನೇಶನ್‍ಗೆ ಬೆಂಬಲ : ಲೋಕಸಭೆ ಹಾಗೂ ವಿವಿಧ ರಾಜ್ಯಗಳಿಗೆ ಪದೇ ಪದೇ ಸರಣಿ ಚುನಾವಣೆಗಳು ನಡೆಯುವುದರಿಂದ ದೇಶದ ಅಭಿವೃದ್ದಿಗೆ ಹಿನ್ನಡೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಒಂದು ದೇಶ ಒಂದು ಚುನಾವಣೆ ಕಾಯ್ದೆ ಜಾರಿಗೆ ತರಲು ಪ್ರಧಾನಿ ನರೇಂದ್ರ ಮೋದಿ ಸಂಸತ್ ವಿಶೇಷ ಅಧಿವೇಶ ಕರೆದಿರುವುದು ಸ್ವಾಗತಾರ್ಹ. ದೇಶದ ಮಟ್ಟಿಗೆ ಇದು ಐತಿಹಾಸಿಕ ನಿಒರ್ಣಯವಾಗಿದ್ದು, ದೇಶದಲ್ಲಿ ಲೋಕಸಭೆ-ವಿಧಾನಸಭೆಗಳಿಗೆ ಒಂದೇ ಬಾರಿಗೆ ಚುನಾವಣೆ ನಡೆಯುವುದರಿಂದ ಚುನಾವಣೆಗಾಗಿ ವ್ಯಚ್ಚವಾಗುವ ಸಾವಿರಾರು ಕೋಟಿ ಹಣ ದೇಶದ ಸಂಪತ್ತಾಗಿ ಉಳಿತಾಯವಾಗಲಿದೆ ಎಂದರು.

ಲೋಕಸಭಾ ಚುನಾವಣೆಯಿಂದ ಹಿಡಿದು ಗ್ರಾಮ ಪಂಚಾಯತಿ ಚುನಾವಣೆವರೆಗೂ ಚುನಾವಣೆ ನಡೆಯೋ ಸಮದಯಲ್ಲಿ ನೀತಿ ಸಂಹಿತೆ ಕಾರಣದಿಂದ ಒಂದು ತಿಂಗಳು ಕಾಲ ಕೆಲಸ ಸ್ಥಗಿತವಾಗುತ್ತವೆ. ಕಳೆದ ಲೋಕಸಭಾ ಚುನಾವಣೆಗೆ 10 ಸಾವಿರ ಕೋಟಿಗಿಂತ ಹೆಚ್ಚು ಹಣ ಖರ್ಚು ಮಾಡಲಾಗಿದೆ. ಇದರಲ್ಲಿ 1200 ಕೋಟಿ ರೂ. ಕರ್ನಾಟಕದ ಹಣವೂ ಸೇರಿದೆ. ಇದರಿಂದ ಅಭಿವೃದ್ದಿ ಕಾರ್ಯ ಕುಂಠಿತವಾಗುತ್ತದೆ. ದೇಶದ ಆರ್ಥಿಕ ಸುಸ್ಥಿತಿಗಾಗಿ ಇಂಥ ಕ್ರಮ ಅಗತ್ಯ ಎಂದರು.

ವಕ್ಪ್ ಹೆಸರಿನಲ್ಲಿ ಸಾವಿರಾರು ಕೋಟಿ ಲೂಟಿ ಮಾಡಲಾಗುತ್ತಿದೆ. ದೇಶದಲ್ಲಿ 15000 ಎಕರೆ ಭೂಮಿಯನ್ನು ವಕ್ಫ್ ಹೆಸರಿನಲ್ಲಿ ಅಭಿವೃದ್ಧಿ ಇಲ್ಲದೇ ಹಣ ಲೂಡಿ ಮಾಡಲಾಗುತ್ತಿದೆ. ಹೀಗಾಗಿ ದೆಹಲಿಯ ಜಾಮೀಯಾ ಮಸೀದಿ ಸೇರಿದಂತೆ 150 ಮಸೀದಿಗಳ ಆಸ್ತಿಯನ್ನು ಹಿಂಪಡೆಯಬೇಕಿದೆ. ಇದಕ್ಕಾಗಿ ವಕ್ಫ್ ಕಾಯ್ದೆ ರದ್ದು ಮಾಡುವಂತೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆಯೋದಾಗಿ ಹೇಳಿದ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಇದನ್ನೂ ಓದಿ: Chikkamagaluru; ಕಾಫಿನಾಡಿನಲ್ಲಿ ತಂಪೆರೆದ ವರುಣ: ರೈತರ ಮೊಗದಲ್ಲಿ ಮಂದಹಾಸ

ಟಾಪ್ ನ್ಯೂಸ್

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

12-epson

Epson ಇಕೊ ಟ್ಯಾಂಕ್ ಪ್ರಿಂಟರ್: ರಶ್ಮಿಕಾ ಮಂದಣ್ಣ ಅಭಿಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.