Panchamasali protest: ಬೆಲ್ಲದ್ ಮೂಲಕ ಪಂಚಮಸಾಲಿ ಹೋರಾಟ ವಿಭಜನೆ ಹುನ್ನಾರ: ಯತ್ನಾಳ್
Team Udayavani, Dec 26, 2023, 4:22 PM IST
ವಿಜಯಪುರ: ಪಂಚಮಸಾಲಿ ಮೀಸಲಾತಿ ಹೋರಾಟ ಹತ್ತಿಕ್ಕುವ ಹುನ್ನಾರಕ್ಕಾಗಿ ಅರವಿಂದ ಬೆಲ್ಲದ್ ಅವರಿಗೆ ವಿಧಾನಸಭೆ ವಿಪಕ್ಷದ ಉಪನಾಯಕನ ಸ್ಥಾನ ನೀಡಲಾಗಿದೆ. ಬೆಲ್ಲದ್ ಮೇಲೆ ನಮ್ಮ ಸಮಾಜ ಅವಲಂಬಿತವಾಗಿಲ್ಲ ಎಂದು ಬಿಜೆಪಿ ಶಾಸಕ, ಪಂಚಮಸಾಲಿ ಮೀಸಲಾತಿ ಹೋರಾಟ ಸ್ವಾಗತ ಸಮಿತಿ ರಾಷ್ಟ್ರೀಯ ಅಧ್ಯಕ್ಷ ಬಸನಗೌಡ ಪಾಟೀಲ ಯತ್ನಾಳ್ ಪಕ್ಷದ ನಾಯಕರ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ.
ಮಂಗಳವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬೆಲ್ಲದ್ ವಿಪ್ ಕೊಟ್ಟಿದ್ದರೂ ಸಮ್ಮತಿಸುತ್ತಿದ್ದರು. ಮುಖ್ಯಮಂತ್ರಿ ಸ್ಥಾನದ ಹಂತದಿಂದ ವಿಪಕ್ಷದ ಉಪ ನಾಯಕನ ಸ್ಥಾನಕ್ಕೆ ಕುಸಿದಿದ್ದಾರೆ ಎಂದು ಕುಟುಕಿದರು.
ಬೆಲ್ಲದ್ ನೇಮಕದಿಂದ ಪಂಚಮಸಾಲಿ ಮೀಸಲಾತಿ ಹೋರಾಟ ಒಡೆಯಲು ಸಾಧ್ಯವಿಲ್ಲ. ನಮ್ಮ ಸಮಾಜ ಈಗ ಜಾಗೃತವಾಗಿದ್ದು, ನಾವು ಏನೇ ಮೋಸ ಮಾಡಿದರೂ ಜನರಿಗೆ ಗೊತ್ತಾಗುತ್ತದೆ ಎಂದರು.
ಇಷ್ಟಕ್ಕೂ ಪಂಚಮಸಾಲಿ ಮೀಸಲಾತಿ ಹೋರಾಟ ಯತ್ನಾಳ, ವಿಜಯಾನಂದ ಕಾಶಪ್ಪನವರ, ಅರವಿಂದ ಬೆಲ್ಲದ, ವಿನಯ ಕುಲಕರ್ಣಿ ಮೇಲೆ ನಿಂತಿಲ್ಲ. ಸಮಾಜ ಜಾಗೃತವಾಗಿದೆ ಎಂದರು.
ಮಹಾರಾಷ್ಟ್ರ ರಾಜ್ಯದಲ್ಲಿ ಮರಾಠರು ಮೀಸಲಾತಿ ಹೋರಾಟಕ್ಕೆ ಮುಖ್ಯಮಂತ್ರಿ, ಮಂತ್ರಿ, ಶಾಸಕ, ನಾಯಕನನ್ನೂ ವೇದಿಕೆಗೆ ಕರೆಯವುದಿಲ್ಲ. ಕರ್ನಾಟಕದಲ್ಲಿ ಪಂಚಮಸಾಲಿ ಹೋರಾಟದ ವೇದಿಕೆಯಲ್ಲಿ ಸಚಿವ, ಶಾಸಕರನ್ನು ಕೂಡಿಸಬೇಡಿ ಎಂದು ಹೇಳಿದ್ದೇನೆ ಎಂದರು.
ಇಲ್ಲವಾದಲ್ಲಿ ಮಹಾರಾಷ್ಟ್ರದಲ್ಲಿ ಮೀಸಲಾತಿ ಹೋರಾಟಗಾರರು ನಾಯಕರ ಮನೆಹೊಕ್ಕು ಹೊಡೆದಂತೆ ನಮ್ಮಲ್ಲೂ ಆಗಲಿದೆ ಎಂದು ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ
Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ
Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವಕ್ಕಾಗಿ ಶೋಧ
Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ
Congress: ನೂರು ಕಾನೂನು ಮಾಡಿ,ನಾನು ಅಂಜಲ್ಲ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.