ಕೆರೂರು ಘಟನೆಯಲ್ಲಿ ಭಟ್ಕಳ ಭಯೋತ್ಪಾದಕರ ಕೈವಾಡ : ಮುತಾಲಿಕ್ ಕಿಡಿ

ಹಿಂದೂಗಳ ರಕ್ಷಣೆ ವಿಷಯದಲ್ಲಿ ರಾಜ್ಯ ಬಿಜೆಪಿ ಸರ್ಕಾರ ವಿಫಲ

Team Udayavani, Jul 22, 2022, 2:51 PM IST

1-ss–dsads

ವಿಜಯಪುರ : ಭಾರತದಲ್ಲಿ ತಲ್ವಾರ್ ಸಂಸ್ಕೃತಿ ಬಿಡಲಾಗದವರು ಭಾರತ ಬಿಟ್ಟು ತೊಲಗಬೇಕಾಗುತ್ತದೆ. ಭಾರತೀಯ ಸಂವಿಧಾನ ಆಶಯದಂತೆ ಸಮಾಜದಲ್ಲಿ ಭೀತಿ ಹುಟ್ಟಿಸುವ, ರಕ್ತಪಿಪಾಸು ವ್ಯವಸ್ಥೆಯನ್ನು ಪೋಷಿಸುವ ತಲ್ವಾರ್ ಸಂಸ್ಕೃತಿ ಬಿಡಲಾಗದವದು ದೇಶಬಿಟ್ಟು ಜಾಗ ಖಾಲಿ ಮಾಡಬೇಕು. ನಿಮ್ಮಂಥವರಿಗಾಗಿ ಹಲವು ದೇಶಗಳಿದ್ದು, ಅಲ್ಲಿಗೆ ಹೋಗಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕಿಡಿ ಕಾರಿದರು.

ಶುಕ್ರವಾರ ನಗರದಲ್ಲಿರುವ ಜಿಲ್ಲಾ ಕೇಂದ್ರ ಕಾರಾಗ್ರಹಕ್ಕೆ ಭೇಟಿ ನೀಡಿ ಕೆರೂರ ಘಟನೆಯಲ್ಲಿ ಬಂಧಿತರಾದ ಹಿಂದೂ ಕಾರ್ಯಕರ್ತರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಾಗಲಕೋಟೆ ಜಿಲ್ಲೆಯ ಕೆರೂರು ಹಿಂದೂ ಯುವಕರ ಮೇಲಿನ ದಾಳಿಯಲ್ಲಿ ಮುಸ್ಲಿಂ ಪುಂಡಾಟಿಕೆ ವಿಜೃಂಭಿಸಿದೆ ಎಂದರು.

ಭಯೋತ್ಪಾದನೆಗೆ ಕುಮ್ಮಕ್ಕು ನೀಡುವ ಉಗ್ರಗಾಮಿಗಳು ಸಕ್ರೀಯವಾಗಿರುವ ನೆಲೆಯಿಂದಲೇ ಬಂದವರು ಕೆರೂರು ಘಟನೆಯಲ್ಲಿ ಭಾಗಿಯಾಗಿದ್ದಾರೆ. ಮತಾಂಧತೆ ಹರಡುತ್ತಿರುವ ಭಟ್ಕಳ ಇಸ್ಲಾಂ ಸಂಸ್ಕೃತಿ ಕೆರೂರ ಘಟನೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಕೈವಾಡ ತೋರಿದೆ. ಮುಸ್ಲಿಮರು ಹಿಂದೂ ಹುಡುಗಿಯರನ್ನು ಚುಡಾಯಿಸಿದರೆ ಹಿಂದೂ ಯುವಕರು ನೋಡಿಕೊಂಡು ಸುಮ್ಮನಿರಬೇಕೆ. ಇದೀಗ ಹಿಂದೂ ಸಮಾಜ ಜಾಗೃತವಾಗಿದೆ, ಹಿಂದೂ ಯುವಕರು ಕೆಚ್ಚಿನಿಂದ ಎದ್ದರೆ ನಿಮಗೆ ಉಳಿಗಾಲವಿಲ್ಲ, ಹೀಗಾಗಿ ಮುಸ್ಲಿಮರು ಇನ್ನು ತೆಪ್ಪಗಿರಲೇಬೇಕು ಎಂದು ಎಚ್ಚರಿಸಿದರು.

ಭಾರತೀಯ ಸಂವಿಧಾನದಂತೆ ತಲವಾರ್ ಇಲ್ಲದೇ ಭಾರತದಲ್ಲಿ ಬದುಕಬೇಕು, ಇಲ್ಲವಾದಲ್ಲಿ ನಿಮಗಿಲ್ಲ ನೆಲೆ ಇಲ್ಲ. ತಲ್ವಾರ ಸಂಸ್ಕೃತಿಯಲ್ಲೇ ಬದುಕುವವರಿಗೆ ಭಾರತದಲ್ಲಿ ಇರುವುದು ಬೇಡವೇ ಬೇಡ ಎಂದು ಹರಿಹಾಯ್ದರು.

ರಾಜ್ಯದಲ್ಲಿ ಹಿಂದೂಗಳ ರಕ್ಷಣೆ ವಿಷಯದಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಶಿವಮೊಗ್ಗದ ಹರ್ಷನ ಹತ್ಯೆ ಬಳಿಕ ಬಂಧಿತರು ಜೈಲಿನಿಲ್ಲಿ ಮೋಜಿನ ಜೀವನ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಮತ್ತೊಂದೆಡೆ ರಾಜ್ಯದಲ್ಲಿ ಹಲವೆಡೆ ಹಿಂದೂ ಯುವಕರ ಹಲ್ಲೆ ಮುಂದುವರೆದಿದೆ. ಬಿಜೆಪಿಗೆ ಅಧಿಕಾರ ಮುಖ್ಯ ಹೊರತು ಹಿಂದೂಗಳ ಸುರಕ್ಷತೆ ಅಲ್ಲ. ಹಿಂದುತ್ವಕ್ಕಾಗಿ ಬದುಕನ್ನು ಧಾರೆ ಎರೆದ ಆತನ ಕುಟುಂಬ ಎಂಥ ನೋವಿನಲ್ಲಿದೆ ಎಂಬ ಅರಿವು ಸರ್ಕಾರಕ್ಕೆ ಇದೆಯೇ ಎಂದು ಪ್ರಶ್ನಿಸಿದರು.

ಮತ್ತೊಂದೆಡೆ ರಾಜ್ಯದಲ್ಲಿ ಎಸ್ ಡಿಪಿಐ, ಪಿ.ಎಫ್.ಐ. ಗಳಂಥ ಸಂಘಟನೆಗಳು ಸಮಾಜದಲ್ಲಿ ಕ್ಯಾನ್ಸರ್ ನಂತೆ ಶಾಂತಿ ಕದಡುವ ಕೆಲಸ ಮಾಡುತ್ತಿವೆ. ಈ ಸಂಘಟನೆಗಳು ಇದೀಗ ಬಿಜೆಪಿ ಬಿ ಟೀಂ ರೀತಿಯಲ್ಲಿ ಕೆಲಸ ಮಾಡುತ್ತಿವೆ. ಇಂಥ ಸಂಸ್ಥೆಗಳ ಬಲವರ್ಧನೆಗೆ ಅವಕಾಶ ನೀಡಿ, ಮುಸ್ಲಿಂ ವೋಟ್ ಬ್ಯಾಂಕ್ ಒಡೆದು ಅಧಿಕಾರ ಗಿಟ್ಟಿಸಿಕೊಳ್ಳುವುದು ಬಿಜೆಪಿ ಕುತಂತ್ರ ಎಂದು ಕಿಡಿ ಕಾರಿದರು. ಹೀಗಾಗಿ ದೇಶದ್ರೋಹದ ಕೃತ್ಯದಲ್ಲಿ ತೊಡಗಿರುವ ಇಂಥ ಸಂಘಟನೆಗಳ ನಿಷೇಧಕ್ಕೆ ಆಗ್ರಹಿಸಿ ನಮ್ಮ ಸಂಘಟನೆಯಿಂದ ಅಭಿಯಾನ ಆರಂಭಿಸಲಿದೆ ಎಂದರು.

ಮುಸ್ಲಿಂ ಭಯೋತ್ಪಾದಕರನ್ನು ಕಾಂಗ್ರೆಸ್ ಎಂಬ ಮುಸ್ಲಿಂ ತುಷ್ಟೀಕರಣದ ಪಕ್ಷ ದೇಶಭಕ್ತರಂತೆ ಬಿಂಬಿಸುತ್ತಿದೆ. ಅದರಿಂದಾಗಿ ಇದೀಗ ಕಾಂಗ್ರೆಸ್ ಪಕ್ಷಕ್ಕೂ ಮುಸ್ಲೀಮರು ಮುಳುಗು ನೀರು ತಂದಿದ್ದಾರೆ. ಮೊನ್ನೆ ಸಿದ್ಧರಮಯ್ಯ ಅವರ ಮೇಲೆ ಮುಸ್ಲಿಂ ಮಹಿಳೆ ನೋಟಿನ ಬಂಡಲ್ ಎಸೆದ ಘಟನೆ ಜೀವಂತ ನಿದರ್ಶನ ಎಂದರು.

ಬಳಿಕ ಕೆರೂರ ಘಟನೆಯಿಂದಾಗಿ ಬಂಧಿತರಾಗಿ ವಿಜಯಪುರ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿರುವ ಹಿಂದೂ ಕಾರ್ಯಕರ್ತರನ್ನು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಭೇಟಿ ನೀಡಿ ಆತ್ಮಸ್ಥೈರ್ಯ ತುಂಬಿದರು. ಶ್ರೀರಾಮ ಸೇನೆಯ ನೀಲಕಂಠ ಕಂದಗಲ್ ಇತರರು ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.