BJP ಯಿಂದ ಅನ್ಯಾಯ; ಜಿಗಜಿಣಗಿಗೆ ಉಪ ಪ್ರಧಾನಿ ಹುದ್ದೆ ನೀಡಲು ಮಾದಿಗರ ಒಕ್ಕೂಟ ಒತ್ತಾಯ

ಕಾರಜೋಳಗೆ ಸಂಪುಟ ದರ್ಜೆ ಸಚಿವ ಸ್ಥಾನಮಾನ ನೀಡಬೇಕು

Team Udayavani, Jun 12, 2024, 12:33 PM IST

1-ddsdsad

ವಿಜಯಪುರ : ಮೋದಿ ನೇತೃತ್ವದಲ್ಲಿ ರಚನೆಯಾದ ಮೂರನೇ ಅವಧಿಯ ಕೇಂದ್ರ ಸಂಪುಟದಲ್ಲಿ ಮಾದಿಗ ಸಮುದಾಯಕ್ಕೆ ಆದ್ಯತೆ ನೀಡದೇ ಅನ್ಯಾಯ ಮಾಡಲಾಗಿದೆ. ಹೀಗಾಗಿ ಕರ್ನಾಟಕದ ದಲಿತ ಕೋಟಾದಲ್ಲಿ ಹಿರಿಯ ರಾಜಕೀಯ ನಾಯಕ ರಮೇಶ ಜಿಗಜಿಣಗಿ ಅವರಿಗೆ ಉಪ ಪ್ರಧಾನಿ ಹುದ್ದೆಯನ್ನೂ, ಸಂಸದ ಗೋವಿಂದ ಕಾರಜೋಳ ಅವರಿಗೆ ಸಂಪುಟ ದರ್ಜೆ ಸಚಿವ ಸ್ಥಾನ ನೀಡುವಂತೆ ಆಗ್ರಹ ಕೇಳಿ ಬಂದಿದೆ.

ಬುಧವಾರ ನಗರದಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಜಯಪುರ ಜಿಲ್ಲಾ ಮಾದಿಗರ ಒಕ್ಕೂಟದ ಪ್ರಮುಖದಾರ ಹಣಮಂತ ಬಿರಾದಾರ, ಪರಶುರಾಮ ರೋಣಿಹಾಳ, ಮೂರನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿರುವ ಮೋದಿ ಅವರು ರಾಜ್ಯದ ದಲಿತರಿಗೆ ಅನ್ಯಾಯ ಮಾಡಿದ್ದಾರೆ ಎಂದು ಅಸಮಧಾನ ವ್ಯಕ್ತಪಡಿಸಿದರು.

ರಾಜ್ಯದಲ್ಲಿ 4 ಬಾರಿ ಶಾಸಕರಾಗಿ, ಹೆಗಡೆ ಅವರ ಸರ್ಕಾರದಲ್ಲಿ ವಿವಿಧ ಖಾತೆಗಳ ಸಚಿವರಾಗಿ ಸಮರ್ಥವಾಗಿ ಆಡಳಿತ ನೀಡಿರುವ ಜಿಗಜಿಣಗಿ, ಸತತ 7 ಬಾರಿ ಸಂಸದರಾಗಿ ಆಯ್ಕೆಯಾಗಿರುವ ದೇಶದ ಹಿರಿಯ ಸಂಸದರೂ ಆಗಿದ್ದಾರೆ. ರಾಜ್ಯದಲ್ಲಿ ಸಚಿವರಾಗಿದ್ದಾಗಲೇ ಚಿಕ್ಕೋಡಿ ಕ್ಷೇತ್ರದಲ್ಲಿ ಸಂಸದರಾಗಿ ಸತತ 3 ಬಾರಿ ಹಾಗೂ ವಿಜಯಪುರದಲ್ಲಿ 4 ಬಾರಿ ಆಯ್ಕೆಯಾಗಿ ದಾಖಲೆ ಬರೆದಿದ್ದಾರೆ ಎಂದರು.

ಗೋವಿಂದ ಕಾರಜೋಳ ಅವರಿಗೆ ಪಕ್ಷದ ವರಿಷ್ಠರು ಕೊನೆಯ ಹಂತದಲ್ಲಿ ಟಿಕೆಟ್ ನೀಡಿದರೂ ಚಿತ್ರದುರ್ಗ ಲೋಕಸಭೆ ಕ್ಷೇತ್ರದಲ್ಲಿ ಸುಲಭವಾಗಿ ಗೆದ್ದು, ಬಿಜೆಪಿ ಸ್ಥಾನ ಉಳಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಉಪ ಮುಖ್ಯಮಂತ್ರಿಯಾಗಿ ಸಮರ್ಥ ಆಡಳಿತ ನೀಡಿರುವ ಕಾರಜೋಳ ಅವರಿಗೆ ಸಂಪುಟ ದರ್ಜೆ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.

ರಾಜಕೀಯ ಅಧಿಕಾರದ ಸಂದರ್ಭದಲ್ಲಿ ಒಂದೇ ಒಂದು ಕಪ್ಪುಚುಕ್ಕೆ ಇಲ್ಲದಂತೆ ಅಧಿಕಾರ ನಡೆಸಿರುವ ರಮೇಶ ಜಿಗಜಿಣಗಿ ಹಾಗೂ ಗೋವಿಂದ ಕಾರಜೋಳ ಜನತಾ ಪರಿವಾರ ತೊರೆದು ಬಿಜೆಪಿ ಸೇರಿದ್ದಾರೆ. ಪರಿಣಾಮ ಕರ್ನಾಟಕ ರಾಜ್ಯದಲ್ಲಿ ದಲಿತರು ಅದರಲ್ಲೂ ಮಾದಿಗ ಸಮುದಾಯ ಸಾರಾಸಗಟಾಗಿ ಬಿಜೆಪಿ ಪಕ್ಷವನ್ನು ಬೆಂಬಲಿಸುತ್ತ ಬರುತ್ತಿದೆ. ಕರ್ನಾಟಕದಲ್ಲಿ ಪಕ್ಷ ಬಲಗೊಳ್ಳಲು ಹಾಗೂ ಸರ್ಕಾರ ರಚಿಸುವ ಮಟ್ಟಕ್ಕೆ ಅಧಿಕಾರಕ್ಕೆ ತರುವಲ್ಲಿ ಸಕಾರಣವಾಗಿದ್ದಾರೆ ಎಂದು ವಿರಿಸಿದರು.

ರಾಜ್ಯದಲ್ಲಿ ಟಿಕೆಟ್ ಪಡೆದಿದ್ದ ಮಾದಿಗ ಸಮುದಾಯದ ಇಬ್ಬರೂ ಸಂಸದರಾಗಿ ಆಯ್ಕೆಯಾಗಿದ್ದಾರೆ. ಕಾರಣ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ದಲಿತರಿಗೆ ರಾಜಕೀಯ ಅಧಿಕಾರ ನೀಡುವಲ್ಲಿ ಆಗಿರುವ ಅನ್ಯಾಯ ಸರಿಸಪಡಿಸಲು ಮುಂದಗಬೇಕು. ಇಲ್ಲವಾದಲ್ಲಿ ಬರುವ ಚುನಾವಣಗಳಲ್ಲಿ ಬಿಜೆಪಿ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದಾಗಿ ಎಚ್ಚರಿಸಿದರು.

ಒಕ್ಕೂಟದ ಪ್ರಮುಖರಾದ ಶರಣು ಬ್ಯಾಳಿ, ವಿಠ್ಠಲ ನಡುವಿನಕೇರಿ, ಶಿವಾನಂದ ತಿಕೋಟಿಕರ, ದೇವೇಂದ್ರ ಹಡಗಲಿ, ಮುಕುಂದ ಮಾದರ, ಸದಾನಂದ ಗುನ್ನಾಪುರ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

jio

Jio ಪ್ರಿಪೇಡ್ /ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ

26

Bantwal: ಬೈಕ್‌ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Price Rise: ದರ ಏರಿಕೆ; ನಾಳೆ ರಾಜ್ಯಾದ್ಯಂತ ಬಿಜೆಪಿಯಿಂದ ಕ್ಷೀರ ಅಭಿಯಾನ

1-asss

R. Ashok ವಾಗ್ಧಾಳಿ; ದೋಚುವ ಸರಕಾರಕ್ಕೆ ಜನ ಕಪಾಳಮೋಕ್ಷ ಮಾಡಬೇಕು

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

9

Price Rise: ದರ ಏರಿಕೆ; ನಾಳೆ ರಾಜ್ಯಾದ್ಯಂತ ಬಿಜೆಪಿಯಿಂದ ಕ್ಷೀರ ಅಭಿಯಾನ

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

priyanka gandhi (2)

Constitution;’ಜೈ ಸಂವಿಧಾನ’ ಹೇಳುವುದು ತಪ್ಪಾ?: ಪ್ರಿಯಾಂಕಾ ಪ್ರಶ್ನೆ

1-wtr

Moving ರೈಲಿಗೆ ನೀರು ಚಿಮ್ಮಿಸಿದ ಯುವಕರಿಗೆ ಪ್ರಯಾಣಿಕರಿಂದ ಗೂಸಾ!

1-wwewwewewe

BJP ಹಿರಿಯ ನಾಯಕ ಆಡ್ವಾಣಿ ಆರೋಗ್ಯದಲ್ಲಿ ಚೇತರಿಕೆ: ಡಿಸ್ಚಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.