ಕೋವಿಡ್ ಗೆ ಬಲಿಯಾದ ಬಿಎಲ್ಡಿಇ ಸಂಸ್ಥೆಯ ಸಿಬ್ಬಂದಿ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ವಿತರಣೆ


Team Udayavani, Jun 16, 2021, 3:01 PM IST

ಕೋವಿಡ್ ಗೆ ಬಲಿಯಾದ ಬಿಎಲ್ಡಿಇ ಸಂಸ್ಥೆಯ ಸಿಬ್ಬಂದಿ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ವಿತರಣೆ

ವಿಜಯಪುರ: ಬಿ.ಎಲ್.ಡಿ.ಇ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿದ್ದ 16 ಸಿಬ್ಬಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದು, ಇವರ ಕುಟುಂಬಕ್ಕೆ ಆಸರೆಯಾಗಲು ಸಂಸ್ಥೆಯಿಂದ ತಲಾ 1 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ. ಅಲ್ಲದೇ ಮೃತರ ಕುಟುಂಬದ ಒಬ್ಬರಿಗೆ ಉದ್ಯೋಗ ನೀಡುವ ಭರವಸೆ ನೀಡಲಾಗಿದೆ.

ಬುಧವಾರ ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸಿ, ಮೃತರ ಕುಟುಂಬ ಸದಸ್ಯರಿಗೆ ಪರಿಹಾರದ ಚಕ್ ವಿತರಿಸಿ ಮಾತನಾಡಿದ ಬಿ.ಎಲ್.ಡಿ.ಇ. ಸಂಸ್ಥೆಯ ಅಧ್ಯಕ್ಷ ಮಾಜಿ ಸಚಿವ ಡಾ.ಎಂ.ಬಿ.ಪಾಟೀಲ, ಸಂತ್ರಸ್ತ ಈ ಎಲ್ಲ ಕುಟುಂಬಗಳಿಗೂ ಸಂಸ್ಥೆ ಅಗತ್ಯ ಇರುವ ಎಲ್ಲ ಸೌಲಭ್ಯ ಕಲ್ಪಿಸುವುದಾಗಿ ಭರವಸೆ ನೀಡಿದರು.

ಇದನ್ನೂ ಓದಿ:2 ವರ್ಷ ಯಡಿಯೂರಪ್ಪನವರೇ ಸಿಎಂ ಆಗಿರ್ತಾರೆ, ನಾಯಕತ್ವ ಬದಲಾವಣೆ ಇಲ್ಲ : ಕಟೀಲ್

ಕೋವಿಡ್ ಮಹಾ ಸಾಂಕ್ರಾಮಿಕ ರೋಗಕ್ಕೆ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯ ಉಪಕುಲಪತಿ ಡಾ.ಎಂ.ಎಸ್.ಬಿರಾದಾರ, ವೈದ್ಯ ಡಾ.ಆರ್.ಎಂ.ಪೋಟೆಕರ, ಟೆಕ್ನಿಷಿಯನಗಳಾದ ರುದ್ರಗೌಡ ಎಸ್.ಪಾಟೀಲ, ಜಗದೀಶ ಬಿ.ಬಡಿಗೇರ, ಅಟೆಂಡರಗಳಾದ ಸುರೇಂದ್ರ ಭಾವಿಮನಿ, ದ್ರಾಕ್ಷಾಯಣಿ ಪೂಜಾರಿ, ಆಡಳಿತ ಕಛೇರಿ ಎಫ್.ಡಿ.ಸಿ ಪ್ರಕಾಶ ಖ್ಯಾಡದ, ಜೆ.ಎಸ್.ಎಸ್. ಕಾಲೇಜಿನ ಎಸ್ಡಿಸಿ ತನುಜಾ ಪಾಟೀಲ, ಎಸ್.ಎಸ್.ಮಾಧ್ಯಮಿಕ ‘ಎ’ ಶಾಲೆ ಶಿಕ್ಷಕ ಪ್ರಕಾಶ ತೊರವಿ, ತಿಕೋಟಾ ನ್ಯೂ ಆರ್ಟ್ಸ್ ಕಾಲೇಜು ಉಪನ್ಯಾಸಕ ಡಾ.ಎಂ.ಬಿ.ಸಿಂಗೆ ಹಾಗೂ ಎಸ್ಡಿಸಿ ಇರ್ಫಾನ್ ಜಮಖಂಡಿ, ಜಮಖಂಡಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ರಮೇಶ ಬಿರಾದಾರ, ಲಚ್ಯಾಣ ಎಸ್.ಎಸ್.ಅಗ್ರಿ ಸ್ಕೂಲ್ ಶಿಕ್ಷಕ ಸಿದ್ದಪ್ಪ ಇಂಗಳೇಶ್ವರ, ಎಂಜಿನಿಯರಿಂಗ್ ಕಾಲೇಜಿನ ಜವಾನ ಶ್ರೀಶೈಲ ನಾವಿ, ನಗರದ ಎಸ್.ಎಸ್.ಎಂ ಪಾಲಿಟೆಕ್ನಿಕ್‍ನ ವೆಲ್ಡರ್ ಗೊವಿಂದಪ್ಪ ಹಾದಿಮನಿ ಸೇರಿ ಸಂಸ್ಥೆಯ 16 ಜನರು ನಮ್ಮನ್ನ ಅಗಲಿರುವುದಿ ದುಃಖಕರ ಸಂಗತಿ ಎಂದರು.

ಸಾಂಕ್ರಾಮಿಕ ರೋಗಕ್ಕೆ ಬಲಿಯಾದ ಸಂಸ್ಥೆಯ ನೌಕರರ ಕುಟುಂಬಕ್ಕೆ ಮತ್ತು ಮಕ್ಕಳ ಮುಂದಿನ ವಿದ್ಯಾಭ್ಯಾಸಕ್ಕೆ ಸಂಸ್ಥೆಯಿಂದ 1 ಲಕ್ಷ ರೂ. ಚೆಕ್ ನೀಡಲಾಗುತ್ತಿದೆ. ಕುಟುಂಬ ನೇರ ವಾರಸುದಾರರಲ್ಲಿ ಒಬ್ಬರಿಗೆ ಸಂಸ್ಥೆಯಲ್ಲಿ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗ ನೀಡುವುದಾಗಿ ಎಂ.ಬಿ.ಪಾಟೀಲ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಬಿಎಲ್ಡಿಇ ಡೀಮ್ಡ್ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ.ಆರ್.ಎಸ್.ಮುಧೋಳ, ಪ್ರಾಚಾರ್ಯ ಡಾ.ಅರವಿಂದ ಪಾಟೀಲ, ಆಡಳಿತಾಧಿಕಾರಿಗಳಾದ ಡಾ.ರಾಘವೇಂದ್ರ ಕುಲಕರ್ಣಿ, ಕೆ.ಜಿ. ಪೂಜೇರಿ, ಐ.ಎಸ್. ಕಾಳಪ್ಪನವರ, ಮುಖ್ಯ ಹಣಕಾಸು ಅಧಿಕಾರಿ ದೇವೇಂದ್ರ ಅಗರವಾಲ, ಡಾ.ಎಂ.ಎಸ್. ಮಧಭಾವಿ, ಪ್ರಚಾರಾಧಿಕಾರಿ ಡಾ.ಮಹಾಂತೇಶ ಬಿರಾದಾರ ಸೇರಿದಂತೆ ಮೃತರ ಕುಟುಂಬ ವರ್ಗದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.