ಮುದ್ದೇಬಿಹಾಳ: ನೀರಿನ ಟ್ಯಾಂಕಲ್ಲಿ ಬಿದ್ದು ಬಾಲಕ ಮೃತ್ಯು
Team Udayavani, Dec 16, 2022, 10:51 AM IST
ಮುದ್ದೇಬಿಹಾಳ: 5 ವರ್ಷದ ಬಾಲಕನೊಬ್ಬ ಆಟವಾಡುತ್ತ ಮನೆ ಮುಂದಿನ ನೀರು ಸಂಗ್ರಹಿಸುವ ಟ್ಯಾಂಕ್ (ಸಂಪ್) ನೊಳಗೆ ಬಿದ್ದು ಉಸಿರುಗಟ್ಡಿ ಸಾವನ್ನಪ್ಪಿರುವ ಘಟನೆ ಮುದ್ದೇಬಿಹಾಳ ಪಟ್ಟಣದ ಹುಡ್ಕೋ ಬಡಾವಣೆಯ ತಾಲೂಕು ಆಡಳಿತ ಸೌಧ ಹಿಂಭಾಗದಲ್ಲಿರುವ ಕುಂಚಗನೂರ ದೇಸಾಯಿ ಕಟ್ಟಡದಲ್ಲಿ ನಡೆದಿದೆ.
ಶ್ರೇಯಸ್ ಆನಂದ ನಿಡೋಣಿ ಮೃತ ಬಾಲಕ.
ನಿಡಗುಂದಿ ತಾಲೂಕು ಕಿರಿಶ್ಯಾಳ ಗ್ರಾಮದ ನಿವಾಸಿ ಆನಂದ ನಿಡೋಣಿ ಒಂದೆರಡು ವರ್ಷದ ಹಿಂದೆ ಹೊಟ್ಟೆಪಾಡಿಗಾಗಿ ದುಡಿಯಲು ಪತ್ನಿ, ಇಬ್ಬರು ಗಂಡು ಮಕ್ಕಳ ಸಮೇತ ಇಲ್ಲೇ ವಾಸವಾಗಿದ್ದರು.
ಬಾಲಕನ ತಂದೆ ಆನಂದ ಎಂಬವರು ಕಟ್ಟಡದಲ್ಲಿ ಬಾಡಿಗೆ ಇದ್ದು, ಬೇಕರಿ ಪದಾರ್ಥ ತಯಾರಿಸಿ ಕೊಡುವ ಕೆಲಸ ಮಾಡುತ್ತಿದ್ದರು. ತಾವು ವಾಹನ ತೊಳೆಯುವಾಗ ವಾಹನ ತೊಳೆಯುವಾಗ ಬಾಲಕ ಹೊರಗಡೆಯೇ ಇದ್ದ. ಬಹಳ ಹೊತ್ತಾದರೂ ಅವನು ಮನೆ ಒಳಗೆ ಬರದಿರುವುದನ್ನು ಕಂಡು ಪಾಲಕರು ಎಲ್ಲ ಕಡೆ ಹುಡುಕಾಟ ನಡೆಸಿದ್ದರೂ ಸಿಕ್ಕಿರಲಿಲ್ಲ. ಬಳಿಕ ಟ್ಯಾಂಕ್ನಲ್ಲಿ ಜಗ್ ತೇಲಾಡುತ್ತಿರುವುದನ್ನು ನೋಡಿ ಸಂಶಯಗೊಂಡು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳದವರು ಬಂದು ನೋಡಿದಾಗ ಬಾಲಕ ಟ್ಯಾಂಕ್ನೊಳಗೆ ಶವವಾಗಿ ಪತ್ತೆ ಆಗಿದ್ದಾನೆ.
ಮಗನ ದುರಂತ ಸಾವಿಗೆ ಪಾಲಕರ ಆಕ್ರಂದನ ಮುಗಿಲು ಮುಟ್ಟುವಂತಿತ್ತು. ವಾಹನ ತೊಳೆಯುವ ಸಂದರ್ಭ ಜಗ್ಗನಲ್ಲಿ ನೀರು ತುಂಬಿಸಿಕೊಳ್ಳುತ್ತಿರುವಾಗ ಬಾಲಕ ಆಯತಪ್ಪಿ ಟ್ಯಾಂಕ್ನೊಳಗೆ ಬಿದ್ದಿರಬಹುದು ಎಂದು ಊಹಿಸಲಾಗಿದೆ. ಈ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ
Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ
Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವಕ್ಕಾಗಿ ಶೋಧ
Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ
Congress: ನೂರು ಕಾನೂನು ಮಾಡಿ,ನಾನು ಅಂಜಲ್ಲ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.