Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ ಹತ್ಯೆ; ಆಪ್ತರ ಮೇಲೆ ಶಂಕೆ
Team Udayavani, May 19, 2024, 9:56 AM IST
ವಿಜಯಪುರ: ನಗರದ ಎಪಿಎಂಸಿ ಮಾರುಕಟ್ಟೆ ಪ್ರದೇಶದಲ್ಲಿ ಕಲ್ಲಿನಿಂದ ಜಜ್ಜಿ ಯುವಕನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಜರುಗಿದೆ.
ಹತ್ಯೆಯಾದ ಯುವಕನನ್ನು 22 ವರ್ಷದ ಕಂಬಾರ ಓಣಿ ನಿವಾಸಿ ರೋಹಿತ್ ಸುಭಾಶ ಪವಾರ ಎಂದು ಗುರುತಿಸಲಾಗಿದೆ.
ಹತ್ಯೆಯ ಬಳಿಕ ರೋಹಿತ್ ಶವವನ್ನು ಎಪಿಎಂಸಿ ಕುರಿ-ಮೇಕೆ ಮಾರುಕಟ್ಟೆ ಪರಿಸರದ ಮುಳ್ಳಿನ ಪೊದೆಯಲ್ಲಿ ಎಸೆಯಲಾಗಿದೆ.
ಘಟನಾ ಸ್ಥಳದಲ್ಲಿ ಮದ್ಯದ ಬಾಟಲಿಗಳು ಹಾಗೂ ಚಿಪ್ಸ್ ಪಾಕೇಟಗಳು ದೊರೆತಿದ್ದು, ಮದ್ಯ ಸೇವನೆ ಬಳಿಕ ಅಮಲಿನಲ್ಲಿ ಆಪ್ತರೇ ರೋಹಿತ್ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ರೋಹಿತ್ ಸ್ನೇಹಿತನಾದ ಖಾಲೀದ್ ಇನಾಮದಾರ ಎಂಬವ ರೋಹಿತ್ ಕೊಲೆಯಾಗಿದ್ದಾನೆ ಎಂದು ಶನಿವಾರ ತಡರಾತ್ರಿ 2.21ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದ.
ಖಾಲಿದ್ ಕರೆ ಆಧರಿಸಿ ರೋಹಿತ್ ಗಾಗಿ ಹುಡುಕಿದರೂ ಶವ ಪತ್ತೆ ಆಗಿರಲಿಲ್ಲ. ಖಾಲಿದ್ ಮನೆಗೆ ಹೋಗಿ ವಿಚಾರಿಸಿದರೆ ಅಲ್ಲಿಯೂ ಇರಲಿಲ್ಲ. ನಂತರ ಎಪಿಎಂಸಿ ಮಾರುಕಟ್ಟೆ ಪ್ರದೇಶದ ಮೇಕೆ ಮಾರುಕಟ್ಟೆ ಪ್ರದೇಶದಲ್ಲಿ ರೋಹಿತ್ ಶವ ಪತ್ತೆಯಾಗಿದೆ.
ಡಿಎಸ್ಪಿ ಬಸವರಾಜ ಎಲಿಗಾರ ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Award: 2023-24, 2024-25ನೇ ಸಾಲಿನ “ಗಡಿನಾಡ ಚೇತನ” ಪ್ರಶಸ್ತಿ ಪ್ರಕಟ
Muddebihal: ನಿಂತಿದ್ದ ಕ್ಯಾಂಟರ್ ಗೆ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು
ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.