![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Feb 8, 2022, 5:58 PM IST
ವಿಜಯಪುರ: ನಗರದ ಪ್ರಮುಖ ಸಾರ್ವಜನಿಕ ಸ್ಥಳ, ಬಸ್ ತಂಗುದಾಣವನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಗಾನಯೋಗಿ ಸಂಘದ ಪದಾಧಿಕಾರಿಗಳು ಈಗ ಪೊಲೀಸ್ ಕವಾಯತು ಮೈದಾನ ಬಳಿ ಇರುವ ಬಸ್ ತಂಗುದಾಣವನ್ನು ಸ್ವಚ್ಛಗೊಳಿಸಿದ್ದಾರೆ.
ನಗರದ ದರಬಾರ ಮಹಾವಿದ್ಯಾಲಯ, ಲಕ್ಷ್ಮೀ ಗುಡಿ ಪಕ್ಕದಲ್ಲಿರುವ ಬಸ್ ತಂಗುದಾಣ, ಎಲ್ಬಿಎಸ್ ಪ್ರಾಂಗಣಕ್ಕೆ ಹೊಸ ಸ್ಪರ್ಶ ನೀಡಿರುವ ಸದರಿ ಸಂಘಟನೆಯ ಯುವಕರು ಇದೀಗ ಪೊಲೀಸ್ ಕವಾಯತು ಮೈದಾನದ ಬಳಿ ತಂಗುದಾಣ ಸ್ವತ್ಛಗೊಳಿಸಿ ಶರಣರ ಹೆಸರುಗಳನ್ನು ಬರೆದು ಅಂದಗೊಳಿಸಿದ್ದಾರೆ.
ಕಲ್ಯಾಣ ಕ್ರಾಂತಿಯ ಅನುಭವ ಮಂಟಪದ ಶಿವಶರಣರ-ಶರಣೆಯರ ಎಂಬ ಶಿರ್ಷಿಕೆಯೊಂದಿಗೆ 12ನೇ ಶತಮಾನದ ಅನುಭವ ಮಂಟಪದ ಸುಮಾರು 50ಕ್ಕೂ ಹೆಚ್ಚು ಶಿವಶರಣ ಹಾಗೂ ಶರಣೆಯರ ಹೆಸರನ್ನು ಬರೆದಿದ್ದಾರೆ. ನಗರದ ಬಸ್ನಿಲ್ದಾದ ತುಂಬಾ ಗುಟ್ಕಾ, ಮದ್ಯ ವ್ಯಸನದ ಬಾಟಲಿ ಹಾಗೂ ಮೂತ್ರಗಳಿಂದ ಗಲೀಜು ಮಾಡಿ ವ್ಯವಸ್ಥೆ ಹದಗೆಡಿಸಲಾಗಿತ್ತು. ಇದನ್ನು ಗಮನಿಸಿ ಅದಕ್ಕೆ ಅಂದವಾಗಿ ಪೇಂಟ್ ಮಾಡಿ 12ನೇ ಶತಮಾನದ ಶಿವಶರಣರ ಹೆಸರನ್ನು ಬರೆದು ಅದಕ್ಕೊಂದು ಮೆರುಗು ತರುವ ಕೆಲಸ ಮಾಡಲಾಗಿದೆ ಎಂದು ಪ್ರಕಾಶ ಆರ್.ಕೆ. ಸಂತಸ ವ್ಯಕ್ತಪಡಿಸಿದರು.
ಸಂತೋಷ ಚವ್ಹಾಣ, ಬಾಹುಬಲಿ ಶಿವಣ್ಣನವರ, ರವಿ ರತ್ನಾಕರ, ರಾಜಕುಮಾರ ಹೊಸಟ್ಟಿ, ವಿಕಾಸ ಕಂಬಾಗಿ, ಸಚಿನ ವಾಲೀಕಾರ, ಮಹೇಶ ಕುಂಬಾರ, ಆನಂದ ಹೊನವಾಡ, ಪ್ರಮೋದ ಚವ್ಹಾಣ, ರೇವಣಸಿದ್ದಯ್ಯ ಹಿರೇಮಠ, ವಿಠ್ಠಲ ಗುರುವಿನ, ಶ್ರೀಶೈಲ ಕುಮಸಗಿ, ವೀರೇಶ ಸೊನ್ನಲಿಗಿ, ಶ್ರೀಶೈಲ ಜುಮನಾಳ, ಸಚಿನ ಚವ್ಹಾಣ, ರಾಹುಲ್ ಬಾಬು, ಕಿರಣ ಕುಂಬಾರ, ಅನಿಲ ಶಿರಗುಪ್ಪಿ, ಪ್ರಶಾಂತ ಅವರನ್ನೊಳಗೊಂಡ ತಂಡ ಈ ಕಾರ್ಯಕ್ಕೆ ಕೈ ಜೋಡಿಸಿದೆ.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.