CM ಬಲಾವಣೆ ಹೈಕಮಾಂಡ್ಗೆ ಬಿಟ್ಟದ್ದು ಸಂಪುಟದಲ್ಲಿ ಸಂಪೂರ್ಣ ಬದಲಾವಣೆ : ಕುಲಕರ್ಣಿ
Team Udayavani, Aug 19, 2023, 5:39 PM IST
ವಿಜಯಪುರ : ಮುಖ್ಯಮಂತ್ರಿ ಬದಲಾವಣೆ ಕುರಿತು ಹೈಕಮಾಂಡ್ ನಿರ್ಧರಿಸಲಿದೆ. ಎರಡೂವರೆ ವರ್ಷದ ಬಳಿಕ ರಾಜ್ಯ ಸರ್ಕಾರದ ಸಂಪುಣದಲ್ಲಿ ಸಂಪೂರ್ಣ ಬದಲಾವಣೆ ಆಗಲಿದ್ದು, ಸಚಿವ ಸ್ಥಾನ ಆಕಾಂಕ್ಷಿಗಳಲ್ಲಿ ಹೊಸದಾಗಿ 34 ಶಾಸಕರಿಗೆ ಅವಕಾಶ ಸಿಗಲಿದೆ ಎಂದು ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ವಿನಯ ಕುಲಕರ್ಣಿ ಹೇಳಿದ್ದಾರೆ.
ಶನಿವಾರ ನಗರಕ್ಕೆ ಆಗಮಿಸಿದ್ದಾಗ ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರು ನಿರೀಕ್ಷೆ ಮೀರಿ 135 ಶಾಸಕರನ್ನು ಆಯ್ಕೆ ಮಾಡಿದ್ದಾರೆ. ಆದರೆ ಸಂಪುಟದಲ್ಲಿ 34 ಮಂತ್ರಿಗಳನ್ನು ಮಾಡಲು ಮಾತ್ರ ಅವಕಾಶವಿದೆ. ಹೀಗಾಗಿ ಎಲ್ಲರಿಗೂ ಆವಕಾಶ ಕಲ್ಪಿಸಲು ಸಾಧ್ಯವಾಗಿಲ್ಲ ಎಂದರು.
ಸಂಪುಟದಲ್ಲಿ ಅವಕಾಶ ನೀಡುವ ಕುರಿತು ಸಚಿವ ಮುನಿಯಪ್ಪ ಹೇಳಿಕೆಗೆ ಪಕ್ಷದ ಎಲ್ಲ ಶಾಸಕರಲ್ಲಿ ಸಂತಸ ತಂದಿದೆ. ಎರಡೂವರೆ ವರ್ಷದ ಬಳಿಕ ನಾವೆಲ್ಲ ಸಚಿವರು ಬದಲಾವಣೆ ಆಗೋಣ, ಹೊಸಬರಿಗೆ ಅವಕಾಶ ಕೊಡೋಣ ಎಂದಿದ್ದಾರೆ. 30 ಶಾಸಕರಂತೆ ಎರಡು ಬಾರಿ ನಿಗಮ ಮಂಡಳಿಗೆ ನೇಮಿಸಿದರೆ ಎಲ್ಲರಿಗೂ ಅವಕಾಶ ಸಿಗಲಿದೆ ಎಂದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸೂಪರ್ ಸಿಎಂ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆಗೆ ಆಕ್ಷೇಪಿಸಿದ ವಿನಯ ಕುಲಕರ್ಣಿ, ಸಿದ್ಧರಾಮಯ್ಯ ಅವರು ಅತ್ಯಂತ ಬಲಿಷ್ಠವಾಗಿದ್ದು, ಬಲಿಷ್ಠರಾಗಿಯೇ ಇರುತ್ತಾರೆ. ಸಿದ್ಧರಾಮಯ್ಯ ಅವರನ್ನು ಯರೂ ದುರ್ಬಲಗೊಳಿಸಲು ಸಾಧ್ಯವಿಲ್ಲ ಎಂದರು.
ಸಿದ್ಧರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಲು ಡಿ.ಕೆ.ಶಿವಕುಮಾರ ಎಲ್ಲಿಗೂ, ಯಾರ ಬಳಿಯೂ ಹೋಗಿಲ್ಲ. ಬಿಜೆಪಿ ಶಾಸಕ ಯತ್ನಾಳ ಅನಗತ್ಯವಾಗಿ ಇಂಥ ಹೇಳಿಕೆ ನೀಡುತ್ತಿದ್ದಾರೆ. ಸಂಪುಟದಲ್ಲಿರುವ ಎಲ್ಲ ಸಚಿವರು ಆಯಾ ಇಲಾಖೆ ನಿರ್ವಹಿಸುವಲ್ಲಿ ಸಮರ್ಥರಿದ್ದಾರೆ. ಹೀಗಾಗಿ ಒಬ್ಬರು ಸೂಪರ್ ಸಿಎಂ ಅಲ್ಲ, ಎಲ್ಲರೂ ಸೂಪರ್ ಸಾಮರ್ಥ್ಯ ಹೊಂದಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Award: 2023-24, 2024-25ನೇ ಸಾಲಿನ “ಗಡಿನಾಡ ಚೇತನ” ಪ್ರಶಸ್ತಿ ಪ್ರಕಟ
Muddebihal: ನಿಂತಿದ್ದ ಕ್ಯಾಂಟರ್ ಗೆ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು
ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಕೌನ್ ಬನೇಗಾ ಕರೋಡ್ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.