Chadchan town; ಬಸ್ಗಳ ಮಧ್ಯೆ ಡಿಕ್ಕಿ; 40 ಪ್ರಯಾಣಿಕರಿಗೆ ಗಾಯ
Team Udayavani, Feb 19, 2024, 3:08 PM IST
ವಿಜಯಪುರ: ಖಾಸಗಿ ಶಾಲಾ ವಾಹನಕ್ಕೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸರ್ಕಾರಿ ಸಾರಿಗೆ ಸಂಸ್ಥೆಯ ಎರಡು ಬಸ್ಗಳ ಮಧ್ಯೆ ಡಿಕ್ಕಿ ಸಂಭವಿಸಿದ ಘಟನೆ ಚಡಚಣ ಪಟ್ಟಣದಲ್ಲಿ ಜರುಗಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ 8 ಜನರು ಸೇರಿದಂತೆ 40 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಚಡಚಣ ಪಟ್ಟಣದ ದೇವರನಿಂಬರಗಿ ಕ್ರಾಸ್ ಬಳಿ ಸಾರಿಗೆ ಸಂಸ್ಥೆ ಬಸ್ ಸಾಗುವಾಗ ಏಕಾಏಕಿ ಖಾಸಗಿ ವಾಹನ ರಡ್ತೆಯಲ್ಲಿ ಅಡ್ಡ ಬಂದಿದೆ. ಶಾಲಾ ವಾಹನಕ್ಕೆ ಆಗಲಿದ್ದ ಅಪಘಾತ ತಪ್ಪಿಸಲು ಸಾರಿಗೆ ಸಂಸ್ಥೆಯ ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ್ದಾನೆ. ಇದರಿಂದಾಗಿ ಹಿಂದೆ ಬರುತ್ತಿದ್ದ ಸಾರಿಗೆ ಸಂಸ್ಥೆಯ ಮತ್ತೊಂದು ಬ್ರೇಕ್ ಹಾಕಿದ ಬಸ್ನ ಹಿಂಬದಿ ಡಿಕ್ಕಿ ಹೊಡೆದಿದೆ.
ಈ ಅಪಘಾತದಿಂದ 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಇದರಲ್ಲಿ 8 ಜನರ ಗಂಭೀರ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಶಾಲಾ ಬಸ್ನಲ್ಲಿದ್ದ ಕೆಲ ಮಕ್ಕಳಿಗೂ ಗಾಯಗಳಾಗಿರುವ ವರದಿ ಇದೆ.
ಗಾಯಾಳುಗಳನ್ನು ಕೂಡಲೇ ಚಡಚಣ ಆಸ್ಪತ್ರೆಗೆ ಸಾಗಿಸಿದ್ದು, ಗಂಭೀರ ಗಾಯಗೊಂಢವರನ್ನು ವಿಜಯಪುರದ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುದ್ದಿ ತಿಳಿಯುತ್ತತಲೇ ಚಡಚಣ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾರಾಷ್ಟ್ರದ ಗುಡ್ಡಾಪುರದಲ್ಲಿ ಕರ್ನಾಟಕ ಸುವರ್ಣ ಸಂಭ್ರಮ: ಗಡಿ ನೆಲದಲ್ಲಿ ಕನ್ನಡ ಡಿಂಡಿಮ
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Award: 2023-24, 2024-25ನೇ ಸಾಲಿನ “ಗಡಿನಾಡ ಚೇತನ” ಪ್ರಶಸ್ತಿ ಪ್ರಕಟ
Muddebihal: ನಿಂತಿದ್ದ ಕ್ಯಾಂಟರ್ ಗೆ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.