ನಿಗಾ ಕೇಂದ್ರದಲ್ಲಿ ನರಕಯಾತನೆ

ಕೋವಿಡ್‌ ಕೇಂದ್ರದ ದುರವಸ್ಥೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಬಾಧಿತರು

Team Udayavani, Aug 3, 2020, 1:38 PM IST

VP-TDY-1

ವಿಜಯಪುರ: ಜಿಲ್ಲೆಯ ಹಲವು ಕೋವಿಡ್‌ ನಿಗಾ ಕೇಂದ್ರಗಳಲ್ಲಿ ದುರವಸ್ಥೆ ಕುರಿತು ದೂರುಗಳು ಕೇಳಿ ಬರುತ್ತಿವೆ. ಕೋವಿಡ್‌ ಕೇಂದ್ರಗಳಲ್ಲಿ ನಾಯಿಗಳಿಗಿಂತ ಕಡೆಯಾಗಿ ನೋಡಿಕೊಳ್ಳಲಾಗುತ್ತಿದೆ ಎಂಬ ಸಂಗತಿ ಬಯಲಾಗಿದೆ. ಇದೀಗ ಕೋವಿಡ್‌ ನಿಗಾ ಕೇಂದ್ರವೊಂದರ ಅವ್ಯವಸ್ಥೆ ಕುರಿತು ಕೇಂದ್ರದ ಕ್ವಾರಂಟೈನ್‌ ನಿಗಾದಲ್ಲಿ ಇರುವವರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಜಮ್ಮಲದಿನ್ನಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ನಡೆಯುತ್ತಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಕೋವಿಡ್‌ ಕೇರ್‌ ಕೇಂದ್ರ ತೆರೆಯಲಾಗಿದೆ. ಈ ಕೇಂದ್ರದಲ್ಲಿ ಮಹಿಳೆಯರು, ಪುರುಷರು ಸೇರಿ 32 ಸೋಂಕಿತರಿದ್ದಾರೆ. ಆದರೆ ಸದರಿ ಕೇಂದ್ರದಲ್ಲಿ ಕುಡಿಯುವ ಹಾಗೂ ಬಳಕೆ ನೀರಿನ ಕೊರತೆ, ಶೌಚಾಲಯಗಳ ದುರವಸ್ಥೆ, ಸ್ವಚ್ಛತೆ ಸೇರಿದಂತೆ ಕೇಂದ್ರದಲ್ಲಿ ತಾಂಡವಾಡುತ್ತಿರುವ ತ್ಯಾಜ್ಯದ ದುರ್ವಾಸನೆ ಕುರಿತು ಕ್ವಾರಂಟೈನ್‌ ಆಗಿರುವ ಸೋಂಕು ಶಂಕಿತರು ದೂರು ಹೇಳಿಕೊಂಡರೂ ಯಾರೊಬ್ಬರೂ ಗಮನ ಹರಿಸಿಲ್ಲ.  ಹೀಗಾಗಿ ಸದರಿ ಕೇಂದ್ರದಲ್ಲಿ ಕ್ವಾರಂಟೈನ್‌ ಆದವರೇ ತಮ್ಮ ತಮ್ಮ ಕೋಣೆಗಳ ಕಸ ಗೂಡಿಸಿಕೊಳ್ಳಬೇಕು. ಇಷ್ಟಾದರೂ ಸಮಸ್ಯೆ ಆಲಿಸಿ, ಪರಿಹಾರ ಕ್ರಮಕ್ಕೆ ಮುಂದಾಗಿಲ್ಲ ಎಂದು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಟ್ಟು ಹರಿಹಾಯ್ದಿದ್ದಾರೆ.

ಜಮ್ಮಲದಿನ್ನಿ ಗ್ರಾಮದ ಕೋವಿಡ್‌ ಕೇರ್‌ ಕೇಂದ್ರದಲ್ಲಿ ಮಹಿಳೆಯರು, ಪುರುಷರು ಒಂದೇ ಕೇಂದ್ರದಲ್ಲಿ ನೆಲ ಮಾಳಿಗೆ ಹಾಗೂ ಮೊದಲ ಮಾಳಿಗೆಯಲ್ಲಿ ಕ್ವಾರಂಟೈನ್‌ ಮಾಡಲಾಗಿದೆ. ಆದರೆ ಇಲ್ಲಿರುವ ಶೌಚಾಲಯಗಳಿಗೆ ನಳ ಇದ್ದರೂ ನೀರಿಲ್ಲ. ಜೋಡಿಸಿದ್ದ ಬಾಗಿಲು ಮುರಿದಿದ್ದು, ದುರಸ್ತಿ ಮಾಡಿಸಿಲ್ಲ. ಶೌಚಾಲಯಗಳಲ್ಲಿ ಸ್ವತ್ಛತೆ ಇಲ್ಲದ ಕಾರಣ ಸೊಳ್ಳೆಗಳ ಹಾವಳಿ ಹೆಚ್ಚಿದೆ. ಹೀಗಾಗಿ ಸದರಿ ಕೇಂದ್ರದಲ್ಲಿ ಶೌಚಕ್ಕೆ ಗೋಡೆಗಳಿದ್ದರೂ ಬಾಗಿಲಿಲ್ಲ. ಮಹಿಳೆಯರಂತೂ ಮುಜುಗುರದಿಂದಲೇ ಜೀವನ ನಡೆಸುತ್ತಿದ್ದಾರೆ. ಈ ಕೇಂದ್ರದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಗಂಭೀರವಾಗಿದೆ. ಕೇಂದ್ರದಲ್ಲಿರುವ ಎಲ್ಲರಿಗೂ ಒಂದೇ ಟ್ಯಾಂಕರ್‌ ನೀರಿನ ಬಳಕೆ ಮಾಡಬೇಕಿದೆ. ಹೀಗಾಗಿ ಮೇಲಿರುವ ಟ್ಯಾಂಕರ್‌ನಿಂದ ಬಕೇಟ್‌ಗಳಲ್ಲಿ ಕ್ವಾರಂಟೈನ್‌ ಆದವರೇ ಹೊತ್ತೂಯ್ಯಬೇಕು. ನೀರಿನ ಕೊರತೆ ಕಾರಣ ನೀರಿಗಾಗಿ ಸೋಂಕಿತರಲ್ಲಿ ಕಿತ್ತಾಡಿಕೊಳ್ಳುವ ದಯನೀಯ ಸ್ಥಿತಿ ಇದೆ.

ಹೀಗಾಗಿ ನೀರಿನ ಸಮಸ್ಯೆಯಿಂದಾಗಿ ಹಲವರು ವಾರವಾದರೂ ಸ್ನಾನ ಮಾಡಲು ಸಾಧ್ಯವಾಗಿಲ್ಲ ಎಂದು ದೂರಿದ್ದಾರೆ. ಇನ್ನು ಸದರಿ ಕೋವಿಡ್‌ ಕೇಂದ್ರದಲ್ಲಿ ಎಲ್ಲೆಂದರಲ್ಲಿ ಕೋವಿಡ್‌ ಕ್ವಾರಂಟೈನ್‌ ಆದವರಿಗೆ, ಇವರ ಮೇಲೆ ನಿಗಾ ಇರಿಸಲು ನೇಮಿಸಿರುವ ಅಧಿಕಾರಿ-ಸಿಬ್ಬಂದಿ ಬಳಸಿ ಬಿಸಾಡಿದ ವೈದ್ಯಕೀಯ ತ್ಯಾಜ್ಯ ಸೇರಿದಂತೆ ಎಲ್ಲೆಂದರಲ್ಲಿ ಕಸದ ರಾಶಿ ಸೃಷ್ಟಿಸಿದೆ. ಸದರಿ ಕೇಂದ್ರದಲ್ಲಿ ಕಸ ಗೂಡಿಸಲು ಕೂಡ ಸಿಬ್ಬಂದಿ ಇಲ್ಲದ ದುಸ್ಥಿತಿ ಇದ್ದು ಹಲವು ದಿನಗಳಿಂದ ಕಸ ವಿಲೇವಾರಿ ಮಾಡದ ಕಾರಣ ಕೇಂದ್ರದಲ್ಲಿ ದುರ್ವಾಸನೆ ಹರಡಿಕೊಂಡಿದೆ. ವೈದ್ಯಕೀಯ ಆರೈಕೆಗೆ ಬಂದಿರುವ ಈ ಕೇಂದ್ರದಲ್ಲಿ ರೋಗ ಇಲ್ಲದವರಿಗೂ ರೋಗ ಬಾಧಿಸುವ ಪರಿಸ್ಥಿತಿ ಇದೆ ಎಂದು ದೂರುತ್ತಿದ್ದಾರೆ.

ಬೆಂಗಳೂರಿನಿಂದ ಬಂದಿರುವ ಸೋಂಕಿತರೊಬ್ಬರು ಸದರಿ ಕೋವಿಡ್‌ ಕೇಂದ್ರದಲ್ಲಿ ಇರುವ ದುಸ್ಥಿತಿ ಕಣ್ಣಿನಿಂದ ನೋಡುವುದೇ ಅಸಾಧ್ಯವಾಗಿದೆ. ಇಂತ ಸ್ಥಿತಿಯಲ್ಲಿ ನಾವು ಕ್ವಾರಂಟೈನ್‌ ಜೀವನ ನಡೆಸುವುದು ದುಸ್ಥರವಾಗಿದೆ. ಇಂತ ಅವ್ಯವಸ್ಥೆಯ ಕ್ವಾರಂಟೈನ್‌ ನಿಗಾದಲ್ಲಿ ನಮ್ಮನ್ನು ಇರಿಸುವುದಕ್ಕಿಂತ ಮನೆಯಲ್ಲೇ ಕ್ವಾರಂಟೈನ್‌ ಆಗಲು ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

ಸದರಿ ಕೇಂದ್ರದ ಉಸ್ತುವಾರಿಗೆ ಇರುವ ಅಧಿಕಾರಿಗಳು ಇತ್ತ ಗಮನವನ್ನೇ ಹರಿಸುತ್ತಿಲ್ಲ. ಕೂಡಲೇ ಸ್ಥಳೀಯ ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ, ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸದರಿ ಕೋವಿಡ್‌ ಕೇಂದ್ರದ ಸಮಸ್ಯೆ ಸರಿಪಡಿಸಬೇಕು. ಇಲ್ಲವಾದಲ್ಲಿ ಕೇಂದ್ರದಲ್ಲಿರುವ ರೋಗಿಗಳನ್ನು ಬಿಡುಗಡೆ ಮಾಡಿ, ಮನೆಗಳಲ್ಲೇ ಕ್ವಾರಂಟೈನ್‌ ಆಗಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.