Crop compensation; ವಿಜಯಪುರದಲ್ಲಿ ನೂರಾರು ಕೋಟಿ ಅವ್ಯವಹಾರ: ತನಿಖೆಗೆ ರೈತರ ಆಗ್ರಹ


Team Udayavani, Jul 19, 2024, 3:17 PM IST

crop compensation; ವಿಜಯಪುರದಲ್ಲಿ ನೂರಾರು ಕೋಟಿ ಅವ್ಯವಹಾರ: ತನಿಖೆಗೆ ರೈತರ ಆಗ್ರಹ

ವಿಜಯಪುರ: ರಾಜ್ಯ ಸರ್ಕಾರ ಕಳೆದ ವರ್ಷ ಮಳೆ ಇಲ್ಲದೇ ಭೀಕರ ಬರ ಆವರಿಸಿದ ಸಂದರ್ಭದಲ್ಲಿ 13 ತಾಲೂಕುಗಳು ಸೇರಿ ಇಡೀ ವಿಜಯಪುರ ಜಿಲ್ಲೆಯನ್ನು ಬರಪೀಡಿತವೆಂದು ಘೋಷಿಸಿದೆ. ಆದರೆ ಬೆಳೆ ಪರಿಹಾರ ವಿತರಣೆಯಲ್ಲಿ ಮಾತ್ರ ಶೇ.25 ರಷ್ಟು ರೈತರಿಗೂ ವಿಮೆ ಪಾವತಿಸದೆ ಭಾರಿ ವಂಚನೆ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ರೈತರು, ಇದರ ವಿರುದ್ಧ ಜು.23 ರಂದು ಜೆಡಿ ಕಛೇರಿಗೆ ಬೀಗ ಹಾಕುವ ಹೋರಾಟ ಹಮ್ಮಿಕೊಂಡಿದಾಗಿ ತಿಳಿಸಿದಾರೆ.

ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಸಗರ, ವಿಜಯಪುರ ಜಿಲ್ಲೆಯಲ್ಲಿ ಬೆಳೆ ವಿಮೆ ಹೆಸರಿನಲ್ಲಿ ಭಾರಿ ಪ್ರಮಾಣದಲ್ಲಿ ರೈತರನ್ನು ವಂಚಿಸುವ ಕೆಲಸ ನಡೆದಿದೆ. ಬೆಳೆ ಹಾನಿಯಾದರೂ ವಾಸ್ತವಿಕ ಸಮೀಕ್ಷೆ ನಡೆಸದೆ ಫಲಾನುಭವಿ ಬಾಧಿತ ರೈತರನ್ನು ವಂಚಿಸುವಲ್ಲಿ ಕಂಪನಿಗಳೊಂದಿಗೆ ಅಧಿಕಾರಿಗಳು ಶಾಮೀಲಾಗಿದ್ದಾರೆ. ಇದರಲ್ಲಿ ಸರ್ಕಾರದ ನಿರ್ಲಕ್ಷವೂ ಸೇರಿದೆ ಎಂದು ಹರಿಹಾಯ್ದರು.

ವಿಜಯಪುರ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದರೂ ನಂತರ ಮಳೆ ಕೈಕೊಟ್ಟು ಬಹುತೇಕ ಬೆಳೆ ಹಾನಿಯಾಗಿತ್ತು. ಈ ಹಂತದಲ್ಲಿ ರೈತರಿಗೆ ಬೆಳೆ ನಷ್ಟವಾದಲ್ಲಿ ವಿಮೆ ಕೊಡುವುದಾಗಿ ನಂಬಿಸಿ 147 ಕೋಟಿ ರೂ. ಭರಿಸಿಕೊಂಡರು ಎಂದು ವಿವರಿಸಿದರು.

ಆದರೆ ಬೆಳೆ ಹಾನಿಯ ಬಳಿಕ ಕಾಲಮಿತಿಯಲ್ಲಿ ರೈತರ ಜಮೀನಿಗೆ ಭೇಟಿ ನೀಡಿ ವಾಸ್ತವಿಕ ಸಮೀಕ್ಷೆ ನಡೆಸಲಿಲ್ಲ. ಪ್ರತಿ ರೈತರ ಜಮೀನಿಗೆ ಭೇಟಿ ನೀಡಲು ಕಂಪನಿಗಳು 10 ರೂ. ಸಂಭಾವನೆ ಆಧಾರದಲ್ಲಿ ಹೊರ ಗುತ್ತಿಗೆ ಆಧಾರದಲ್ಲಿ ಕೆಲ ಯುವಕರನ್ನು ನೇಮಿಸಿಕೊಂಡವು ಎಂದು ದೂರಿದರು.

ಕಂಪನಿಗಳು ನೇಮಿಸಿಕೊಂಡ ಈ ಸಮೀಕ್ಷಕರು ಹಣದ ಆಸೆಗೆ ಕಂಪನಿಗಳು ಹೇಳಿದಂತೆ ಯಾರದೋ ಜಮೀನಿನ ಫೋಟೋವನ್ನು ಇನ್ನಾರದೋ ದಾಖಲೆ ಎಂದು ಸೇರ್ಪಡೆ ಮಾಡಿದ್ದಾರೆ. ಇದರಿಂದಲೂ ವಾಸ್ತವ ತಿರುಚುವ ಸಂಚು ನದಿದೆ ಎಂದು ದೂರಿದರು.

ರೈತರನ್ನು ವಂಚಿಸುವ ಉದ್ದೇಶದಿಂಧ ಅಧಿಕಾರಿಗಳು ವಿಮೆ ಕಂಪನಿಗಳೊಂದಿಗೆ ಕಛೇರಿಯಲ್ಲೇ ಕುಳಿತು ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಸರ್ಕಾರ ವಿಜಯಪುರ ಜಿಲ್ಲೆಯನ್ನು ಭೀಕರ ಬರ ಪೀಡಿತವೆಂದು ಘೋಷಿಸುವಲ್ಲಿ ವಿಳಂಬ ಮಾಡಿತು. ಇದರಿಂದ ಹಿಂಗಾರು ಹಂಗಾಮಿಗೆ ಭೂಮಿ ಸಿದ್ಧತೆ ಮಾಡಿಕೊಂಡ ರೈತರು ಮುಂಗಾರಿನಲ್ಲಿ ಹಾಳಾದ ಬೆಳೇಯನ್ನು ಹರಗಿ ತೆಗೆದಿದ್ದರು.

ಈ ಹಂತದಲ್ಲಿ ಸ್ಥಳಕ್ಕೆ ಬಂದ ಅಧಿಕಾರಿಗಳು ನಿಮ್ಮ ಜಮೀನಿನಲ್ಲಿ ವಿಮೆ ಸಂದರ್ಭದಲ್ಲಿ ನಮೂದಿಸಿದ ಬೆಳೆ ಇಲ್ಲ. ಹೀಗಾಗಿ ನೀವು ಸುಳ್ಳು ಮಾಹಿತಿ ನೀಡಿದ್ದೀರಿ ಎಂದು ರೈತರನ್ನೇ ವಂಚಕರಂತೆ ಬಿಂಬಿಸುವ ಕೆಲಸ ಮಾಡಿದ್ದಾರೆ. ವಾಸ್ತವಿಕವಾಗಿ ಲಕ್ಷಾಂತರ ರೂ. ಪರಿಹಾರ ಬರಬೇಕಿದ್ದ ರೈತರಿಗೆ ಬಿಡಿಗಾಸು ನೀಡಿಲ್ಲ ಎಂದು ಕಿಡಿ ಕಾರಿದರು.

ವಿಮೆ ಭರಿಸಿಕೊಳ್ಳುವ ಸಂದರ್ಭದಲ್ಲಿ ಹಳ್ಳಿಹಳ್ಳಿಗೆ ಬಂದು ಪ್ರಚಾರ ಮಾಡಿ ರೈತರನ್ನು ಮರುಳು ಮಾಡುವ ಅಧಿಕಾರಿಗಳು, ಬೆಳೆ ಹಾನಿಯಾದ ಸಂದರ್ಭದಲ್ಲಿ ವಿಮಾ ಕಂಪನಿಗಳ ಪ್ರತಿನಿಧಿಗಳನ್ನು ಕರೆಸಿ ಸಮೀಕ್ಷೆ ಮಾಡುತ್ತಿಲ್ಲ. ಇದರಿಂದ ಸಂಕಷ್ಟದ ಸಂದರ್ಭದಲ್ಲಿ ಬೆಳೆ ಬರುತ್ತದೆ ಎಂದು ರೈತ ಭರಿಸಿದ ಮೊತ್ತಕ್ಕೂ ಮೋಸವಾಗಿದೆ ಎಂದು ವಾಗ್ದಾಳಿ ನಡೆಸಿದರು.

ವಿಜಯಪುರ ಜಿಲ್ಲೆಯನ್ನು ಸರ್ಕಾಋವೇ ಅಧಿಕೃತವಾಗಿ ಬರ ಪೀಡಿತ ಎಂದು ಘೋಷಿಸಿ, 413 ಕೋಟಿ ರೂ. ಘೋಷಣೆ ಮಾಡಿದರೂ, ಅಧಿಕಾರಿಗಳು ನೀಡಿದ ವರದಿಯಂತೆ ಜಿಲ್ಲೆಗೆ ಬಂದಿದ್ದು ಮಾತ್ರ ಕೇವಲ 131 ಕೋಟಿ ರೂ. ಆದರೆ ರೈತರಿಂದ ಭರಿಸಿಕೊಂಡ ಬೆಳೆ ವಿಮೆ ಮೊತ್ತವೇ 147 ಕೋಟಿ ರೂ. ಇದೆ ಎಂದು ವಿವರಿಸಿದರು.

ಕೂಡಲೇ ಜಿಲ್ಲೆಯಲ್ಲಿ ಬೆಳೇ ವಿಮೆ ವಿಷಯದಲ್ಲಿ ನೂರಾರು ಕೋಟಿ ರೂ. ಅವ್ಯವಹಾರ ನಡೆದಿದೆ. ರೈತರನ್ನು ವಂಚಿಸಿ ಕಂಪನಿಗಳಿಗೆ ಲಾಭ ಮಾಡಿಕೊಡುವ ದುರುದ್ದೇಶದಿಂದ ಅಧಿಕಾರಿಗಳೇ ಶಾಮೀಲಾಗಿ ಸುಳ್ಳು ವರದಿ ನೀಡಿದ್ದಾರೆ. ಈ ಕುರಿತು ಸಮಗ್ರ ತನಿಖೆ ನಡೆಸಿ, ವಂಚಿತ ರೈತರಿಗೆ ಪರಿಹಾರ ಕೊಡಿಸಬೇಕು ಎಂದು ಆಗ್ರಹಿಸಿದರು.

ಈ ಕುರಿತು ಜಿಲ್ಲಾಡಳಿತಕ್ಕೆ ಈಗಾಗಲೇ ಮನವಿ ಸಲ್ಲಿಸಿದ್ದರೂ ಪ್ರಯೋಜವನಾಗಿಲ್ಲ. ಜಿಲ್ಲೆಯ ರೈತರಿಗೆ ಇಷ್ಟೊಂದು ಪ್ರಮಾಣದಲ್ಲಿ ವಂಚನೆಯಾಗಿದ್ದರೂ ಜಿಲ್ಲೆಯ ಯಾವೊಬ್ಬ ಜನಪ್ರತಿನಿಧಿಯೂ ಈ ಬಗ್ಗೆ ಧ್ವನಿ ಎತ್ತಿಲ್ಲ. ಹೀಗಾಗಿ ಇಡೀ ಬೆಳೆ ವಿಮೆ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಜುಲೈ 23 ರಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಛೇರಿಗೆ ಮುತ್ತಿಗೆ ಹಾಕಿ, ಬೀಜ ಜಡಿಯುವ ಹೋರಾಟ ಹಮ್ಮಿಕೊಂಡಿರುವುದಾಗಿ ಎಚ್ಚರಿಸಿದರು.

ಇದಕ್ಕೂ ಸರ್ಕಾರ, ಜಿಲ್ಲಾಡಳಿತ ಹಾಗೂ ಅಧಿಕಾರಿಗಳು ಸ್ಪಂದಿಸದಿದ್ದಲ್ಲಿ ಇಡೀ ಹಗರಣದ ಅವ್ಯವಹಾರದ ಕುರಿತು ತನಿಖೇ ನಡೆಸುವ ಕುರಿತು ನ್ಯಾಯಾಯಲದ ಮೊರೆ ಹೋಗುವ ಅಥವಾ ಲೋಕಾಯುಕ್ತರಿಗೆ ದೂರು ನೀಡಲು ಯೋಜಿಸಿದ್ಧೇವೆ ಎಂದರು.

ಸಂಘಟನೆಯ ಜಿಲ್ಲಾ ಸಂಚಾಲಕ ರಾಮನಗೌಡ ಪಾಟೀಲ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

Vijayapura; ಯತ್ನಾಳ ಭಾವಚಿತ್ರವಿದ್ದ ಬೆಂಬಲಿಗರ ಬ್ಯಾನರ್ ಹರಿದ ಕಿಡಿಗೇಡಿಗಳು

Vijayapura; ಯತ್ನಾಳ ಭಾವಚಿತ್ರವಿದ್ದ ಬೆಂಬಲಿಗರ ಬ್ಯಾನರ್ ಹರಿದ ಕಿಡಿಗೇಡಿಗಳು

dw

Muddebihal: ಬೈಕ್ ವ್ಹೀಲಿಂಗ್ ನಾಲ್ವರು ಯುವಕರ ಬಲಿ

Yathanal

Ganesh Festival: ಪ್ರಸಾದಕ್ಕೆ ಪರವಾನಗಿ: ಹಿಂದೂ ಹಬ್ಬಗಳ ಹತ್ತಿಕ್ಕುವ ಪ್ರಯತ್ನ: ಯತ್ನಾಳ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.