ನಾಳೆ ಗುಬ್ಬಿ-ಅರಣ್ಯ-ಜಲ ಸಂರಕ್ಷಣೆ ಜಾಗೃತಿಗಾಗಿ ಸೈಕ್ಲಿಂಗ್‌


Team Udayavani, Mar 22, 2022, 4:40 PM IST

27cycling

ವಿಜಯಪುರ: ವಿಶ್ವ ಗುಬ್ಬಚ್ಚಿ ದಿನಾಚರಣೆ(ಮಾ. 20), ವಿಶ್ವ ಅರಣ್ಯ ದಿನಾಚರಣೆ (ಮಾ. 22) ಹಾಗೂ ವಿಶ್ವ ಜಲ ದಿನಾಚರಣೆ (ಮಾ. 23) ಅಂಗವಾಗಿ ಪರ್ಯಾವರಣ ಸಂರಕ್ಷಣಾ ವೇದಿಕೆಯಿಂದ ಮಾ. 23ರಂದು ನಗರದಲ್ಲಿ ಬೃಹತ್‌ ಸೈಕಲ್‌ ಜಾಥಾ ಹಮ್ಮಿಕೊಳ್ಳಲಾಗಿದೆ.

ಪರಿಸರ ಸಂರಕ್ಷಣಾ ಗತಿವಿ ಸಂಘಟನೆ ಸಹಯೋಗದಲ್ಲಿ ಹಮ್ಮಿಕೊಂಡಿರುವ ಸೈಕಲ್‌ ಜಾಥಾ ಕುರಿತು ಸೋಮವಾರ ನಗರದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಬಸವರಾಜ ಬೈಜಚಬಾಳ ಹಾಗೂ ಸೈಕ್ಲಿಂಗ್‌ ಸಂಸ್ಥೆ ರಾಜ್ಯಾಧ್ಯಕ್ಷ ರಾಜು ಬಿರಾದಾರ, ವಿವಿಧ ಪರಿಸರ ಸಂರಕ್ಷಣೆ ಸಂಘಟನೆಗಳ ಸಹಯೋಗದಲ್ಲಿ ಈ ಕಾರ್ಯಕ್ರಮ ಸಂಘಟಿಸಲಾಗಿದೆ ಎಂದರು.

ಸೈಕಲ್‌ ಜಾಥಾದಲ್ಲಿ ಸುಮಾರು 500 ಸೈಕ್ಲಿಸ್ಟ್‌ಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ನಗರದ ಬಂಜಾರಾ ಕ್ರಾಸ್‌ನಲ್ಲಿ ಮಾ. 23ರಂದು ಬೆಳಗ್ಗೆ 6ಕ್ಕೆ ಚಾಲನೆ ದೊರೆಯಲಿದ್ದು, ಲಿಂಗದ ಗುಡಿ, ಸಿದ್ಧೇಶ್ವರ ಗುಡಿ, ಮಹಾತ್ಮಾ ಗಾಂಧೀಜಿ ವೃತ್ತ, ಬಸವೇಶ್ವರ ವೃತ್ತ, ಬಸ್‌ ನಿಲ್ದಾಣ ಮಾರ್ಗವಾಗಿ ಐತಿಹಾಸಿಕ ಗಗನ ಮಹಲ್‌ ಬಂದು ತಲುಪಲಿದೆ ಎಂದು ವಿವರಿಸಿದರು.

ಜಿಲ್ಲಾಧಿಕಾರಿ ಸುನೀಲಕುಮಾರ, ಜಿ.ಪಂ. ಸಿಇಒ ರಾಹುಲ್‌ ಸಿಂಧೆ, ಎಸ್ಪಿ ಆನಂದಕುಮಾರ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಪರಿಸರದ ವೈವಿಧ್ಯತೆ ಸಂರಕ್ಷಣೆ ವಿಷಯದಲ್ಲಿ ಜನರಲ್ಲಿ ಜಾಗೃತಿ ಮೂಡಿಸಲು ಪರಿಸರಕ್ಕೆ ಪೂರಕವಾಗಿರುವ ಸೈಕ್ಲಿಂಗ್‌ ಮೂಲಕವೇ ಜಾಗೃತಿಗೆ ಮುಂದಾಗಿದ್ದೇವೆ ಎಂದರು.

ಹೆಚ್ಚುತ್ತಿರುವ ಮರಗಳ ವಿನಾಶದಿಂದ ಶುದ್ಧ ಗಾಳಿಗೆ ಸಂಚಕಾರ ಬಂದಿದೆ. ಪಕ್ಷಿ ಸಂಕುಲಕ್ಕೆ ಅದರಲ್ಲೂ ಗುಬ್ಬಿಗಳು ಅಳಿವಿನ ಅಂಚಿಗೆ ಬಂದು ತಲುಪಿವೆ. ಮತ್ತೂಂದೆಡೆ ಜಲ ಮಾಲಿನ್ಯ, ಜಲಮೂಲಗಳ ವಿನಾಶದಿಂದಾಗಿ ಮನುಕುಲ ಮಾತ್ರವಲ್ಲ ಇಡೀ ಜೀವವೈವಿಧ್ಯಕ್ಕೆ ಅಪಾಯದ ದುಸ್ಥಿತಿಗೆ ತಲುಪಿದೆ. ಇದನ್ನು ತಡೆಯಲು ಜನರದಲ್ಲಿ ಜಾಗೃತಿ ಮೂಡಿಸಲು ಸೈಕಲ್‌ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದರು.

ಪರಿಸರಕ್ಕೆ ಮಾರಕವಾಗಿರುವ ನಿಷೇಧಿತ ಪ್ಲಾಷ್ಟಿಕ್‌ ಬಳಕೆ ಮಾಡದತೆ, ಪರಿಸರ ಸ್ನೇಹಿ ಚೀಲಗಳನ್ನು ಮಾರುಕಟ್ಟೆಗೆ ನಾವೇ ಕೊಂಡೊಯ್ದು ವಸ್ತುಗಳನ್ನು ಖರೀದಿಸುವ ಕುರಿತು ಜನರಲ್ಲಿ ಅರಿವು ಮೂಡಿಸಲಾಗುತ್ತದೆ. ಕೋವಿಡ್‌ ಸಂಕಷ್ಟದ ಸಂದರ್ಭದಲ್ಲಿ ಪರಿಶುದ್ಧ ಗಾಳಿ ಮಾತ್ರವಲ್ಲ ಪರಿಸರ ಸಂರಕ್ಷಣೆಯ ಪಾಠ ಕಲಿತಿದ್ದೇವೆ. ಹೀಗಾಗಿ ಸಸಿಗಳನ್ನು ನೆಟ್ಟು ಮರಗಳಾಗಿ ಬೆಳೆಸುವ ಮಹತ್ವ, ಮನೆಗಳ ಛಾವಣಿ ಮೇಲೆ ಹಸಿರು ಮನೆಗಳ ನಿರ್ಮಾಣ ಹಾಗೂ ಮನೆಗಳಲ್ಲಿನ ತ್ಯಾಜ್ಯದ ನೀರಿನ ಮರು ಬಳಕೆ ಕುರಿತು ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕಿದೆ ಎಂದರು.

ಮಳೆ ನೀರು ಕೊಯ್ಲು ಮೂಲಕ ಜಲ ಸಂರಕ್ಷಣೆ ಜೊತೆಗೆ ವಿದ್ಯುತ್‌ ಮಿತ ಬಳಕೆಯಿಂದ ಜಲ ಆಧಾರಿತ ವಿದ್ಯುತ್‌ ಉತ್ಪಾದನೆ ತಗ್ಗಸಿ ಹಾಗೂ ಸೌರ ವಿದ್ಯುತ್‌ ಬಳಕೆ ಮೂಲಕ ಪರಿಸರ ಸ್ನೇಹಿ ಇಂಧನ ಬಳಸುವ ಅಗತ್ಯದ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡುವ ಕೆಲಸ ನಡೆಸಿದ್ದೇವೆ ಎಂದರು.

ಎಲ್ಲಕ್ಕಿಂತ ಮುಖ್ಯವಾಗಿ ಪರಿಸರದ ಎಲ್ಲ ವಿಭಾಗಕ್ಕೆ ಅಪಾಯ ತಂದೊಡ್ಡಿರುವ ಪ್ಲಾಸ್ಟಿಕ್‌ ಮರು ಬಳಕೆ ಕುರಿತು ಜನರಲ್ಲಿ ಅರಿವು ಮೂಡಿಸುವ ಜೊತೆಗೆ, ಜನ ಸಮುದಾಯದ ಸಹಕಾರದಲ್ಲಿ ಅನುಷ್ಠಾನಕ್ಕೆ ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದರು.

ಪರಿಸರ ಸಂರಕ್ಷಣೆ ಗತಿವಿ  ಸಂಸ್ಥೆಯ ವಿವಿಧ ವಿವಿಧ ವಿಭಾಗಗಳ ಪ್ರಮುಖರಾದ ಶಶಿಧರ ರೂಡಗಿ, ಪಲ್ಲವಿ ವಾಯದಂಡೆ, ಡಾ| ಬಾಬು ಸಜ್ಜನ ಇತರರು ಇದ್ದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.