ಆರ್ಥಿಕ ಸಂಕಷ್ಟಸಲ್ಲಿದ್ದ ಸೈಕ್ಲಿಸ್ಟ್ : ಎಂ.ಬಿ.ಪಾಟೀಲ್ ರಿಂದ 3 ಲಕ್ಷ ರೂ. ನೆರವು


Team Udayavani, Sep 19, 2022, 5:02 PM IST

1-dsffsdfffs

ವಿಜಯಪುರ: ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಸೈಕ್ಲಿಂಗ್ ಕ್ರೀಡಾಪಟುವಿಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾದ ಬಬಲೇಶ್ವರ ಶಾಸಕ ಎಂ.ಬಿ. ಪಾಟೀಲ್ ನೆರವಾಗಿದ್ದಾರೆ.

ಬಬಲೇಶ್ವರ ತಾಲೂಕಿನ ಹೆಬ್ಬಾಳಟ್ಟಿ ಗ್ರಾಮದ ಭಾವನಾ ಪಾಟೀಲ್ ಸೈಕ್ಲಿಂಗ್ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ತೋರುತ್ತಿದ್ದು, ಸೈಕ್ಲಿಂಗ್ ಕ್ರೀಡಾ ಕೂಟಗಳಲ್ಲಿ ಸ್ವಂತ ಸೈಕಲ್ ಇಲ್ಲದೆ ಆರ್ಥಿಕವಾಗಿ ಸಂಕಷ್ಟದಲ್ಲಿದ್ದರು. ಈ ವಿಷಯ ತಿಳಿದ ಎಂ.ಬಿ. ಪಾಟೀಲ್ ಅವರು 3 ಲಕ್ಷ ರೂ. ಆರ್ಥಿಕ ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ.

ಸದ್ಯ ಭಾವನಾ ಪಾಟೀಲ್ ಸೈಕ್ಲಿಂಗ್ ತರಬೇತಿಗಾಗಿ ಮೈಸೂರಿನಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಯುವತಿಯ ತಂದೆ ಮಹಾದೇವ ಪಾಟೀಲ್ ಮತ್ತು ತಾಯಿ ಶ್ರೀದೇವಿ ಪಾಟೀಲ್ ಅವರಿಗೆ ಚೆಕ್ ವಿತರಿಸಿದರು.

”ಜಿಲ್ಲೆಯ ಪ್ರತಿಭಾವಂತ ಯುವ ಸೈಕ್ಲಿಸ್ಟ್ ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಲಿ” ಎಂದು ಎಂ.ಬಿ.ಪಾಟೀಲ್ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಭಾವನಾ ತಂದೆ ಮಹಾದೇವ ಪಾಟೀಲ್ , ”ನಮ್ಮ ಮಗಳಿಗೆ ಸೈಕ್ಲಿಂಗ್ ಎಂದರೆ ತುಂಬಾ ಇಷ್ಟ ಅದಕ್ಕಾಗಿ ಕಠಿಣ ಅಭ್ಯಾಸ ಮಾಡುತ್ತಿದ್ದಾಳೆ. ರಾಜ್ಯ ಮತ್ತು ರಾಷ್ಟ್ರ ಮಟ್ಟದ ನಾನಾ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡಿದ್ದಾಳೆ. ಆರ್ಥಿಕ ಸಂಕಷ್ಟದಲ್ಲಿರುವ ನಮಗೆ ಆಕೆಯ ಸಾಧನೆಗೆ ಅಗತ್ಯ ಇರುವ ಉತ್ತಮ ಸೈಕಲ್ ಕೊಡಿಸಲು ಸಾಧ್ಯವಾಗದ ದುಸ್ಥಿತಿ ಎದುರಾಗಿತ್ತು. ನಮ್ಮ ಮಗಳ ಪ್ರತಿಭೆಗೆ ಪ್ರೋತ್ಸಾಹ ನೀಡಲು ಎಂ.ಬಿ.ಪಾಟೀಲ ಅವರು ದೇವರ ರೂಪದಲ್ಲಿ ಬಂದು ಸಹಾಯ ಮಾಡಿದ್ದಾರೆ. ಅವರಿಗೆ ನಮ್ಮ ಕುಟುಂಬ ಸದಾ ಋಣಿಯಾಗಿರುತ್ತದೆ” ಎಂದರು.

ಭಾವನಾ ತಾಯಿ ಶ್ರೀದೇವಿ ಪಾಟೀಲ್ ಮಾತನಾಡಿ, ”ನನ್ನ ಪತಿ ಮಹಾದೇವ ಪಾಟೀಲ್ ಪಿಕೆಪಿಎಸ್‍ನಲ್ಲಿ ಕೆಲಸ ಮಾಡುತ್ತಾರೆ. ಮೂರು ಮಕ್ಕಳ ನಮ್ಮ ಕುಟುಂಬದಲ್ಲಿ ಹಿರಿಯ ಮಗಳೇ ಭಾವನಾ. ಆಕೆಗೆ ಬಾಲ್ಯದಿಂದಲೇ ಸೈಕಲ್ ಎಂದರೆ ಇಷ್ಟ. ಈಗ ಉತ್ತಮ ಸಾಧನೆ ಮಾಡುತ್ತಿದ್ದರೂ, ಮುಂದಿನ ತಿಂಗಳು ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಸ್ವಂತ ಸೈಕಲ್ ಇರಲಿಲ್ಲ. ಹೊಸ ಸೈಕಲ್ ಕೊಡಿಸಲು ನಮ್ಮಲ್ಲಿ ಆರ್ಥಿಕ ಶಕ್ತಿ ಇರಲಿಲ್ಲ. ನಮ್ಮ ಮಗಳ ವಿಷಯ ತಿಳಿದ ಎಂ.ಬಿ.ಪಾಟೀಲ ಅವರು ನಮಗೆ 3 ಲಕ್ಷ ರೂ. ಆರ್ಥಿಕ ನೆರವು ನೀಡಿದ್ದಾರೆ. ‌ ಈ ಮೂಲಕ ಸೈಕ್ಲಿಂಗ್ ಕ್ಷೇತ್ರದಲ್ಲಿ ನಮ್ಮ ಮಗಳು ಹೆಚ್ಚಿನ ಸಾಧನೆ ಮಾಡಲು ನೆರವಾಗಿದ್ದಾರೆ” ಎಂದು ಆನಂದಭಾಷ್ಪ ಸುರಿಸಿದರು.

ಬಿಎಲ್ ಡಿಇ ಮುಖ್ಯ ಆಡಳಿತಾಧಿಕಾರಿ ಡಾ.ಆರ್.‌ವಿ.‌ಕುಲಕರ್ಣಿ, ನಿರ್ದೇಶಕ ಸಂ.ಗು.ಸಜ್ಜನ, ಕ್ರೀಡಾ ನಿರ್ದೇಶಕ ಎಸ್.‌ಎಸ್.‌‌ಕೋರಿ, ಕೈಲಾಸ ಹಿರೇಮಠ, ಅಶೋಕ ಕಾಖಂಡಕಿ, ಶ್ರೀಶೈಲ ತಪಸೆ, ಸಿದ್ದರಾಯ ಪ್ರಧಾನಿ, ಈಶ್ವರಪ್ಪ ಬಂಗಾರಿ, ಹೊನಮಲಪ್ಪ ಹಟ್ಟಿ, ಈಶ್ವರ ಅಳ್ಳಗಿ, ಮಲ್ಲು ತುಂಗಳ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.