![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Mar 11, 2022, 5:20 PM IST
ವಿಜಯಪುರ: ಜಿಲ್ಲೆಯ ಎಲ್ಲ ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಗ್ರಾಹಕರಿಗೆ ಸಮರ್ಪಕವಾಗಿ ಅವರ ಮನೆ ಬಾಗಿಲಿಗೆ ಎಲ್ಪಿಜಿ ಸಿಲಿಂಡರ್ ಸರಬರಾಜು ಮಾಡುವಂತೆ ಎಲ್ಲ ಎಲ್ಪಿಜಿ ಡೀಲರ್ಗಳಿಗೆ ಜಿಲ್ಲಾಧಿಕಾರಿ ಪಿ. ಸುನೀಲಕುಮಾರ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲೆಯ ಎಲ್ಪಿಜಿ ಡೀಲರ್ ಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ಮಾ.7ರಂದು ಗೃಹಬಳಕೆ ಸಿಲಿಂಡರ್ಗಳಲ್ಲಿನ ಗ್ಯಾಸನ್ನು ಅಕ್ರಮವಾಗಿ ಆಟೋಗಳಿಗೆ ತುಂಬುವುದು ಹಾಗೂ ವಾಣಿಜ್ಯ ಬಳಕೆ ಸಿಲಿಂಡರ್ಗಳಿಗೆ ತುಂಬಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವ ಪ್ರಕರಣ ಪತ್ತೆ ಹಚ್ಚಿ ಅಕ್ರಮ ವಹಿವಾಟುದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗಿದ್ದು, ಇಂತಹ ಅಕ್ರಮಗಳು ಜರುಗದಂತೆ ಎಲ್ ಪಿಜಿ ವಿತರಕರು, ಡೆಲಿವರಿ ಹುಡುಗರಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು ಎಂದು ಸೂಚಿಸಿದರು.
ಅದರಂತೆ ಜಿಲ್ಲೆಯ ಎಲ್ಲ ಹೋಟೆಲ್ ಮಾಲೀಕರಿಗೆ ಎಲ್ಪಿಜಿ ಡೀಲರ್ಗಳಿಂದ ವಾಣಿಜ್ಯ ಸಿಲಿಂಡರ್ಗಳನ್ನು ಖರೀದಿಸಿ ಪಾವತಿ ಕಡ್ಡಾಯವಾಗಿ ಪಡೆದುಕೊಳ್ಳಲು ನಿರ್ದೇಶನ ನೀಡಲಾಗಿದ್ದು, ಪಾವತಿಯಲ್ಲಿ ವಾಣಿಜ್ಯ ಸಿಲಿಂಡರಿನ ನಂಬರ್ ತಪ್ಪದೇ ನಮೂದಿಸಿ ಕೊಡಬೇಕು. ಕೆಲವೊಂದು ಎಲ್ಪಿಜಿ ವಿತರಕರು ಸರ್ಕಾರ ನಿರ್ಧಿಷ್ಟಪಡಿಸಿದ ದರಕ್ಕಿಂತ ಹೆಚ್ಚಿನ ದರ ಪಡೆಯುತ್ತಿರುವುದು ಕಂಡು ಬಂದಿದ್ದು, ಸರ್ಕಾರ ನಿಗದಿಪಡಿಸಿದ ದರದಂತೆ ಹಣ ಪಡೆಯಲು ಒಂದು ವೇಳೆ 5 ಕಿ.ಮೀ.ಗಿಂತ ಹೆಚ್ಚಿನ ದೂರ ಇದ್ದಲ್ಲಿ ಒಂದು ಕಿ.ಮೀಗೆ 1.60 ರೂ.ನಂತೆ ಹೆಚ್ಚಿನ ಹಣ ವಿಧಿ ಸಬಹುದಾಗಿದೆ. ಇದ್ದಕ್ಕಿಂತ ಹೆಚ್ಚಿನ ಹಣ ಪಡೆದಿರುವುದು ಕಂಡು ಬಂದಲ್ಲಿ ಅಂತಹ ಎಲ್ಪಿಜಿ ವಿತರಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಉಪ ನಿರ್ದೇಶಕ ಸಿದ್ಧರಾಮ ಮಾರಿಹಾಳ, ಸಹಾಯಕ ನಿರ್ದೇಶಕ ಅಮರೇಶ ತಾಂಡೂರ, ಆಹಾರ ನಿರೀಕ್ಷಕ ಅನೀಲ ಚವ್ಹಾಣ ಸೇರಿದಂತೆ ಎಲ್ಪಿಜಿ ಡೀಲರ್ಗಳು ಇದ್ದರು.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.