ಕರ್ತವ್ಯ ಲೋಪ ಕಂಡು ಬಂದರೆ ಶಿಸ್ತು ಕ್ರಮ: ಡಿಸಿ
Team Udayavani, Jul 13, 2022, 5:37 PM IST
ವಿಜಯಪುರ: ಸಾರ್ವಜನಿಕರ ಅನುಕೂಲಕ್ಕಾಗಿ ಸರ್ಕಾರ ರೂಪಿಸುವ ಯೋಜನೆಗಳು ಹಾಗೂ ಸೌಲಭ್ಯಗಳು ಜನ ಸಾಮಾನ್ಯರಿಗೆ ಲಭಿಸುವಂತಾಗಬೇಕು. ಕರ್ತವ್ಯ ಪಾಲನೆಯಲ್ಲಿ ಲೋಪ ಕಂಡು ಬಂದಲ್ಲಿ ನಿರ್ದಾಕ್ಷಿಣ್ಯ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಡಾ| ವಿ.ಬಿ.ದಾನಮ್ಮನವರ ಅಧಿಕಾರಿಗಳಿಗೆ ಎಚ್ಚರಿಸಿದರು.
ಮಂಗಳವಾರ ವಿಜಯಪುರ ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಿದ ಅವರು, ಕಂದಾಯ ಇಲಾಖೆ ಅಧಿಕಾರಿ-ಸಿಬ್ಬಂದಿ ಸಮಯ ಪಾಲನೆಗೆ ಒತ್ತು ಕೊಡಬೇಕು. ಅಂದಿನ ಕೆಲಸ ಕಾರ್ಯಗಳನ್ನು ಅಂದೇ ಮುಗಿಸಬೇಕು. ಅನವಶ್ಯಕವಾಗಿ ಜನತೆ ತಹಶೀಲ್ದಾರ್ ಕಚೇರಿಗಳಿಗೆ ಸುತ್ತಲು ಅವಕಾಶ ಮಾಡಬಾರದು ಎಂದರು.
ಕಂದಾಯ ಇಲಾಖೆ ಪ್ರತಿ ಮಂಗಳವಾರ ಜಿಲ್ಲೆಯ ಯಾವುದಾರೂ ಒಂದು ತಾಲೂಕು ಕಚೇರಿಗೆ ಜಿಲ್ಲಾ ಧಿಕಾರಿ ಭೇಟಿ ಕಾರ್ಯಕ್ರಮ ರೂಪಿಸಿದೆ. ಇದರ ಉದ್ದೇಶ ಸಾಫಲ್ಯಕ್ಕೆ ಎಲ್ಲರೂ ಶ್ರಮಿಸಬೇಕು. ಇದಕ್ಕಾಗಿ ಸರ್ಕಾರ ಮಹತ್ವಾಕಾಂಕ್ಷೆಯಂತೆ ಜಿಲ್ಲಾಧಿಕಾರಿ ಹಳ್ಳಿಕಡೆ ಕಾರ್ಯಕ್ರಮ ಜನ ಸಾಮಾನ್ಯರಿಗೆ ಅನುಕೂಲವಾಗಿದೆ. ಕೆಳ ಹಂತದ ಅಧಿಕಾರಿ-ಸಿಬ್ಬಂದಿ ಕೂಡ ಉತ್ತಮ ಕೆಲಸ ಮಾಡಿ ಸರ್ಕಾರದ ಆಶಯ ಈಡೇರಿಸಬೇಕು. ಈ ಹಂತದಲ್ಲಿ ಕರ್ತವ್ಯ ಲೋಪ ಕಂಡು ಬಂದಲ್ಲಿ ಕ್ರಮ ಖಚಿತ ಎಂದರು.
ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಇದೀಗ ಕಂದಾಯ ಇಲಾಖೆಯ ಸಚಿವರು, ತಿಂಗಳಿನ ಎಲ್ಲ ಮಂಗಳವಾರ ಜಿಲ್ಲಾಧಿಕಾರಿಗಳು ತಮ್ಮ ಜಿಲ್ಲೆಯ ಯಾವುದಾರೂ ಒಂದು ತಾಲೂಕು ಕಚೇರಿಗೆ ಭೇಟಿ ನೀಡುವ ಕಾರ್ಯಕ್ರಮ ರೂಪಿಸಿದ್ದಾರೆ ಎಂದರು.
ತಾಲೂಕು ಕೇಂದ್ರಗಳಿಂದ ದೂರದ ಜಿಲ್ಲಾಧಿಕಾರಿ ಕಚೇರಿಗೆ ಹೋಗಿ ಅರ್ಜಿ ನೀಡಲು ವಯೋವೃದ್ಧರು, ವಿಕಲಚೇತನರು ಹಾಗೂ ಮಹಿಳೆಯರಿಗೆ ತೊಂದರೆಯಾಗಬಾರದು ಎಂದು ತಾಲೂಕು ಕಚೇರಿ ಭೇಟಿ ಕಾರ್ಯಕ್ರಮ ರೂಪಿಸಲಾಗಿದೆ. ತಾಲೂಕು ಕಚೇರಿ ಭೇಟಿ ಕಾರ್ಯಕ್ರಮದ ಮಹತ್ವದ ಬಗ್ಗೆ ಕಂದಾಯ ಇಲಾಖೆ ಅಧಿಕಾರಿ-ಸಿಬ್ಬಂದಿ ಅರಿಯಬೇಕು. ಪ್ರತಿ ತಾಲೂಕಿನಲ್ಲಿ ಅದರದ್ದೇ ಆದ ಸಮಸ್ಯೆಗಳಿರುತ್ತವೆ. ಆದ್ದರಿಂದ ವಿವಿಧ ಇಲಾಖೆಗಳ ಹೊಂದಾಣಿಕೆಯೊಂದಿಗೆ ಕಾರ್ಯಪ್ರವೃತ್ತರಾಗಲು ಸಲಹೆ ನೀಡಿದರು.
ತಾಲೂಕಿನ ಸಾರ್ವಜನಿಕರು ನಿರ್ದಿಷ್ಟ ಸಮಯದಲ್ಲಿ ಖುದ್ದು ತಮ್ಮನ್ನು ಭೇಟಿ ಮಾಡಿ ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಹಾಗೂ ಅವರ ಅಹವಾಲುಗಳನ್ನು ಸಲ್ಲಿಸಲು ಸಹಾಯವಾಗುವ ಸಂಬಂಧ ತಾವು ತಾಲೂಕು ತಹಶೀಲ್ದಾರ್ ಕಚೇರಿಗೆ ಬಂದಿರುವುದಾಗಿ ಇದೆ ವೇಳೆ ಜಿಲ್ಲಾಧಿಕಾರಿಗಳು ತಿಳಿಸಿದರು. ತಾಲೂಕು ಕಚೇರಿ ಭೇಟಿಯಿಂದಾಗಿ ತಾಲೂಕು ಕಚೇರಿಗಳಲ್ಲಿ ಮೂಲ ಸೌಕರ್ಯಗಳ ಕೊರತೆಯಿದ್ದಲ್ಲಿ ಅವುಗಳನ್ನು ಸರಿಪಡಿಸಲು ಸಹ ಜಿಲ್ಲಾಡಳಿತಕ್ಕೆ ಸಹಾಯವಾಗಲಿದೆ. ಆದ್ದರಿಂದ ಮೂಲ ಸೌಕರ್ಯ ಕೊರತೆ ಬಗ್ಗೆ ಅಗತ್ಯ ಮಾಹಿತಿ ಒದಗಿಸುವಂತೆ ಸೂಚಿಸಿದರು.
ಇದೇ ವೇಳೆ ತಾವು ತಾಲೂಕು ಕಚೇರಿಗೆ ಭೇಟಿ ನೀಡಿದ ಸ್ಮರಣೆಗಾಗಿ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಸಸಿ ನೆಟ್ಟರು. ವಿಜಯಪುರ ತಹಶೀಲ್ದಾರ್ ಸಿದ್ದರಾಮ ಬೋಸಗಿ ಸೇರಿದಂತೆ ಕಂದಾಯ ಇಲಾಖೆ ಇತರೆ ಅಧಿಕಾರಿ-ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Award: 2023-24, 2024-25ನೇ ಸಾಲಿನ “ಗಡಿನಾಡ ಚೇತನ” ಪ್ರಶಸ್ತಿ ಪ್ರಕಟ
Muddebihal: ನಿಂತಿದ್ದ ಕ್ಯಾಂಟರ್ ಗೆ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು
ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.