ಸಮಾಜ ಸೇವೆಯಿಂದ ಮನಸ್ಸಿಗೆ ನೆಮ್ಮದಿ


Team Udayavani, Jan 20, 2022, 6:10 PM IST

24social

ಸಿಂದಗಿ: ಎಲ್ಲಿ ಅಗತ್ಯತೆ ಇದೆಯೋ ಅಲ್ಲಿ ನಾವಿರಬೇಕು. ಸೇವೆ ಮಾಡುವುದರಿಂದ ನಮಗೆ ತೃಪ್ತಿ ದೊರೆಯುತ್ತದೆ. ದೀನ ದಲಿತರ ಮತ್ತು ಬಡವರ ಮುಖದಲ್ಲಿ ನಗು ತರುವುದೇ ನಮ್ಮ ಕ್ಲಬ್‌ ಉದ್ದೇಶ ಎಂದು ಅಂತಾರಾಷ್ಟ್ರೀಯ ಲಯನ್ಸ್‌ ಸೇವಾ ಸಂಸ್ಥೆ 317ಬಿ ಜಿಲ್ಲಾ ಗವರ್ನರ್‌ ಎಂ.ಜೆ.ಎಫ್‌. ಶ್ರೀಕಾಂತ ಮೋರೆ ಹೇಳಿದರು.

ಪಟ್ಟಣದ ಪಿಇಎಸ್‌ ಕಾಲೇಜಿನಲ್ಲಿ ಸಿಂದಗಿ ಲಯನ್ಸ್‌ ಕ್ಲಬ್‌ ಬುಧವಾರ ಹಮ್ಮಿಕೊಂಡಿದ್ದ ಲಯನ್ಸ್‌ ಕ್ಲಬ್‌ ಚಟುವಟಿಕೆಗಳ ಕುರಿತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಆಧುನಿಕ ಯುಗದಲ್ಲಿ ನಮ್ಮ ಬದುಕು ವ್ಯವಹಾರಿಕವಾಗಿದೆ. ಮಾನವೀಯ ವೌಲ್ಯಗಳು ಕುಸಿಯುತ್ತವೆ. ಕೇವಲ ಹಣ, ಸಂಪತ್ತು ಗಳಿಕೆಯಿಂದ ಮನುಷ್ಯ ನೆಮ್ಮದಿಯ ಬದುಕು ಹುಡುಕುತ್ತಿದ್ದಾನೆ. ಆದರೆ, ಅದು ಹಣದಿಂದ ಸಿಗಲಾರದು. ಹಾಗಾಗಿ ಲಾಯನ್ಸ ಕ್ಲಬ್‌ನಂತಹ ಸಾಮಾಜಿಕ ಸೇವಾ ಸಂಸ್ಥೆಗಳ ಸದಸ್ಯರಾಗಿ ಸಮಾಜಮುಖೀಗಳಾಗಿ ಬಾಳಿದರೆ ಮಾತ್ರ ನಮ್ಮ ಬದುಕು ಪರಿಪೂರ್ಣತೆಯನ್ನು ಪಡೆಯುತ್ತದೆ. ಈ ನಿಟ್ಟಿನಲ್ಲಿ ಸಿಂದಗಿ ಲಯನ್ಸ್‌ ಕ್ಲಬ್‌ ಹಮ್ಮಿಕೊಂಡಿರುವ ಹಲವು ಜನಪರ ಸೇವಾ ಕಾರ್ಯಕ್ರಮಗಳು ನಿಜಕ್ಕೂ ಶ್ಲಾಘನೀಯ ಎಂದರು.

ಲಯನ್ಸ್‌ ಕ್ಲಬ್‌ ಅಧ್ಯಕ್ಷ ಕೆ.ಎಚ್‌. ಸೋಮಾಪುರ ಮಾತನಾಡಿ, ಲಯನ್ಸ್‌ ಕ್ಲಬ್‌ ಸಮಾಜೋದ್ಧಾರ ಕಾರ್ಯವನ್ನು ಮಾಡುವ ಜೊತೆಗೆ ಮನುಷ್ಯ ಹಾಗೂ ಸಮಾಜದ ನಡುವೆ ಅವಿನಾಭಾವ ಸಂಬಂಧವನ್ನು ಬೆಸೆಯುವ ಸಂಸ್ಥೆಯಾಗಿದೆ. ಲಯನ್ಸ್‌ ಕ್ಲಬ್‌ ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮ, ಪ್ಲಾಸ್ಟಿಕ್‌ ನಿಷೇಧ, ಆರೋಗ್ಯ ಜಾಗೃತಿ ಕುರಿತು ಕಾರ್ಯಾಗಾರ ವಿವಿಧ ಕಾರ್ಯಕ್ರಮ ಅನುಷ್ಠಾನಗೊಳಿಸುತ್ತೇವೆ. ಸಮಾಜದಲ್ಲಿ ಹಿಂದುಳಿದಿರುವ ಜನರನ್ನು ಮುಖ್ಯವಾಹಿನಿಗೆ ತರುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.

ಅಂತಾರಾಷ್ಟ್ರೀಯ ಲಯನ್ಸ್‌ ಕ್ಲಬ್‌ 175 ರಾಷ್ಟ್ರಗಳಲ್ಲಿ 102 ವರ್ಷಗಳವರೆಗೆ ಅವಿಚ್ಛಿನ್ನವಾಗಿ ಹೆಜ್ಜೆ ಹಾಕಿದ್ದಲ್ಲದೇ ಸಮಾಜದ ಕಟ್ಟಕಡೆಯ ಸಮುದಾಯಕ್ಕೆ ಹಾಗೂ ನೇತ್ರ ಚಿಕಿತ್ಸೆ ಮುಂತಾದ ಸೇವಾಕಾರ್ಯಗಳಲ್ಲಿ ಮುಂಚೂಣಿಯಲ್ಲಿದೆ ಎಂದು ಹೇಳಿದರು.

ಪಿಇಎಸ್‌ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಬಿ.ಪಿ. ಕರ್ಜಗಿ ಮಾತನಾಡಿ, ನಮ್ಮ ವ್ಯಕ್ತಿತ್ವಕ್ಕೆ ರೂಪ ನೀಡಿದ ಹಾಗೂ ಏಳ್ಗೆಗೆ ಕಾರಣವಾದ ಸಮಾಜದ ಋಣ ತೀರಿಸಲು ಪ್ರತಿಯೊಬ್ಬರು ತಮ್ಮ ಜೀವನದ ಕೆಲ ಸಮಯವನ್ನು ಸಮಾಜ ಸೇವೆಗೆ ಮೀಸಲಿಡಬೇಕು. ಹಾಗಾದಾಗ ಮಾತ್ರ ಮನುಷ್ಯನ ಬದುಕು ಸಾರ್ಥಕಗೊಳ್ಳಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಲಯನ್ಸ್‌ ಕ್ಲಬ್‌ ಕಾರ್ಯದರ್ಶಿ ಐ.ಬಿ. ಬಿರಾದಾರ ಮಾತನಾಡಿ, ಸಮಾಜ ಸೇವೆಗಿಂತ ಮಿಗಿಲಾದ ಈಶ ಸೇವೆ ಬೇರೆ ಯಾವುದು ಇಲ್ಲ ಎಂದು ಹೇಳಿದರು.

ಲಯನ್ಸ್‌ ಕ್ಲಬ್‌ ಸದಸ್ಯರಾದ ಎಸ್‌.ಪಿ. ಚಾಗಶೆಟ್ಟಿ, ಎಸ್‌.ಎಸ್‌. ಪಾಟೀಲ, ಎಂ.ಆರ್‌. ಲೋಣಿ, ನೆಹರು ಪೋರವಾಲ, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪ್ರಾಚಾರ್ಯ ಜಿ.ಎಸ್‌. ಕಡಣಿ ಸ್ವಾಗತಿಸಿದರು. ಉಪನ್ಯಾಸಕ ಪರಮಾನಂದ ಬಿರಾದಾರ ನಿರೂಪಿಸಿದರು. ಲಯನ್ಸ್‌ ಕ್ಲಬ್‌ ಕಾರ್ಯದರ್ಶಿ ಐ.ಬಿ. ಬಿರಾದಾರ ವಂದಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.