![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Aug 23, 2022, 7:32 AM IST
ವಿಜಯಪುರ: ಬಸವನಾಡಿನಲ್ಲಿ ಕಳೆದ ಮೂರು ದಿನಗಳಿಂದ ನಿರಂತರ ಐದಾರು ಬಾರಿ ಭೂಮಿ ಕಂಪಿಸಿದೆ. ಸತತವಾಗಿ ಭೂಕಂಪದ ಅನುಭವದಿಂದ ಜಿಲ್ಲೆಯ ಜನರು ಭಯಭೀತರಾಗಿದ್ದು, ಅಧ್ಯಯನ ನಡೆಸುವಂತೆ ಸರ್ಕಾರಕ್ಕೆ ಮನವಿ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ.
ಭಾನುವಾರ ರಾತ್ರಿ 6-27ಕ್ಕೆ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ಹಾಗೂ 3-13ಕ್ಕೆ, ಸೋಮವಾರ ಮಧ್ಯಾಹ್ನ 4-26, ರಾತ್ರಿ 9-23 ಕ್ಕೆ ವಿಜಯಪುರ ನಗರದ ಬಹುತೇಕ ಭಾಗಗಳಲ್ಲಿ ಭೂಮಿ ಕಂಪಿಸಿದೆ. ಶನಿವಾರ ರಾತ್ರಿ 8-16 ನಗರದಲ್ಲಿ ಭೂಮಿ ಕಂಪಿಸಿತ್ತು.
ಹೀಗೆ ಕಳೆದ ಮೂರು ದಿನಗಳಿಂದ ಐದಾರು ಬಾರಿ ಭೂಮಿ ಕಂಪಿಸಿದ್ದು, ಮನೆಗಳು ಅಲುಗಾಡಿ, ವಸ್ತುಗಳು ಕೆಳಗೆ ಬೀಳುತ್ತಿವೆ. ಭೂಕಂಪನದ ಭೀತಿಯಿಂದಾಗಿ ಜಿಲ್ಲೆಯ ಜನರು ಮನೆಗಳ ಒಳಗೆ ನಿಲ್ಲಲೂ ಭಯಪಡುವಷ್ಟು ಆತಂಕ ಸೃಷ್ಟಿಯಾಗಿದೆ.
ಈ ಮಧ್ಯೆ ಅಪಾಯ ರಹಿತ ಭೂಕಂಪ ಸಂಭವಿಸಿದ ಉಕ್ಕಲಿ ಗ್ರಾಮಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿದೆ.
ಮತ್ತೊಂದೆಡೆ ಜಿಲ್ಲೆಯಲ್ಲಿ ಸತತವಾಗಿ ಲಘು ಭೂಕಂಪ ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಜನರು ಆತಂಕದಲ್ಲಿದ್ದಾರೆ. ಹೀಗಾಗಿ ಅಧ್ಯಯನ ನಡೆಸಲು ಭೂಗರ್ಭ ತಜ್ಞರ ತಂಡ ಕಳಿಸುವಂತೆ ಸರ್ಕಾರಕ್ಕೆ ಮನವಿ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ. ಮಂಗಳವಾರ ಸರ್ಕಾರಕ್ಕೆ ಈ ಬಗ್ಗೆ ಪತ್ರ ಬರೆಯುವುದಾಗಿ ಜಿಲ್ಲಾಧಿಕಾರಿ ಡಾ.ವಿ.ಬಿ. ದಾನಮ್ಮನವರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.