ಪಕ್ಷದ ಘನತೆಗೆ ಧಕ್ಕೆ ತರುತ್ತಿರುವ ಯತ್ನಾಳರನ್ನು ಉಚ್ಛಾಟನೆ ಮಾಡಿ: ಭೀಮಾಶಂಕರ ಆಗ್ರಹ
Team Udayavani, May 7, 2022, 12:41 PM IST
ವಿಜಯಪುರ; ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಂದ ಬಿಜೆಪಿ ಪಕ್ಷಕ್ಕೆ ಎಂದೂ ಒಳಿತಿಲ್ಲ. ಕೂಡಲೇ ಬಿಜೆಪಿ ಪಕ್ಷದಿಂದ ಯತ್ನಾಳ ಅವರನ್ನು ಉಚ್ಛಾಟಿಸಬೇಕು ಎಂದು ವೂಡಾ ಮಾಜಿ ಅಧ್ಯಕ್ಷ ಭೀಮಾಶಂಕರ ಹದನೂರ ಆಗ್ರಹಿಸಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯತ್ನಾಳ ಸಚಿವ ಸ್ಥಾನಕ್ಕಾಗಿ ಪಂಚಮಸಾಲಿ ಸಮಾಜಕ್ಕೆ ಮೀಸಲು ಬೇಡಿಕೆ ಮುಂದಿಟ್ಟು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಪಕ್ಷದ ಘನತೆಗೆ ಧಕ್ಕೆ ತರುವ ಕೆಲಸದಲ್ಲಿ ತೊಡಗಿರುವ ಅವರನ್ನು ಬಿಜೆಪಿ ಹೊರ ಹಾಕುವಂತೆ ಆಗ್ರಹಿಸಿದರು.
ನಿತ್ಯವೂ ವಿವಾದಾತ್ಮಕ ಹೇಳಿಕೆ ಮೂಲಕ ಮಾಧ್ಯಮಗಳಲ್ಲಿ ನಿರೂಪಕರು ಕಾಣದಿರಬಹುದು, ಆದರೆ ಯತ್ನಾಳ ಹೇಳಿಕೆಗಳು ಪಕ್ಷದ ಘನತೆಗೆ ಧಕ್ಕೆ ತರುತ್ತಿದ್ದಾರೆ. ಹೀಗಾಗಿ ಪಕ್ಷಕ್ಕೆ ಮುಜುಗರ ಉಂಟು ಮಾಡುತ್ತುದ್ದು ಕೂಡಲೇ ಅವರನ್ನು ಪಕ್ಷದಿಂದ ಉಚ್ಛಾಟಿಸುವಂತೆ ಭೀಮಾಶಂಕರ ಆಗ್ರಹಿಸಿದರು.
ಪಂಚಮಸಾಲಿ ಸಮಾಜದ ಹೆಸರಿನಲ್ಲಿ ಸಚಿವರಾಗಲು ಸಮಾಜವನ್ನು ದುರ್ಬಳಕೆ ಮಾಡಿಕೊಂಡು, ಬ್ಲಾಕ್ ಮೇಲ್ ಮಾಡುವ ಕೃತ್ಯದಲ್ಲಿ ತೊಡಗಿದ್ದಾರೆ ಎಂದು ಟೀಕಿಸಿದರು.
ಯತ್ನಾಳ ಅವರನ್ನು ಪಕ್ಷ ಈ ಹಿಂದೆ ಉಚ್ಚಾಟನೆ ಮಾಡಿದ್ದಾಗ ಅವರನ್ನು ಮರಳಿ ಸೇರ್ಪಡೆ ಮಾಡಿಕೊಳ್ಳಲು ವಿರೋಧಿಸಿದ್ದೆವು. ಆದರೂ ಪಕ್ಷದ ನಾಯಕರು ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಪಕ್ಷ ಇದೀಗ ಮುಜುಗರ ಅನುಭವಿಸುವ ದುಸ್ಥಿತಿ ನಿರ್ಮಾಣ ಆಗಿದೆ ಎಂದು ಹೇಳಿದರು.
ಇದನ್ನೂ ಓದಿ:ಸಿಎಂಗೆ ರಾಜಕೀಯ ಬದ್ಧತೆಯಿದ್ದರೆ ಪಕ್ಷದ ಗೌರವ ಉಳಿಸಿಕೊಳ್ಳಲಿ: ಡಿಕೆ ಶಿವಕುಮಾರ್
ವಾಜಪೇಯಿ ಸಂಪುಟದಲ್ಲಿ ಸಚಿವನಾಗಿದ್ದೆ ಎಂದು ರಾಜಕೀಯ ಮುತ್ಸದ್ದಿ ನಾಯಕನ ಹೆಸರು ದುರ್ಬಳಕೆ ಮಾಡಿಕೊಳ್ಳುತ್ತಿರುವ ಯತ್ನಾಳ ಅವರಿಗೆ ವಾಜಪೇಯಿ ಅವರ ಹೆಸರು ಹೇಳುವ ನೈತಿಕತೆ ಇಲ್ಲ. ಈ ಹಿಂದೆ ಕಾಂಗ್ರೆಸ್ ಸೇರಲು ಹೊರಟಿದ್ದ ಯತ್ನಾಳ, ಬಿಜೆಪಿ ಅಧಿಕೃತ ಅಭ್ಯರ್ಥಿ ಜಿ.ಎಸ್. ನ್ಯಾಮಗೌಡ ವಿರುದ್ಧ ಸ್ಪರ್ಧೆ ಮಾಡಿ ಸೋಲಿಸಿದರು. ನಿಮಗೆ ಟಿಕೆಟ್ ನೀಡಿದರೆ ಮಾತ್ರ ಪಕ್ಷ, ಇಲ್ಲದಿದ್ದರೆ ನಾಯಕರ ನಿಂದನೆ ಎಂಬ ವರ್ತನೆ ಅನುಸರಿಸುತ್ತಿದ್ದಾರೆ ಎಂದು ಟೀಕಿಸಿದರು.
ಇದೇ ಯತ್ನಾಳ ಈ ಹಿಂದೆ ಬಸವಜಯ ಮೃತ್ಯುಂಜಯ ಶ್ರೀಗಳ ವಿರುದ್ಧವೂ ಮಾತನಾಡಿದ್ದರು. ಈಗ ಪಂಚಮಸಾಲಿ ಸಮಾಜದ ಪ್ರಶ್ನಾತೀತ ನಾಯಕ ಎಂಬಂತೆ ಬಿಂಬಿಸಿಕೊಳ್ಳಲು ಮುಂದಾಗಿದ್ದಾರೆ ಎಂದರು.
ಕಳೆದ ಚುನಾವಣೆ ಸಂದರ್ಭದಲ್ಲಿ ಟಿಕೆಟ್ ಗಾಗಿ ಯಡಿಯೂರಪ್ಪ ಪರ ಮಾತನಾಡಿದ್ದ ಯತ್ನಾಳ, ನಂತರ ಅವರನ್ನೇ ನಿಂದಿಸಲು ಆರಂಭಿಸಿದ್ದರು. ಸಮಾಜದ ಹೆಸರು ಹೇಳಿಕೊಂಡು ಸಚಿವರಾಗಲು ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ
ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ
ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ
Vijayapura; ಮಹಿಳೆಯ ಕೊ*ಲೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ
Vijayapura: ಮಹಿಳೆಯ ಕೊಲೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ, 86 ಸಾವಿರ ರೂ. ದಂಡ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು
Women’s T20 World Cup: ಆಸೀಸ್ಗೆ ಸುಲಭದ ತುತ್ತಾದ ಲಂಕಾ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ
Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.