ಎಸ್ಟಿ ಮೀಸಲಾತಿಗೆ ಶೀಘ್ರ ವಿಶ್ವ ಕರ್ಮರ ಹೋರಾಟ


Team Udayavani, May 29, 2022, 3:00 PM IST

16ST

ನಾಲತವಾಡ: ವಿಶ್ವಕರ್ಮ ಸಮಾಜದ ಮಕ್ಕಳು ಕೂಡ ಶಿಕ್ಷಣವಂತರಾದಾಗ ಮಾತ್ರ ಸಮಾಜ ಏಳ್ಗೆಯಾಗುತ್ತದೆ ಎಂದು ವಿಧಾನ ಪರಿಷತ್‌ ಸದಸ್ಯ ಕೆ.ಪಿ. ನಂಜುಂಡಿ ಹೇಳಿದರು.

ಸ್ಥಳೀಯ ಕಾಳಮ್ಮ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ವಿಶ್ವಕರ್ಮ ಸಮಾಜದ ಸಭೆಯಲ್ಲಿ ಮಾತನಾಡಿದ ಅವರು, ಇವತ್ತು ಸಮ್ಮ ಸಮಾಜವನ್ನು ಎಲ್ಲ ಕ್ಷೇತ್ರದಲ್ಲಿ ತುಳಿಯುವ ಕೆಲಸ ನಡೆಯುತ್ತಿದೆ. ನಮ್ಮ ಸಮಾಜದ ಏಳ್ಗೆಯಾಗಬೇಕಾದರೆ ನಾವು ಆರ್ಥಿಕವಾಗಿ, ಶೈಕ್ಷಣಿಕವಾಗಿ ಮತ್ತು ರಾಜಖೀಯವಾಗಿ ಮುಂದೆ ಬರಬೇಕು ಎಂದರು.

ನಮ್ಮ ಮಕ್ಕಳನ್ನು ಉನ್ನತ ವಿದ್ಯಾಭ್ಯಾಸ ನೀಡಿ ದೊಡ್ಡ ದೊಡ್ಡ ಅಧಿಕಾಯನ್ನಾಗಿ ಮಾಡುವ ಗುರಿ ನಾವೆಲ್ಲರೂ ಹೊಂದಬೇಕಾಗಿದೆ. ಜಗತ್ತು ಅತಿ ವೇಗವಾಗಿ ಸಾಗುತ್ತಿದೆ. ನಮ್ಮ ಸಮಾಜದ ಬಾಂಧವರು ಕೂಡ ಜಗತ್ತಿನ ಜೊತೆ ಜೊತೆಯಲ್ಲಿ ಸಾಗಬೇಕು. ನಮ್ಮ ಮಕ್ಕಳನ್ನು ನಮ್ಮಂತಯೇ ಕಾರ್ಮಿಕರನ್ನಾಗಿ ಮಾಡದೇ ಅವರನ್ನು ಸಮಾಜದಲ್ಲಿ ದೊಡ್ಡ ವ್ಯಕ್ತಿಯನ್ನಾಗಿ ಮಾಡಬೇಕು ಎಂದರು.

ವಿಶ್ವಕರ್ಮ ಸಮಾಜದ ಈಗಾಗಲೆ 2ಎ ಮೀಸಲಾತಿ ಹೊಂದಿದೆ. ಆದರೆ ಬಹುಸಂಖ್ಯಾತರ ಜೊತೆಯಲ್ಲಿ ನಮಗೆ ಈ ಮೀಸಲಾತಿಯ ಲಾಭ ದೊರಕುತ್ತಿಲ್ಲ. ಆದ್ದರಿಂದ ಮುಂದಿನ ದಿನಗಳಲ್ಲಿ ನಮ್ಮ ಸಮಾಜಕ್ಕೆ ಎಸ್ಟಿ ಮೀಸಲಾತಿ ನೀಡಬೇಕೆಂದು ನಾವೆಲ್ಲರೂ ಸಂಘಟಿತರಾಗಿ ಹೋರಾಡಬೇಕಾಗಿದೆ. ಈ ನಿಟ್ಟಿನಲ್ಲಿ ಸಮಾಜದ ಎಲ್ಲ ಬಾಂಧವರು ಕೂಡ ಒಗ್ಗಟ್ಟಾಗಿ ನಮ್ಮ ಶಕ್ತಿ ಪ್ರದರ್ಶನ ಮಾಡಬೇಕಾಗಿದೆ. ನಾವು ರಾಜಕೀಯವಾಗಿ ಹಿಂದೆ ಉಳಿದಿರುವ ಕಾರಣ ನಮಗೆ ಯಾವುದೇ ಸೌಲಭ್ಯ ಸಿಗುತ್ತಿಲ್ಲ. ಒಂದು ವೇಳೆ ನಾವು ರಾಜಕೀಯವಾಗಿ ಬೆಳೆದರು ನಮ್ಮ ಹಕ್ಕನ್ನು ನಾವು ಪಡೆದುಕೊಳ್ಳಬಹುದು ಎಂದರು.

ಪ್ರಾಸ್ತಾವಿಕವಾಗಿ ನಾರಾಯಣ ಮಾಯಾಚಾರಿ ಮಾತನಾಡಿ, ರಾಜ್ಯದಲ್ಲಿ ವಿಶ್ವಕರ್ಮ ಸಮಾಜವನ್ನು ಪರಿಚಯಿಸಿದ್ದು ಯಾರಾದರು ಇದ್ದರೆ ಅವರು ಕೆ.ಪಿ. ನಂಜುಂಡಿ. ಅನೇಕ ವರ್ಷಗಳಿಂದ ಸಮಾಜದ ಏಳ್ಗೆಗಾಗಿ ಕೆ.ಪಿ. ನಂಜುಂಡಿಯವರು ಹೋರಾಟ ಮಾಡಿದ್ದಾರೆ. ಸಮಾಜದ ಕಟ್ಟ ಕಡೆ ವ್ಯಕ್ತಿಗೂ ಕೂಡ ಸರಕಾರದ ಸೌಲಭ್ಯ ಮುಟ್ಟಿಸುವ ಪ್ರಯತ್ನವನ್ನು ನಂಜುಂಡಿಯವರು ಮಾಡುತಿದ್ದಾರೆ ಎಂದರು.

ಸಮಾಜದಲ್ಲಿ ಸ್ವಲ್ಪ ಅಸಮಾಧಾನ ವಾತಾವರಣದಿಂದ ಸಂಘಟನೆಯಿಂದ ದೂರು ಸರಿದಿದ್ದರು. ಎಲ್ಲರೂ ಅವರಿಗೆ ಸಮಾಜದ ಏಳ್ಗೆಗಾಗಿ ತಾವು ಸಂಘಟನೆಯನ್ನು ಬಲಪಡಿಸಬೇಕು ಎಂದು ಮನವಿ ಮಾಡಿದಾಗ ಮತ್ತೇ ಅವರು ವಿಶ್ವಕರ್ಮ ಸಮಾಜ ಒಗ್ಗೂಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಎಸ್ಟಿ ಮೀಸಲಾತಿಗಾಗಿ ಸರಕಾರಕ್ಕೆ ಒತ್ತಾಯಿಸಬೇಕು ಎಂದು ಕೆ.ಪಿ.ನಂಜುಂಡಿ ಅವರಿಗೆ ಮನವಿ ಮಾಡಿದರು.

ಈ ವೇಳೆ ಅಖೀಲ ಕರ್ನಾಟಕ ವಿಶ್ವಕರ್ಮ ಯುವ ಘಟಕ ಮಹಾಸಭಾ ರಾಜ್ಯಾಧ್ಯಕ್ಷ ಶ್ರೀನಿವಾಸ ಮಳವಳ್ಳಿ, ವಿಶ್ವಕರ್ಮ ಮಹಾಸಭಾ ವಿಜಯಪುರ ಜಿಲ್ಲಾಧ್ಯಕ್ಷ ಬಾಳು ಗಿರಗಾಂವಕರ, ವಿಶ್ವಕರ್ಮ ಮಹಾಸಭಾ ಯಾದಗಿರಿ ಜಿಲ್ಲಾಧ್ಯಕ್ಷ ಆನಂದ ಲಕ್ಷ್ಮೀಪುರ, ವಿಶ್ವಕರ್ಮ ಮಹಾಸಭಾ ತಾಲೂಕಾಧ್ಯಕ್ಷ ಮಲ್ಲಣ್ಣ ಪತ್ತಾರ (ತಾರನಾಳ), ಮುದ್ದೇಬಿಹಾಳ ಪುರಸಭೆ ಅಧ್ಯಕ್ಷೆ ಸಹನಾ ಬಡಿಗೇರ ಹಾಗೂ ನಾಲತವಾಡದ ವಿಶ್ವಕರ್ಮ ಸಮಾಜದ ಮುಖಂಡರು ಇದ್ದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.