ಗ್ರಾಮೀಣರೇ ಆರೋಗ್ಯದ ಕಡೆ ಹೆಚ್ಚು ಗಮನಹರಿಸಿ; ವೈದ್ಯ ನಟರಾಜ್‌

ಭಯ ಪಡದೆ ನಿಮ್ಮ ದಿನನಿತ್ಯದ ಆಹಾರ ಸೇವೆನೆ ಬದಲಿಸಿಕೊಳ್ಳಬೇಕು.

Team Udayavani, Apr 21, 2022, 5:55 PM IST

ಗ್ರಾಮೀಣರೇ ಆರೋಗ್ಯದ ಕಡೆ ಹೆಚ್ಚು ಗಮನಹರಿಸಿ; ವೈದ್ಯ ನಟರಾಜ್‌

ವಿಜಯಪುರ: ಗ್ರಾಮೀಣ ಭಾಗದ ಜನರು ಕೆಲಸದ ಒತ್ತಡದ ನಡುವೆಯೂ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕು. ಆರೋಗ್ಯ ಶಿಬಿರಗಳಲ್ಲಿ ಭಾಗವಹಿಸಿ, ತಪಾಸಣೆ ಮಾಡಿಕೊಳ್ಳುವ ಮೂಲಕ ಆರೋಗ್ಯ ಸಮಸ್ಯೆ ತಿಳಿದು ಚಿಕಿತ್ಸೆ ಪಡೆದು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಸುವೀಕ್ಷಾ ಆಸ್ಪತ್ರೆ ವೈದ್ಯ ನಟರಾಜ್‌ ತಿಳಿಸಿದರು.

ಪಟ್ಟಣ ಸಮೀಪದ ಗೊಡ್ಲುಮುದ್ದೇನಹಳ್ಳಿ ಗ್ರಾಪಂ ವ್ಯಾಪ್ತಿಯ ಎ.ರಂಗನಾಥಪುರ ಗ್ರಾಮದಲ್ಲಿ ಸುವೀಕ್ಷ ಆಸ್ಪತ್ರೆ ಹಾಗೂ ಶ್ರೀ ಚನ್ನರಾಯಸ್ವಾಮಿ ದೇವಾಲಯದ ಟ್ರಸ್ಟ್ ವತಿಯಿಂದ ನಡೆದ ಉಚಿತ ಆರೋಗ್ಯ ತಾಪಸಣೆ ಶಿಬಿರದಲ್ಲಿ ಮಾತನಾಡಿ, ಇಂದಿನ ಆಹಾರ ಪದ್ಧತಿ, ಮಾನಸಿಕ ಒತ್ತಡ ಜೀವನ ಶೈಲಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದ್ದು, ಇದರಿಂದ ಮಧುಮೇಹ ರಕ್ತದೊತ್ತಡದಂತಹ ಕಾಯಿಲೆಗೆ ಜನರು ಬಹುಬೇಗು ತುತ್ತಾಗುತ್ತಿದ್ದಾರೆ.

ಆರೋಗ್ಯ ತಪಾಸಣೆಗೆ ಒಳಗಾದರೆ ವೈದ್ಯರು ಕಾಯಿಲೆ ಇದೆ ಎಂದು ಹೇಳಿ ಬಿಡುತ್ತಾರೋ ಎಂಬ ಭಯದಿಂದ ಬಹಳಷ್ಟು ಜನರು ತಪಾಸಣೆಗೆ ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ, ರೋಗ ಉಲ್ಬಣಿಸಿದ ನಂತರ ಮರುಗುವ ಪರಿಸ್ಥಿತಿ ಉಂಟಾಗುತ್ತಿದೆ. ಇದು ಮನುಷ್ಯನ ಆರೋಗ್ಯದ ಬೆಳವಣಿಗೆ ಮೇಲೆ ದುಷ್ಟರಿಣಾಮ ಬೀರುತ್ತದೆ ಎಂದರು.

ತರಕಾರಿ, ಹಣ್ಣು ಸೇವಿಸಿ: ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞೆ ಡಾ. ಕನಕ ಸ್ವರೂಪ ನಟರಾಜ್‌ ಮಾತ ನಾಡಿ, ಪ್ರತಿಯೊಬ್ಬರೂ ಭಯ ತೊರೆದು ವೈದ್ಯ ಕೀಯ ತಪಾಸಣೆ ಮಾಡಿಸಿಕೊಂಡು ರೋಗ ಇದ್ದಲ್ಲಿ ಸೂಕ್ತ ಚಿಕಿತ್ಸೆ ಪಡೆಯುವ ಮೂಲಕ ಆರೋಗ್ಯ ಪೂರ್ಣ ಜೀವನ ನಡೆಸಬೇಕು. ಇಂದಿನ ಜನರು ಅನಾರೋಗ್ಯಕರವೆಂದು ತಿಳಿದಿರುವ ವಸ್ತುಗಳನ್ನು ಪದೇ ಪದೆ ಬಳಸುವುದರಿಂದ ಆರೋಗ್ಯದ ಸಮಸ್ಯೆ ಎದುರಾಗಬಹುದು. ಇದನ್ನು ಹೊರತುಪಡಿಸಿ ಪ್ರತಿಯೊಬ್ಬರೂ ಸುರಕ್ಷಿತವಾಗಿರುವಂತಹ ತರಕಾರಿ, ಹಣ್ಣು, ಧಾನ್ಯ ಹೆಚ್ಚು ಬಳಸಬೇಕು ಎಂದರು.

ಆಹಾರ ಪದ್ಧತಿ ಬದಲಿಸಿ: ಗ್ರಾಮದ ಮುಖಂಡ ಎಂ.ವೆಂಕಟೇಶ್‌ ಮಾತನಾಡಿ, ಮಧುಮೇಹ ಇಂದು ಪ್ರತಿಯೊಬ್ಬರಲ್ಲಿ ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ಮಧುಮೇಹ ಬಂದಿದೆ ಎಂದು ಭಯ ಪಡದೆ ನಿಮ್ಮ ದಿನನಿತ್ಯದ ಆಹಾರ ಸೇವೆನೆ ಬದಲಿಸಿಕೊಳ್ಳಬೇಕು. ಪ್ರತಿದಿನವು ಯಾವೆಲ್ಲ ಆಹಾರ ಸೇವಿಸಬೇಕು. ಯಾವ ಹಣ್ಣು, ತರಕಾರಿ ತಿನ್ನಬೇಕು ಎನ್ನುವುದು ತಿಳಿಯಬೇಕುಂದರು.

ಗರ್ಭಿಣಿಯರಿಗೆ ಉಚಿತ ತಪಾಸಣೆ: ಮನೆಯಲೇ ತಪಾಸಣೆ ಮಾಡಿಕೊಳ್ಳುವುದನ್ನು ಬಿಟ್ಟು ಪ್ರತಿ ಎರಡು ಮೂರು ತಿಂಗಳಿಗೊಮ್ಮೆ ತಜ್ಞರಿಂದ ತಪಾಸಣೆ ಮಾಡಿಸಿ ಕೊಳ್ಳುವುದು ಉತ್ತಮ. ಶಿಬಿರದಲ್ಲಿ ಭಾಗವಾಹಿಸಿದ ಎಲ್ಲ ಗರ್ಭಿಣಿಯರಿಗೆ ಪ್ರತಿ ತಿಂಗಳು ಸುವೀಕ್ಷ ಆಸ್ಪತ್ರೆ ವೈದ್ಯರಿಂದ ಉಚಿತ ತಪಾಸಣೆ ಮಾಡಲಾಗುವುದು ಎಂದು ತಿಳಿಸಿದರು. ಡಾ.ಕವಿತಾ, ಗ್ರಾಪಂ ಅಧ್ಯಕ್ಷೆ ಆನಂದಮ್ಮ, ಸದಸ್ಯ ಕೃಷ್ಣಮೂರ್ತಿ, ಜಯಮ್ಮ ಚನ್ನಪ್ಪ, ಗ್ರಾಪಂ ಮಾಜಿ ಉಪಾಧ್ಯಕ್ಷ ರಾಮಚಂದ್ರ, ಮಾಜಿ ಸದಸ್ಯ ಕೆ.ವಿ. ಕೃಷ್ಣಪ್ಪ, ಚಿಕ್ಕಚನ್ನರಾಯಪ್ಪ, ಕುಮಾರಗೌಡ, ಎಂ.ರಮೇಶ್‌, ಎಂ.ಲೋಕೇಶ್‌, ಎಂ. ರವಿಕುಮಾರ್‌, ವಕೀಲ ರವಿಪ್ರಕಾಶ್‌, ಮುರಳಿ, ಕೆ. ನರಸಿಂಹಮೂರ್ತಿ, ವಿ. ಕುಮಾರ್‌, ದೇವಾರಾಜು, ಮಂಜುನಾಥ್‌ ಹಾಗೂ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.