ಮಕ್ಕಳ ಅನುಪಾತಕ್ಕನುಗುಣವಾಗಿ ಸಿಗದ ಆಹಾರ


Team Udayavani, Dec 24, 2021, 6:11 PM IST

29food

ಇಂಡಿ: ತಾಲೂಕಿನಲ್ಲಿ 300ಕ್ಕೂ ಹೆಚ್ಚು ಅಂಗನವಾಡಿಗಳಿದ್ದು, ಮಕ್ಕಳ ಅನುಪಾತಕ್ಕನುಣಗವಾಗಿ ಸಾಮಗ್ರಿಗಳನ್ನು ನೀಡಲಾಗುತ್ತಿದೆ. ಆದರೆ ಅಂಗನವಾಡಿಯಲ್ಲಿ ದಾಖಲಾದ ಮಕ್ಕಳ ಸಂಖ್ಯೆಗೂ ನೈಜವಾಗಿರುವ ಮಕ್ಕಳ ಸಂಖ್ಯೆಗೂ ಅರ್ಧ ದಷ್ಟು ಅಂತರವಿದ್ದು, ಮಕ್ಕಳಿಗೆ ಮುಟ್ಟಬೇಕಾದ ಸಾಮಗ್ರಿಗಳು ಪರರ ಪಾಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಅಂಗನವಾಡಿ ಮಕ್ಕಳಿಗೆ ಹಾಗೂ ಮಾತೃಪೂರ್ಣ ಯೋಜನೆಯ ಫಲಾನುಭವಿಗಳಿಗೆ ಸ್ಥಳೀಯವಾಗಿ ತರಕಾರಿ, ಮೊಟ್ಟೆ, ಶೇಂಗಾ ಬೀಜದ ಚಿಕ್ಕಿ ಅಲವಾರು ಖರೀದಿ ಅಂಗನವಾಡಿ ದಿನಾಚರಣೆ ವೆಚ್ಚಕ್ಕಾಗಿ ಹಾಗೂ ಬಾಲಸ್ನೇಹಿ ಯೋಜನೆಯಡಿ ಬಿಡುಗಡೆ ಮಾಡಲಾಗುವ ಅಥವಾ ಯೋಜನೆಯ ಉದ್ದೇಶ ಈಡೇರಿಕೆಗಾಗಿ ಯಾವುದೇ ಅನುದಾನವನ್ನು ಬಾಲವಿಕಾಸ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯ ಕಾರ್ಯದರ್ಶಿ ಹೆಸರಿನಲ್ಲಿ ಜಂಟಿ ಖಾತೆ ತೆರೆದು ನಿರ್ವಹಣೆ ಮಾಡುವ ಅಧಿಕಾರ ಸಮಿತಿಗೆ ನೀಡಲಾಗಿದೆ.

ತಾಲೂಕಿನಲ್ಲಿ ಒಟ್ಟು 301 ಅಂಗನವಾಡಿಗಳು 22 ಮಿನಿ ಅಂಗನವಾಡಿಗಳು ಸೇರಿ 323 ಅಂಗನವಾಡಿಗಳಿವೆ. ಆ ಅಂಗನವಾಡಿಗಳಲ್ಲಿ 6 ತಿಂಗಳಿಂದ 1 ವರ್ಷದ ಒಳಗಿನ ಮಕ್ಕಳು 5232, 1 ವರ್ಷದಿಂದ 2 ವರ್ಷದ ಒಳಗಿನ ಮಕ್ಕಳು 7468, 2 ವರ್ಷದಿಂದ 3 ವರ್ಷದವರೆಗೆ ಮಕ್ಕಳು 8715, 3 ವರ್ಷದಿಂದ 5 ವರ್ಷದವರೆಗಿನ ಮಕ್ಕಳು 12777, 5 ವರ್ಷದಿಂದ 6 ವರ್ಷದವರೆಗೆ ಮಕ್ಕಳು 4291, ಒಟ್ಟು ತಾಲೂಕಿನಾದ್ಯಂತ 6 ತಿಂಗಳಿನಿಂದ 6 ವರ್ಷದ ಮಕ್ಕಳು ಸೇರಿ 38483 ಮಕ್ಕಳಿದ್ದಾರೆ. ಇದರಲ್ಲಿ ಅರ್ಧದಷ್ಟು ಮಕ್ಕಳು ಸಹ ಅಂಗನವಾಡಿಗೆ ಹೋಗುವುದಿಲ್ಲ ಅದಾಗ್ಯೂ, ಬಹುತೇಕ ಮಕ್ಕಳು ವಿವಿಧ ಯೋಜನೆಗಳ ಫಲಾನುಭವಿಗಳು ಆಗಿದ್ದಾರೆ. ಆ ಮಕ್ಕಳಿಗೆ ಯೋಜನೆಗಳು ಸರಿಯಾಗಿ ತಲುಪುತ್ತಿಲ್ಲ. ಮಧ್ಯವರ್ತಿಗಳಿಂದ ಅಕ್ರಮ ನಡೆಯುತ್ತಿದೆ. ಆಹಾರ ಧಾನ್ಯ ವಿತರಣೆ ಸರಿಯಾಗಿ ಆಗುತ್ತಿಲ್ಲ ಹಾಗೂ ಗುಣಮಟ್ಟದ್ದಲ್ಲ ಎಂಬ ಆರೋಪಗಳು ನಿರಂತರವಾಗಿ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ.

ಆಯ್ಕೆ ಪ್ರಕ್ರಿಯೆ ಹೇಗೆ?

ಬಾಲವಿಕಾಸ ಸಮಿತಿ ಸದಸ್ಯರನ್ನು ಆಯ್ಕೆ ಮಾಡುವ ಪ್ರಕ್ರಿಯೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿಗಳಿಗೆ ಸಂಬಂಧಪಟ್ಟ ಮೇಲ್ವಿಚಾರಕಿಯು ಗ್ರಾಪಂ ಗಮನಕ್ಕೆ ತರುವ ಮೂಲಕ ಹಾಗೂ ಸರಕಾರ ಗೊತ್ತುಪಡಿಸಿದ ಮಾರ್ಗಸೂಚಿಯಂತೆ ತೀರ್ಮಾನ ತೆಗೆದುಕೊಂಡು ಸಮಾಜ ಸೇವಾ ಮನೋಭಾವ ಹಾಗೂ ಮಕ್ಕಳ ವಿಕಾಸನದ ಬಗ್ಗೆ ಕಳಕಳಿ ಇರುವವರನ್ನು ನಾಮನಿರ್ದೇಶಿತ ಸದಸ್ಯರನ್ನಾಗಿ ಆಯ್ಕೆ ಮಾಡಲಿದ್ದಾರೆ. ಬಾಲವಿಕಾಸ ಸಮಿತಿಯು ರಚನೆಯಾದ ದಿನಾಂಕದಿಂದ 3 ವರ್ಷದವರೆಗೆ ಕಾರ್ಯನಿರ್ವಹಿಸಲಿದೆ. ಮೂರು ವರ್ಷದ ನಂತರ ಸಮಿತಿಯನ್ನು ಪುನಃ ರಚನೆ ಮಾಡಬೇಕು ಎಂಬುದು ನಿಯಮ.

-ಯಲಗೊಂಡ ಬೇವನೂರ

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.