KAS ಪರೀಕ್ಷಾರ್ಥಿಗಳ ಹೋರಾಟಕ್ಕೆ ಸಂಪೂರ್ಣ ಬೆಂಬಲ: ಶಾಸಕ ಯತ್ನಾಳ
Team Udayavani, Aug 24, 2024, 2:04 PM IST
ವಿಜಯಪುರ: ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಕೆ.ಎ.ಎಸ್ ಪರೀಕ್ಷಾರ್ಥಿಗಳ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ.
ಈ ಕುರಿತಂತೆ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಬಡ ಕುಟುಂಬಗಳಿಂದ ಬಂದು, ಜೀವನದಲ್ಲಿ ಸಾಧಿಸಬೇಕೆಂಬ ಛಲ, ಹುಮ್ಮಸ್ಸಿನಿಂದ ಅಹರ್ನಿಶಿ ಉದ್ಯೋಗದಲ್ಲಿದ್ದುಕೊಂಡು ಓದಿಕೊಳ್ಳುತ್ತಿರುವ ಪರೀಕ್ಷಾರ್ಥಿಗಳ ಪರ ಇರಬೇಕಾದ ಸರ್ಕಾರ, ತರಾತುರಿಯಲ್ಲಿ ಪರೀಕ್ಷೆ ನಡೆಸುತ್ತಿರುವುದು ಖಂಡನೀಯ ಎಂದರು.
ಗಾಯಕ್ಕೆ ಬರೆ ಇಟ್ಟಂತೆ, ಅಭ್ಯರ್ಥಿಗಳು ಬರಬೇಕಾದ ಊರುಗಳಿಂದ ದೂರದೂರುಗಳಿಗೆ ಪರೀಕ್ಷೆಯ ಸೆಂಟರ್ ನಿಗದಿ ಮಾಡಿರುವ ತರ್ಕ ಏನೆಂದು ಸರ್ಕಾರವೇ ಬಿಡಿಸಿ ಹೇಳಬೇಕು. ವಾರಾಂತ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಇರುವ ಒಂದು ಪ್ರತೀತಿಯನ್ನು ಬದಲಿಸಿ, ವಾರದ ದಿನ ಪರೀಕ್ಷೆಯನ್ನಿಟ್ಟಿರುವುದು ಖಾಸಗಿ, ಐ.ಟಿ, ವಲಯಗಳಲ್ಲಿ ಕೆಲಸ ಮಾಡುತ್ತಿರುವ ಪರೀಕ್ಷಾರ್ಥಿಗಳಿಗೆ ಸಾಕಷ್ಟು ಸಮಸ್ಯೆಯಾಗಿದೆ ಎಂದರು.
ಇನ್ನು, ದೂರದೂರುಗಳಿಗೆ ಹೋಗಬೇಕಾದವರು ಒಂದು ದಿನ ಮುಂಗಡವಾಗಿ ಹೋಗಬೇಕು. ಒಂದು ಪರೀಕ್ಷೆ ಬರೆಯುವುದಕ್ಕೆ ಎರಡು ದಿನ ರಜೆ ಪಡೆಯುವಂತ ಅವೈಜ್ಞಾನಿಕ ವೇಳಾಪಟ್ಟಿಯನ್ನು ಮಾಡಿರುವುದು ಪ್ರಶ್ನಾರ್ಹ ಹಾಗೂ ಅತಾರ್ಕಿಕವಾಗಿದೆ. ಸರ್ಕಾರ ವಿದ್ಯಾರ್ಥಿಗಳ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ, ಭ್ರಷ್ಟಾಚಾರದ ಕೂಪವಾಗಿರುವ ಲೋಕ ಸೇವಾ ಆಯೋಗಕ್ಕೆ ಯೋಗ್ಯ, ಸಮರ್ಥ, ದಕ್ಷ ಅಧಿಕಾರಿ, ಸಿಬ್ಬಂದಿಗಳನ್ನು ನೇಮಿಸಿ ಪರೀಕ್ಷಾರ್ಥಿಗಳ ಹಿತವನ್ನು ಕಾಪಾಡಲಿ ಎಂದು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಆಯುಷ್ ಆರೋಗ್ಯ ಮಂದಿರದಲ್ಲಿ ಕುಡುಕ ವೈದ್ಯನ ಅವಾಂತರ
Vijayapura; ಯಾರನ್ನೂ ತೆಗೆದು ಸಿಎಂ ಆಗುವ ಆಸೆ ನಮ್ಮಲ್ಲಿ ಇಲ್ಲ: ಎಂ.ಬಿ.ಪಾಟೀಲ್
Vijayapura: ಮಹಾನಗರ ಪಾಲಿಕೆಯಲ್ಲಿ ರಾತೋರಾತ್ರಿ ಗಣೇಶ ಪ್ರತಿಷ್ಠಾಪನೆ
Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್ ವೆಲೋಡ್ರೋಮ್
Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ
MUST WATCH
ಹೊಸ ಸೇರ್ಪಡೆ
Form a New committee: 103 ಎ ದರ್ಜೆ ದೇಗುಲಗಳಿಗಿಲ್ಲ ವ್ಯವಸ್ಥಾಪನ ಸಮಿತಿ
Darshan, ಸುದೀಪ್ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು
TAX ಸಮಪಾಲು ಕೊಡಿ: ಕೇಂದ್ರಕ್ಕೆ ಆಗ್ರಹ; ತೆರಿಗೆ ಪಾಲನ್ನು ಶೇ. 50ಕ್ಕೆ ಏರಿಸಲು ಒತ್ತಾಯ
Mescom: ವಿದ್ಯುತ್ ಬಾಕಿ ಉಳಿಸಿಕೊಂಡಿರುವ ಸರಕಾರಿ ಸಂಸ್ಥೆಗಳು
Uppinangady: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.