![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 12, 2020, 9:58 AM IST
ವಿಜಯಪುರ : ಕೋವಿಡ್-19 ಲಾಕ್ ಡೌನ್ ತುರ್ತು ನಿರ್ಬಂಧದ ಹಿನ್ನಲೆ ನಗರದಲ್ಲಿ ಇರುವ ಸರಕಾರಿ ಆಸ್ಪತ್ರೆಯನ್ನು ರಾತ್ರೋರಾತ್ರಿ ಕೋವಿಡ್-19 ಆಸ್ಪತ್ರೆಯಾಗಿ ಪರಿವರ್ತನೆ ಮಾಡಲಾಗಿದೆ. ನಗರದ ಕೆಲ ಬಡಾವಣೆಗಳನ್ನು ಏಕಾಏಕಿ ಸೀಲ್ ಡೌನ್ ಮಾಡಲಾಗಿದೆ.
ಶನಿವಾರ ಇದ್ದಕ್ಕಿಂತೆ ಕೋವಿಡ್-19 ಲಕ್ಷಣ ಇರುವ ವ್ಯಕ್ತಿಗಳ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡು ಬಂದಿದೆ. ಗಂಟಲು ದ್ರವ ಪರೀಕ್ಷೆಗೆ ಕಳಿಸಿದ 92 ಜನರಲ್ಲಿ 65 ವರದಿ ನೆಗೆಟಿವ್ ಬಂದಿದ್ದು, 27 ವರದಿಗಳ ನಿರೀಕ್ಷೆ ಇದೆ. ರೋಗ ಶಂಕಿತ 32 ಜನರನ್ನು ಐಸೋಲೇಶನ್ ನಲ್ಲಿ ಇರಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಶನಿವಾರ ಮಧ್ಯಾಹ್ನದಿಂದಲೇ ಜಿಲ್ಲಾಡಳಿತ ಧಾವಂತಕ್ಕೆ ಸಿಲುಕಿದ್ದು, ರಾತ್ರಿಯಿಂದಲೇ ಕೆಲವು ಬಡಾವಣೆಗಳನ್ನು ಸೀಲ್ ಡೌನ್ ಮಾಡಿದೆ. ಅಲ್ಲದೇ ಸೀಲ್ ಡೌ್ನ್ ಮಾಡಿರುವ ಬಡಾವಣೆಗಳ ಜನರು ಯಾರೂ ಮನೆಯಿಂದ ಹೊರಗೆ ಬರದಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಅಗತ್ಯ ವಸ್ತುಗಳನ್ನು ಮನೆಗೆ ತಲುಪಿಸುವುದಾಗಿ ಹೇಳಿದ್ದಾರೆ.
ಕೋವಿಡ್-19 ಆಸ್ಪತ್ರೆಯಾಗಿ ಜಿಲ್ಲಾಸ್ಪತ್ರೆ ಪರಿವರ್ತನೆ ಗೊಳ್ಳುತ್ತಲೇ ಸರ್ಕಾರಿ ಆಸ್ಪತ್ರೆಯಲ್ಲಿದ್ದ ರೋಗಿಗಳನ್ನು ರಾತ್ರೋ ರಾತ್ರಿ ನಗರದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಇದಲ್ಲದೇ ನಗರದ ಒಂದು ಖಾಸಗಿ ವೈದ್ಯಕೀಯ ಕಾಲೇಜು-ಆಸ್ಪತ್ರೆ, ಮತ್ತೊಂದು ಖಾಸಗಿ ಆಸ್ಪತ್ರೆ ಮೇಲೆ ತೀವ್ರ ನಿಗಾ ಇರಿಸಲಾಗಿದೆ.
ಮತ್ತೊಂದೆಡೆ ರೋಗ ಶಂಕಿತರು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬಂದಿರುವ ನಗಗರದ ಗೋಲಗುಮ್ಮಟ ಪ್ರದೇಶ, ಚಪ್ಪರ್ ಬಂದ್ ಕಾಲೋನಿ, ಬಡಿಕಮಾನ್ ಪ್ರದೇಶ ಸೇರಿದಂತೆ ಹಲವು ಬಡಾವಣೆಗಳನ್ನು ರಾತ್ರೋರಾತ್ರಿ ಸೀಲ್ ಡೌನ್ ಮಾಡಲಾಗಿದೆ.
ಸೀಲ್ ಡೌನ್ ಮಾಡಿದ ಬಡಾವಣೆಗಳಲ್ಲಿ 2000ಕ್ಕೂ ಅಧಿಕ ಕುಟುಂಬಗಳಿದ್ದು, 7-8 ಸಾವಿರ ಜನಸಂಖ್ಯೆ ಇದೆ. ಜಿಲ್ಲಾಸ್ಪತ್ರೆಯಲ್ಲಿ ಡಯಾಲಿಸಿಸ್ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ವ್ಯವಸ್ಥೆ ಮಾಡಲಾಗಿದೆ.
ಜಿಲ್ಲಾಡಳಿತದ ಸೂಚನೆ ಮೇರೆಗೆ ನಗರದಲ್ಲಿ ಪೊಲೀಸ್ ಕಟ್ಟೆಚ್ಚರ ವಹಿಸಲಾಗಿದೆ. ಲಾಕಡೌನ್ ಇದ್ದರೂ ನಗರದಲ್ಲಿ ಅನಗತ್ಯ ಓಡಾಡುತ್ತಿದ್ದರೂ ಪೊಲಿಸರು ಸುಮ್ಮನಿದ್ದರು. ಭಾನುವಾ ಬೆಳಿಗ್ಗೆಯಿಂದ ರಸ್ತೆಗೆ ಇಳಿಯುತ್ತಿರುವವರಿಗೆ ಪೊಲೀಸರು ಬೆತ್ತ ತೋರಿಸಿ ಎಚ್ಚರಿಕೆ ನೀಡುತ್ತಿದ್ದಾರೆ.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.