![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Nov 8, 2021, 5:25 PM IST
ವಿಜಯಪುರ : ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಘಟಿಕೋತ್ಸವ ದಲ್ಲಿ ಪಾಲ್ಗೊಳ್ಳಲು ವಿಜಯಪುರ ನಗರಕ್ಕೆ ಆಗಮಿಸಿದ್ದಾರೆ.
ಶಾಸಕ ಬಸನಗೌಡ ಪಾಟೀಲ ಯತ್ನಾಳ, ಕರ್ನಾಟಕ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಡಾ.ತುಳಸಿಮಾಲಾ ಇವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಗೆ, ಹೂಗುಚ್ಛ ನೀಡಿ ಸ್ವಾಗತಿಸಿದರು.
ಸೋಮವಾರ ಸಂಜೆ ವಿಜಯಪುರ ನಗರಕ್ಕೆ ಆಗಮಿಸಿರುವ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ನ. 9 ರಂದು ನಡೆಯಲಿರುವ ಮಹಿಳಾ ವಿವಿ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲು ವಿಜಯಪುರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್, ಸೋಮವಾರ ಸಂಜೆ ನಗರದಲ್ಲಿರುವ ಗೋಲಗುಮ್ಮಟ, ಬಾರಾಕಮಾನ್ ವಿಶ್ವವಿಖ್ಯಾತ ಐತಿಹಾಸಿಕ ಸ್ಮಾರಕ ವೀಕ್ಷಣೆ ಮಾಡಲಿದ್ದಾರೆ.
ರಾಜ್ಯಪಾಲ ಗೆಹ್ಲೋಟ್ ನಗರದಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅತಿಥಿ ಗೃಹದಿಂದ ಗೋಲಗುಮ್ಮಟ ಸ್ಮಾರಕ ವೀಕ್ಷಣೆ ಹಿನ್ನೆಲೆಯಲ್ಲಿ ಗೋಲಗುಮ್ಮಟದ ವರೆಗೂ ಝಿರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿದೆ.
ರಾಜ್ಯಪಾಲರು ಸಂಚರಿಸುವ ರಸ್ತೆಯಲ್ಲಿ ಝಿರೋ ಟ್ರಾಫಿಕ್ ಜೊತೆಗೆ ಮಾರ್ಗದುದ್ದಕ್ಕೂ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
ರಾಜ್ಯಪಾಲರು ಪೊಲೀಸ್ ಭದ್ರತೆಯಲ್ಲಿ ಗೋಲಗುಮ್ಮಟ ವೀಕ್ಷಣೆಗೆ ಮಾಡಲಿದ್ದಾರೆ. ರಾಜ್ಯಪಾಲರ ಭೇಟಿ ಹಿನ್ನೆಲೆಯಲ್ಲಿ ಕರ್ನಾಟಕ ರಾಜಭವನದ ಸಿಬ್ಬಂದಿ ಹಾಗೂ ಇತರೆ ಅಧಿಕಾರಿಗಳು, ಮಹಿಳಾ ವಿಶ್ವವಿದ್ಯಾಲಯದ ಅಧಿಕಾರಿಗಳು ಸ್ಥಳದಲ್ಲಿದ್ದು, ಪರಿಸ್ಥಿತಿ ಮೇಲೆ ನಿಗಾ ಇರಿಸಿದ್ದಾರೆ.
ರಾಜ್ಯಪಾಲರ ವೀಕ್ಷಣೆ ಹಿನ್ನೆಲೆಯಲ್ಲಿ ಗೋಲಗುಮ್ಮಟ ಪ್ರವೇಶ ದ್ವಾರದ ವರೆಗೂ ರಾಜ್ಯಪಾಲರ ವಾಹನ ಸಾಗಿದೆ.
ರಾಜ್ಯಪಾಲರು ನಗರದ ಐತಿಹಾಸಿಕ ಸ್ಮಾರಕಗಳ ವೀಕ್ಷಣೆ ಸಂದರ್ಭದಲ್ಲಿ ಮಾಧ್ಯಮದವರು ಸೇರಿದಂತೆ ಸಾರ್ವಜನಿಕರಿಗೆ ಗೋಲಗುಮ್ಮಟ ಆವರಣ ಪ್ರವೇಶಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದೆ.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.